Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ: ಜಾನಪದ ಸಂಭ್ರಮ, ಅಭಿನಂದನಾ...

ಮಂಡ್ಯ: ಜಾನಪದ ಸಂಭ್ರಮ, ಅಭಿನಂದನಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ29 March 2018 11:30 PM IST
share
ಮಂಡ್ಯ: ಜಾನಪದ ಸಂಭ್ರಮ, ಅಭಿನಂದನಾ ಕಾರ್ಯಕ್ರಮ

ಮಂಡ್ಯ, ಮಾ.29: ಜಾನಪದ ಸಾಹಿತ್ಯ ನೆಲದ ಸಂಸ್ಕೃತಿಯನ್ನು ಜೀವಂತವಾಗಿರಿಸಿದೆ. ಎಲ್ಲಾ ಸಾಹಿತ್ಯದ ಮೂಲ ಬೇರು ಜಾನಪದ ಹಾಡುಗಳಾಗಿವೆ ಎಂದು ಬಿಜೆಪಿ ನಗರಾಧ್ಯಕ್ಷ ಎಚ್.ಆರ್, ಅರವಿಂದ್ ಅಭಿಪ್ರಾಯಪಟ್ಟಿದ್ದಾರೆ.

ನಗರದ ಹರ್ಡೀಕರ್ ಭವನದಲ್ಲಿ ಸಿಂಧುಶ್ರೀ ಕಲಾ ಸಂಸ್ಥೆ ಗುರುವಾರ ಆಯೋಜಿಸಿದ್ದ ಜಾನಪದ ಸಿರಿ-ಸಂಭ್ರಮ-ಗೀತಗಾಯನ ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಾನಪದ ಹಾಡುಗಳು ಮನುಷ್ಯನ ಜೀವನ ಮತ್ತು ಪರಿಸರದ ಸೊಗಡನ್ನು ಪ್ರತಿಬಿಂಬಿಸುವ ತಾಯ್ತತದ ಸಾಹಿತ್ಯ ಸಂಪತ್ತಾಗಿದೆ, ನೆಲ-ಜಲ, ಮನುಷ್ಯನ ಹಾವಭಾವ, ಪ್ರಕೃತಿಯ ಸೌಂದರ್ಯವನ್ನು ಕಣ್ಣಿಗೆ ಕಟ್ಟುವಂತೆ ಚಿತ್ರಿಸಿದ್ದಾರೆ ಎಂದು ಅವರು ಹೇಳಿದರು.

ಮನಸಿನ ನೋವು ಮತ್ತು ಬೇಸರವನ್ನು ನೀಗಿಸಿ ಸುಜ್ಞಾನದ ಅರಳಿಸುವ ದಿವ್ಯೌಷಧವಾಗಿ ಜಾನಪದ ಹಾಡುಗಳು ಕಾರ್ಯನಿರ್ವಹಿಸುತ್ತವೆ. ಇಂತಹ ಜನಪದ ಹಾಡು, ಕಲೆಯನ್ನು ಉಳಿಸಿ ಬೆಳೆಸಬೇಕಾಗಿದೆ ಎಂದು ಅವರು ಸಲಹೆ ನೀಡಿದರು.

ಕೃಷಿಕ ಲಯನ್ಸ್ ಸಂಸ್ಥೆ ಪ್ರಧಾನ ಪೋಷಕ ಕೆ.ಟಿ.ಹನುಮಂತು ಮಾತನಾಡಿ, ಪಾಶ್ಚಾತ್ಯ ರಾಷ್ಟ್ರಗಳಂತೆ ದೇಶದಲ್ಲಿ ಜಾನಪದ ಸಾಹಿತ್ಯವನ್ನು ರಾಷ್ಟ್ರೀಯ ಸಂಪತ್ತು ಎಂದು ಘೋಷಿಸಿ ಪೋಷಿಸಬೇಕಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಜಾನಪದ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಜಾನಪದ ಹಿರಿಯ ಕಲಾವಿದರನ್ನು ರಾಜ್ಯ ಸರಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಬಿ.ಎಂ.ಅಪ್ಪಾಜಪ್ಪ ಮತ್ತು ಗಣ್ಯರು ಅಭಿನಂದಿಸಿದರು.

ಗಾಯಕರಾದ ಜಿ.ಆರ್.ಗಂಗಾಧರ್, ಚಂದ್ರಶೇಖರ ಗೊರವಾಲೆ, ರಾಜು ಸಂತೆಕಸಲಗೆರೆ, ದೇವರಾಜು ಕೊಪ್ಪ ಮತ್ತಿತರರು ಜನಪದಗೀತೆ, ಭಾವಗೀತೆ, ಹೋರಾಟಗೀತೆ,ತತ್ವಪದ ಗೀತೆಗಳನ್ನು ಹಾಡಿ ಸಭಿಕರನ್ನು ರಂಜಿಸಿದರು. ಚಲನಚಿತ್ರ ಹಾಸ್ಯ ನಟ ಮಂಡ್ಯ ಸತ್ಯ ಮತ್ತು ಶಿವಣ್ಣ ಅವರು ಹಾಸ್ಯ-ಲಾಸ್ಯ ಕಾರ್ಯಕ್ರಮ ಪ್ರಸ್ತುತಪಡಿಸಿದರು.

ಲೇಖಕ ಪ್ರೊ.ಜಿ,ಟಿ,ವೀರಪ್ಪ. ಸಂಸ್ಥೆಯ ಅಧ್ಯಕ್ಷ ಶಿವಣ್ಣ ಸಾದೊಳಲು, ಸೂನಗಹಳ್ಳಿ ಗ್ರಾಪಂ ಅಧ್ಯಕ್ಷ ನಾಗೇಂದ್ರ ಹೆಮ್ಮಿಗೆ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X