Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಏರ್‌ಫೋರ್ಸ್ ಕೇಂದ್ರಕ್ಕೆ ಭೂಸ್ವಾಧೀನ...

ಏರ್‌ಫೋರ್ಸ್ ಕೇಂದ್ರಕ್ಕೆ ಭೂಸ್ವಾಧೀನ ಮಾಡಿದ್ದ ಜಮೀನು ಹಿಂದಿರುಗಿಸಲು ಹೈಕೋರ್ಟ್ ನಕಾರ

ವಾರ್ತಾಭಾರತಿವಾರ್ತಾಭಾರತಿ29 March 2018 10:43 PM IST
share
ಏರ್‌ಫೋರ್ಸ್ ಕೇಂದ್ರಕ್ಕೆ ಭೂಸ್ವಾಧೀನ ಮಾಡಿದ್ದ ಜಮೀನು ಹಿಂದಿರುಗಿಸಲು ಹೈಕೋರ್ಟ್ ನಕಾರ

ಬೆಂಗಳೂರು, ಮಾ.29: ಜಾಲಹಳ್ಳಿ ಏರ್‌ಫೋರ್ಸ್ ಕೇಂದ್ರಕ್ಕೆ ಭೂಸ್ವಾಧೀನ ಮಾಡಿದ್ದ ಜಮೀನನ್ನು ಮೂರು ದಶಕದ ಬಳಿಕ ವಾಪಸ್ ನೀಡುವಂತೆ ಭೂಮಾಲಕ ಮಾಡಿದ್ದ ಮವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ಪೀಣ್ಯ ಗ್ರಾಮಕ್ಕೆ ಸೇರಿದ್ದ 5.20 ಎಕರೆಯು ಜಾಲಹಳ್ಳಿ ವಾಯುಪಡೆಗೆ 1986ರಲ್ಲಿ ಭೂಸ್ವಾಧೀನವಾಗಿತ್ತು. ಇದಕ್ಕಾಗಿ ಭೂಮಾಲಕ ರಾಧಾಕೃಷ್ಣಮೂರ್ತಿಗೆ ಅಂದೇ ಪರಿಹಾರವನ್ನು ನೀಡಲಾಗಿತ್ತು. ಆದರೆ, ಆ ಭೂಮಿಯನ್ನು ಬಳಕೆ ಮಾಡಿಕೊಳ್ಳದ ಕಾರಣ ಜಮೀನು ವಾಪಸ್ ನೀಡುವಂತೆ ಭೂಮಾಲಕ ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣೆ ವೇಳೆ ಕೋರ್ಟ್, ವಾಯುಪಡೆ ಹಾಗೂ ಬಿಡಿಎಗೆ ನೋಟಿಸ್ ನೀಡಿ ಸಮಜಾಯಿಷಿ ಕೇಳಿತ್ತು. ಇದಕ್ಕೆ ಎರಡೂ ಕಡೆಯಿಂದ ಲಿಖಿತವಾಗಿ ಹೇಳಿಕೆ ನೀಡಲಾಗಿದೆ. ಬಿಡಿಎ ಸಲ್ಲಿಸಿದ್ದ ಪ್ರಮಾಣಪತ್ರದಲ್ಲಿ ಸ್ವಾಧೀನ ಮಾಡಿಕೊಂಡಿದ್ದ ಜಮೀನಿಗೆ ಈ ಮೊದಲು ಪರಿಹಾರ ವಿತರಿಸಲಾಗಿದೆ. ಹೀಗಾಗಿ ತಾನು ವಶಕ್ಕೆ ಪಡೆಯಲಿರುವ ಜಮೀನಿನ ವ್ಯಾಜ್ಯ ವಾಯುಪಡೆಯೊಂದಿಗೆ ಇರಲಿದೆ ಎಂದು ಹೇಳಿತ್ತು.

ಇದನ್ನು ಪುರಸ್ಕರಿಸಿದ ಕೋರ್ಟ್ ಭೂಮಾಲಕರ ಪ್ರಸ್ತಾಪವನ್ನು ತಿರಸ್ಕರಿಸಿದೆ. ಅರ್ಜಿ ವಿಲೇವಾರಿ ವೇಳೆ ಕೋರ್ಟ್ ಭೂಮಾಲಕನಿಂದ ಜಮೀನು ಸ್ವಾಧೀನ ಪಡಿಸಿಕೊಂಡ ಬಳಿಕ ಪರಿಹಾರ ನೀಡಬೇಕು. ಇದನ್ನು ಪಡೆದಿದ್ದರೆ ಭೂಮಿಯನ್ನು ವಾಪಸ್ ನೀಡಲಾಗದು. ಆದರೆ, ಆ ಭೂಮಿ ಬಳಕೆ ಮಾಡಿಕೊಳ್ಳದಿದ್ದರೆ, ಕೆಲವೊಮ್ಮೆ ಹಿಂದಿರಿಗಿಸುವ ಸಾಧ್ಯತೆ ಇದೆ. ಸದರಿ ಪ್ರಕರಣದಲ್ಲಿ ವಾಯುಪಡೆಯ ಅಧಿಕಾರಿಗಳ ವಸತಿಗೆ ಜಾಗ ಬಳಸಿಕೊಂಡು ಇನ್ನೂ ಸ್ವಲ್ಪ ಭಾಗವನ್ನು ಉಳಿಸಿಕೊಂಡಿದ್ದರೂ, ಅದನ್ನು ಭೂಮಾಲಕನಿಗೆ ನೀಡಲಾಗದು ಎಂದು ಸ್ಪಷ್ಟಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X