Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಪ್ರಿಲ್ 25: ಸಿಬಿಎಸ್‌ಇ 12ನೇ ತರಗತಿ...

ಎಪ್ರಿಲ್ 25: ಸಿಬಿಎಸ್‌ಇ 12ನೇ ತರಗತಿ ಅರ್ಥಶಾಸ್ತ್ರ ಮರುಪರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ30 March 2018 7:12 PM IST
share
ಎಪ್ರಿಲ್ 25: ಸಿಬಿಎಸ್‌ಇ 12ನೇ ತರಗತಿ ಅರ್ಥಶಾಸ್ತ್ರ ಮರುಪರೀಕ್ಷೆ

ಹೊಸದಿಲ್ಲಿ, ಮಾ.30: ಸಿಬಿಎಸ್‌ಇ 12ನೇ ತರಗತಿಯ ಅರ್ಥಶಾಸ್ತ್ರ ಮರುಪರೀಕ್ಷೆಯು ಎಪ್ರಿಲ್ 25ರಂದು ನಡೆಯಲಿದೆ. ಆದರೆ 10ನೇ ತರಗತಿಯ ಗಣಿತ ಮರುಪರೀಕ್ಷೆಯ ಬಗ್ಗೆ ಇನ್ನಷ್ಟೇ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದು ಕೇಂದ್ರ ಶಿಕ್ಷಣ ಕಾರ್ಯದರ್ಶಿ ಅನಿಲ್ ಸ್ವರೂಪ್ ಶುಕ್ರವಾರ ತಿಳಿಸಿದ್ದಾರೆ.

10ನೇ ತರಗತಿಯ ಪ್ರಶ್ನೆ ಪತ್ರಿಕೆಯು ಕೇವಲ ದಿಲ್ಲಿ ಮತ್ತು ಹರ್ಯಾಣದಲ್ಲಿ ಸೋರಿಕೆಯಾಗಿರುವ ಕಾರಣ ಮರುಪರೀಕ್ಷೆಯನ್ನು ದಿಲ್ಲಿ ಮತ್ತು ಹರ್ಯಾಣದಲ್ಲಿ ಮಾತ್ರ ನಡೆಸಲಾಗುವುದು. ಈ ಬಗ್ಗೆ ನಿರ್ಧಾರವನ್ನು ಮುಂದಿನ 15 ದಿನಗಳ ಒಳಗೆ ತೆಗೆದುಕೊಳ್ಳಲಾಗುವುದು. ಒಂದು ವೇಳೆ ಮರುಪರೀಕ್ಷೆ ನಡೆದರೆ ಅದು ಜುಲೈಯಲ್ಲಿ ನಡೆಯಲಿದೆ ಎಂದು ಸ್ವರೂಪ್ ತಿಳಿಸಿದ್ದಾರೆ.

ಹೊರದೇಶಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎಂಬ ಮಾಹಿತಿಯಿದೆ. ಹಾಗಾಗಿ ಅನಿವಾಸಿ ಭಾರತೀಯ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ನಡೆಸಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸೋರಿಕೆಯಾದ ಪತ್ರಿಕೆಯು ದಿಲ್ಲಿಯ ಕನಿಷ್ಟ ಒಂದು ಸಾವಿರ ವಿದ್ಯಾರ್ಥಿಗಳ ಕೈಸೇರಿದೆ ಎಂದು ಪೊಲೀಸರು ಅಂದಾಜಿಸಿದ್ದಾರೆ. ಮಾರ್ಚ್ 23ರಂದು ಸಿಬಿಎಸ್‌ಸಿಗೆ ಬಂದ ಫ್ಯಾಕ್ಸ್‌ನಲ್ಲಿ 12ನೇ ತರಗತಿಯ ಅರ್ಥಶಾಸ್ತ್ರ ಪ್ರಶ್ನೆ ಪತ್ರಿಕೆಯು ಸೋರಿಕೆಯಾಗಿರುವ ಬಗ್ಗೆ ಎಚ್ಚರಿಸಲಾಗಿತ್ತು. ಈ ಸೋರಿಕೆಯಲ್ಲಿ ದಿಲ್ಲಿಯ ಒಂದು ತರಬೇತಿ ಕೇಂದ್ರ ಮತ್ತು ಎರಡು ಶಾಲೆಗಳು ಶಾಮೀಲಾಗಿವೆ ಎಂದು ಫ್ಯಾಕ್ಸ್‌ನಲ್ಲಿ ಆರೋಪಿಸಲಾಗಿತ್ತು. ಅದರಂತೆ ಮಾರ್ಚ್ 28ರಂದು ಹತ್ತನೇ ತರಗತಿ ಗಣಿತದ ಪತ್ರಿಕೆಗಳು ವಾಟ್ಸ್‌ಆ್ಯಪ್‌ನಲ್ಲಿ ಸೋರಿಕೆಯಾಗಿತ್ತು. ಪರೀಕ್ಷೆಗೆ ಹತ್ತು ಗಂಟೆ ಮೊದಲೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದರೂ ಈ ಬಗ್ಗೆ ಯಾವುದೇ ಕ್ರಮವನ್ನು ತೆಗೆದುಕೊಳ್ಳಲಾಗಿರಲಿಲ್ಲ. ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಪೊಲೀಸರು 11 ಶಾಲಾ ವಿದ್ಯಾರ್ಥಿಗಳು ಮತ್ತು ಏಳು ಪ್ರಥಮ ವರ್ಷದ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 25 ಜನರ ವಿಚಾರಣೆ ನಡೆಸಿದ್ದಾರೆ.

ಇದೇ ಮೊದಲ ಬಾರಿ ಸಿಬಿಎಸ್‌ಇ ಪರೀಕ್ಷಾ ಮೇಲ್ವಿಚಾರಕರ ವಿಚಾರಣೆ ನಡೆಸಲಾಗಿದೆ. ಘಟನೆಗೆ ಸಂಬಂಧಿಸಿ ಜಾರ್ಖಂಡ್‌ನಲ್ಲಿ ಆರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X