Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೆರಿಗೆ ಬಾಕಿಯುಳಿಸಿದವರ ಹೆಸರು...

ತೆರಿಗೆ ಬಾಕಿಯುಳಿಸಿದವರ ಹೆಸರು ಬಹಿರಂಗಗೊಳಿಸಿದ ಐಟಿ ಇಲಾಖೆ

‘ಇದು ಅವಮಾನಿಸುವ ನೀತಿ’!

ವಾರ್ತಾಭಾರತಿವಾರ್ತಾಭಾರತಿ29 March 2018 10:30 PM IST
share
ತೆರಿಗೆ ಬಾಕಿಯುಳಿಸಿದವರ ಹೆಸರು ಬಹಿರಂಗಗೊಳಿಸಿದ ಐಟಿ ಇಲಾಖೆ

ಹೊಸದಿಲ್ಲಿ,ಮಾ.29: 490 ಕೋ.ರೂ.ಗಳ ಆದಾಯ ತೆರಿಗೆಯನ್ನು ಬಾಕಿಯುಳಿಸಿ ತಲೆಮರೆಸಿಕೊಂಡಿರುವ ಅಥವಾ ಬಾಕಿಯನ್ನು ತೀರಿಸಲು ಸಾಕಷ್ಟು ಆಸ್ತಿಯಿಲ್ಲ ಎಂದು ಹೇಳಿಕೊಂಡಿರುವ ದೇಶಾದ್ಯಂತದ 24 ಸುಸ್ತಿದಾರರ ಹೆಸರುಗಳನ್ನು ಆದಾಯ ತೆರಿಗೆ ಇಲಾಖೆಯು ಗುರುವಾರ ಬಹಿರಂಗಗೊಳಿಸಿದೆ.

ಸುಸ್ತಿದಾರರನ್ನು ಹೆಸರಿಸಿ ಅವರನ್ನು ಅವಮಾನಿಸುವ ತನ್ನ ನೀತಿಯ ಅಂಗವಾಗಿ ಇಲಾಖೆಯು ರಾಷ್ಟ್ರೀಯ ದಿನಪತ್ರಿಕೆಗಳಲ್ಲಿ ಅಂತಹ ಸುಸ್ತಿದಾರರ ಪಟ್ಟಿಯನ್ನೊಳಗೊಂಡಿರುವ ಜಾಹೀರಾತುಗಳನ್ನು ಪ್ರಕಟಿಸಿದೆ. ತಮ್ಮ ತೆರಿಗೆ ಬಾಕಿಗಳನ್ನು ತಕ್ಷಣವೇ ಪಾವತಿಸುವಂತೆ ಈ ಜಾಹೀರಾತಿನಲ್ಲಿ ಸುಸ್ತಿದಾರರಿಗೆ ಸೂಚಿಸಲಾಗಿದೆ.

ಸುಸ್ತಿದಾರ ಸಂಸ್ಥೆಗಳು ಅಥವಾ ವ್ಯಕ್ತಿಗಳ ಗುರುತುಗಳು, ನಿರ್ದೇಶಕರು ಮತ್ತು ಪಾಲುದಾರರ ಹೆಸರುಗಳು, ವಿಳಾಸ ಮತ್ತು ಬಾಕಿಯಿರುವ ತೆರಿಗೆ ಇತ್ಯಾದಿ ವಿವರಗಳನ್ನು ಈ ಜಾಹೀರಾತು ಒಳಗೊಂಡಿದೆ.

ಈ ಸುಸ್ತಿದಾರ ಸಂಸ್ಥೆಗಳು ಆಹಾರ ಸಂಸ್ಕರಣೆ, ಚಿನ್ನ-ಬೆಳ್ಳಿ ವ್ಯಾಪಾರ, ಸಾಫ್ಟ್‌ವೇರ್, ಮದ್ಯ ತಯಾರಿಕೆಯಂತಹ ಕ್ಷೇತ್ರಗಳಲ್ಲಿ ತೊಡಗಿಕೊಂಡಿದ್ದವು.

 86.27 ಕೋ.ರೂ.ಗಳ ಗರಿಷ್ಠ ಬಾಕಿಯು ದಿಲ್ಲಿಯ ಸ್ಟಾಕ್ ಗುರು ಕಂಪನಿ ಮತ್ತು ಅದರ ಪಾಲುದಾರ ಲೋಕೇಶ್ವರ ದೇವ್ ಹೆಸರಿನಲ್ಲಿದ್ದು, ತೆರಿಗೆದಾರ ತಲೆಮರೆಸಿಕೊಂಡಿದ್ದಾನೆ ಮತ್ತು ತೆರಿಗೆ ಪಾವತಿಗೆ ಸಾಕಷ್ಟು ಆಸ್ತಿಯನ್ನು ಹೊಂದಿಲ್ಲ ಎಂದು ಜಾಹೀರಾತು ರೂಪದ ನೋಟಿಸ್‌ನಲ್ಲಿ ಹೇಳಲಾಗಿದೆ. ಈ ಕಂಪನಿಯು 2009-10 ಮತ್ತು 2010-11ನೇ ಸಾಲಿ ನಿಂದಲೂ ತೆರಿಗೆಯನ್ನು ಬಾಕಿಯುಳಿಸಿಕೊಂಡಿದೆ. ಕೆಲವು ಸುಸ್ತಿದಾರರು 1989-90ನೇ ಸಾಲಿಗೆ ಪಾವತಿಸಬೇಕಿದ್ದ ತೆರಿಗೆಯನ್ನೂ ಬಾಕಿಯುಳಿಸಿದ್ದಾರೆ.

ಕೋಲ್ಕತಾದ ಅರ್ಜುನ ಸೋಂಕರ್ ಎಂಬಾತ 51.37 ಕೋ.ರೂ. ಮತ್ತು ಕಿಶನ್ ಶರ್ಮಾ ಎಂಬಾತ 47.52 ಕೋ.ರೂ.ತೆರಿಗೆ ಬಾಕಿಯುಳಿಸಿದ್ದು, ಇಬ್ಬರೂ ತಲೆಮರೆಸಿ ಕೊಂಡಿದ್ದಾರೆ.

ಅಹ್ಮದಾಬಾದ್, ಗುವಾಹಟಿ, ವಿಜಯವಾಡಾ, ನಾಸಿಕ್, ಸೂರತ್, ದಿಲ್ಲಿ, ವಡೋದರಾ, ಕೋಲ್ಕತಾದಂತಹ ನಗರಗಳ 24 ಸುಸ್ತಿದಾರರು ಈ ಪಟ್ಟಿಯಲ್ಲಿದ್ದಾರೆ.

ಸುಸ್ತಿದಾರರ ಕುರಿತು ಯಾವುದೇ ಮಾಹಿತಿಯದ್ದಲ್ಲಿ ಅವರನ್ನು ಪತ್ತೆ ಹಚ್ಚಲು ನೆರವಾಗುವಂತೆ ಜನರಲ್ಲಿ ಅರಿವು ಮೂಡಿಸಲು ಈ ಜಾಹೀರಾತನ್ನು ಪ್ರಕಟಿಸಲಾಗಿದೆ ಎಂದು ಹಿರಿಯ ಆದಾಯ ತೆರಿಗೆ ಅಧಿಕಾರಿಯೋರ್ವರು ತಿಳಿಸಿದರು.

ಇಲಾಖೆಯು ಕಳೆದ ಕೆಲವು ವರ್ಷಗಳಲ್ಲಿ ಇಂತಹ 96 ಸುಸ್ತಿದಾರ ಕಂಪನಿಗಳ ಹೆಸರುಗಳನ್ನು ಬಹಿರಂಗಗೊಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X