Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಜೆಐ ಮಿಶ್ರಾ ವಿರುದ್ಧ ವಾಗ್ದಂಡನೆ:...

ಸಿಜೆಐ ಮಿಶ್ರಾ ವಿರುದ್ಧ ವಾಗ್ದಂಡನೆ: ಕಾಂಗ್ರೆಸ್ ಪ್ರಸ್ತಾವ

ವಾರ್ತಾಭಾರತಿವಾರ್ತಾಭಾರತಿ27 March 2018 11:38 PM IST
share
ಸಿಜೆಐ ಮಿಶ್ರಾ ವಿರುದ್ಧ ವಾಗ್ದಂಡನೆ: ಕಾಂಗ್ರೆಸ್ ಪ್ರಸ್ತಾವ

ಹೊಸದಿಲ್ಲಿ,ಮಾ.27: ಭಾರತದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧ ವಾಗ್ದಂಡನೆಗಾಗಿ ಮಹಾಭಿಯೋಗ ಕಲಾಪಗಳಿಗೆ ಚಾಲನೆ ನೀಡಲು ಕಾಂಗ್ರೆಸ್ ಪಕ್ಷವು ಸಜ್ಜಾಗುತ್ತಿದೆ. ಅದು ಈಗಾಗಲೇ ನ್ಯಾ.ಮಿಶ್ರಾ ವಿರುದ್ಧ ಮಹಾಭಿಯೋಗ ಸೂಚನೆ ಯನ್ನು ಮಂಡಿಸಲು ಕರಡು ಪ್ರಸ್ತಾವವೊಂದನ್ನು ಪ್ರತಿಪಕ್ಷಗಳಿಗೆ ವಿತರಿಸಿದೆ.

ಹಿರಿಯ ಕಾಂಗ್ರೆಸ್ ನಾಯಕರು ಈಗಾಗಲೇ ಕರಡು ಮಹಾಭಿಯೋಗ ಸೂಚನೆಗೆ ಸಹಿ ಹಾಕಿದ್ದು, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ವು ಅದನ್ನು ಬೆಂಬಲಿಸಲು ನಿರ್ಧರಿಸಿದೆ ಎಂದು ಎನ್‌ಸಿಪಿ ನಾಯಕ ಹಾಗೂ ಹಿರಿಯ ನ್ಯಾಯವಾದಿ ಮಜೀದ್ ಮೆಮನ್ ಅವರು ಸುದ್ದಿಸಂಸ್ಥೆಗೆ ತಿಳಿಸಿದರು.

ಮಹಾಭಿಯೋಗ ಸೂಚನೆಗೆ ಸಂಬಂಧಿಸಿದಂತೆ ಕಾರ್ಯತಂತ್ರ ವನ್ನು ರೂಪಿಸಲು ಕಾಂಗ್ರೆಸ್ ಪಕ್ಷವು ಹಲವಾರು ಆಂತರಿಕ ಸಭೆಗಳನ್ನು ನಡೆಸುತ್ತಿದೆ ಮತ್ತು ಸಮಾನ ಮನಸ್ಕ ರಾಜಕೀಯ ಪಕ್ಷಗಳ ಬೆಂಬಲವನ್ನು ಕೋರಿದೆ. ಕನಿಷ್ಠ 50 ಸಂಸದರ ಕಡ್ಡಾಯ ಸಹಿಗಳನ್ನು ಕ್ರೋಢೀಕರಿಸಲು ಕಾಂಗ್ರೆಸ್‌ಗೆ ಸಾಧ್ಯವಾದರೆ ಮುಂದಿನ ಕೆಲವು ದಿನಗಳಲ್ಲಿ ಎಡರಂಗ, ಎನ್‌ಸಿಪಿ, ಡಿಎಂಕೆ ಮತ್ತು ಇತರ ಪ್ರಾದೇಶಿಕ ಪಕ್ಷಗಳ ಬೆಂಬಲದೊಡನೆ ಸಂಸತ್ತಿನಲ್ಲಿ ಮಹಾಭಿಯೋಗ ಸೂಚನೆಯನ್ನು ಮಂಡಿಸಲು ಅದು ಸಜ್ಜಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿದವು.

 ಆಯ್ದ ನ್ಯಾಯಾಧೀಶರಿಗೆ ತನ್ನ ಸ್ವೇಚ್ಛಾನುಸಾರ ಪ್ರಕರಣಗಳನ್ನು ವಹಿಸಲು ಅಧಿಕಾರದ ದುರುಪಯೋಗವನ್ನು ನ್ಯಾ.ಮಿಶ್ರಾ ವಿರುದ್ಧ ಮಹಾಭಿಯೋಗ ಸೂಚನೆಯನ್ನು ಮಂಡಿಸಲು ಕಾರಣವೆಂದು ಕರಡು ಪ್ರಸ್ತಾವವು ಬಿಂಬಿಸಿದೆ.

ಮಂಗಳವಾರ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಬಿಜೆಪಿ ನಾಯಕ ನಳಿನ್ ಕೊಹ್ಲಿ ಅವರು, ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ಮಹಾಭಿಯೋಗ ಸೂಚನೆಯು ನ್ಯಾಯಾಂಗವನ್ನು ರಾಜಕೀಕರಿಸುವ ನೇರ ಮತ್ತು ಕೆಟ್ಟ ಕ್ರಮವಾಗಿದೆ. ಕರಡು ಪ್ರಸ್ತಾವವನ್ನು ಸಿದ್ಧಗೊಳಿಸಿರುವ ಸಮಯವನ್ನು ಪರಿಗಣಿಸಿದರೆ ಇದು 2019ರ ಲೋಕಸಭಾ ಚುನಾವಣೆಗಳಿಗೆ ಮುನ್ನ ರಾಜಕೀಯ ವಾಗಿ ಸಂವೇದನಾಶೀಲ ಪ್ರಕರಣಗಳಲ್ಲಿ ಮುಖ್ಯ ನ್ಯಾಯಮೂರ್ತಿಗಳ ಪಾತ್ರವನ್ನು ಹತ್ತಿಕ್ಕುವ ಕುತಂತ್ರವಾಗಿದೆ ಎಂದು ಆರೋಪಿಸಿದರು.

ಈ ವರ್ಷದ ಜನವರಿಯಲ್ಲಿ ಮುಖ್ಯ ನ್ಯಾಯಮೂರ್ತಿ ಮಿಶ್ರಾ ವಿರುದ್ಧ ಬಂಡೆದಿದ್ದ ಸರ್ವೋಚ್ಚ ನ್ಯಾಯಾಲಯದ ನಾಲ್ವರು ಅತ್ಯಂಂತ ಹಿರಿಯ ನ್ಯಾಯಾಧೀಶರು, ಅವರು ಮಹತ್ವದ ಪ್ರಕರಣಗಳನ್ನು ಆಯ್ದ ಕಿರಿಯ ನ್ಯಾಯಾಧೀಶರ ನೇತೃತ್ವದ ಪೀಠಗಳಿಗೆ ವಹಿಸುವ ಮುಲಕ ನಿರಂಕುಶತೆಯನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X