Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಎ. 1ರಂದು ಭೂಮಿಗೆ ಅಪ್ಪಳಿಸಲಿರುವ ಚೀನಾದ...

ಎ. 1ರಂದು ಭೂಮಿಗೆ ಅಪ್ಪಳಿಸಲಿರುವ ಚೀನಾದ ಬಾಹ್ಯಾಕಾಶ ನಿಲ್ದಾಣ?

ವಾರ್ತಾಭಾರತಿವಾರ್ತಾಭಾರತಿ28 March 2018 10:30 PM IST
share
ಎ. 1ರಂದು ಭೂಮಿಗೆ ಅಪ್ಪಳಿಸಲಿರುವ ಚೀನಾದ ಬಾಹ್ಯಾಕಾಶ ನಿಲ್ದಾಣ?

ಪ್ಯಾರಿಸ್, ಮಾ. 28: ನಿಯಂತ್ರಣ ಕಳೆದುಕೊಂಡಿರುವ ಚೀನಾದ ಬಾಹ್ಯಾಕಾಶ ನಿಲ್ದಾಣವು ಎಪ್ರಿಲ್ 1 ಅಥವಾ ಅದರ ಸುತ್ತಮುತ್ತ ಭೂಮಿಯತ್ತ ಧಾವಿಸಲಿದೆ ಹಾಗೂ ಈ ಪ್ರಕ್ರಿಯೆಯಲ್ಲಿ ಅದು ಹೋಳಾಗಲಿದೆ ಎಂದು ಐರೋಪ್ಯ ಬಾಹ್ಯಾಕಾಶ ಸಂಸ್ಥೆ ಹೇಳಿದೆ.

‘‘ಸುಮಾರು 7 ಟನ್ ಭಾರದ ಬಾಹ್ಯಾಕಾಶ ನಿಲ್ದಾಣವು ಅತ್ಯಂತ ವೇಗವಾಗಿ ಭೂಮಿಯ ವಾತಾವರಣದಲ್ಲಿ ಧಾವಿಸುವಾಗ ಉಂಟಾಗುವ ಶಾಖದಲ್ಲಿ ಅದರ ಹೆಚ್ಚಿನ ಭಾಗಗಳು ಉರಿದುಹೋಗಲಿವೆ’’ ಎಂದು ಅದು ಹೇಳಿಕೆಯೊಂದರಲ್ಲಿ ತಿಳಿಸಿದೆ.

‘ಟಿಯಾಂಗಾಂಗ್ 1’ (ಸ್ವರ್ಗದ ಅರಮನೆ) ಬಾಹ್ಯಾಕಾಶ ಪ್ರಯೋಗಾಲಯದ ಕೆಲವು ಅವಶೇಷಗಳು ಸಮುದ್ರಕ್ಕೆ ಅಥವಾ ಭೂಮಿಯ ಮೇಲೆ ಎಲ್ಲಾದರೂ ಬೀಳುವ ಸಾಧ್ಯತೆಯಿದೆ. ಆದರೆ, ಮಾನವರಿಗೆ ಹಾನಿಯಾಗುವ ಸಾಧ್ಯತೆ ಅತ್ಯಂತ ಕಡಿಮೆ ಎಂದು ಜರ್ಮನಿಯ ಡರ್ಮ್‌ಸ್ಟಾಟ್‌ನಲ್ಲಿರುವ ಐರೋಪ್ಯ ಬಾಹ್ಯಾಕಾಶ ಸಂಸ್ಥೆಯ ಬಾಹ್ಯಾಕಾಶ ಅವಶೇಷಗಳ ಪರಿಣತ ಸ್ಟಿಜನ್ ಲೆಮನ್ಸ್ ಹೇಳುತ್ತಾರೆ.

 ‘‘60 ವರ್ಷಗಳಿಗೂ ಹೆಚ್ಚಿನ ಬಾಹ್ಯಾಕಾಶ ಯಾನದ ಅವಧಿಯಲ್ಲಿ, ಈವರೆಗೆ ಇಂಥ ಸುಮಾರು 6,000 ನಿಯಂತ್ರಣ ಕಳೆದುಕೊಂಡಿರುವ ಬೃಹತ್ ಬಾಹ್ಯಾಕಾಶ ವಸ್ತುಗಳು ಭೂಮಿಗೆ ಅಪ್ಪಳಿಸಿವೆ. ಅವುಗಳ ಪೈಕಿ ಹೆಚ್ಚಿನವು ಉಪಗ್ರಹಗಳು ಮತ್ತು ರಾಕೆಟ್‌ನ ಮೇಲಿನ ಭಾಗಗಳು’’ ಎಂದು ಅವರು ಎಎಫ್‌ಪಿಗೆ ಹೇಳಿದ್ದಾರೆ.

‘‘ಇಂಥ ಒಂದು ಪ್ರಕರಣದಲ್ಲಿ, ಭೂಮಿಗೆ ಅಪ್ಪಳಿಸುತ್ತಿರುವ ವಸ್ತುವೊಂದ ಪುಡಿಯಾಗಿತ್ತು. ಅದರ ಒಂದು ತುಂಡು ವ್ಯಕ್ತಿಯೊಬ್ಬರಿಗೆ ಬಡಿದಿತ್ತು. ಆದರೆ, ಅದರಿಂದ ಆ ವ್ಯಕ್ತಿಯು ಗಾಯಗೊಂಡಿಲ್ಲ’’ ಎಂದು ಅವರು ಹೇಳಿದ್ದಾರೆ.

ಕಕ್ಷೆಯಲ್ಲಿ ನಿಲುಗಡೆಗೆ ಸಂಬಂಧಿಸಿದ ತಂತ್ರಜ್ಞಾನಗಳ ಪ್ರಾಯೋಗಿಕ ಪರೀಕ್ಷೆಗಳಿಗಾಗಿ ಚೀನಾವು ಈ ಬಾಹ್ಯಾಕಾಶ ನಿಲ್ದಾಣವನ್ನು 2011 ಸೆಪ್ಟಂಬರ್‌ನಲ್ಲಿ ಬಾಹ್ಯಾಕಾಶಕ್ಕೆ ಉಡಾಯಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X