Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನ್ನ ಬಾಗಿಲಿಗೆ ಪೊಲೀಸರು ಬಂದು...

ತನ್ನ ಬಾಗಿಲಿಗೆ ಪೊಲೀಸರು ಬಂದು ನಿಲ್ಲುವಾಗಲೇ ಆತನಿಗೆ ಗೊತ್ತಾಗಿದ್ದು ತಾನು 'ಭಯೋತ್ಪಾದಕ' ಎಂದು !

ಹೀಗೊಂದು ಹೊಸ ಟೆರರಿಸ್ಟ್ ಕತೆ

ವಾರ್ತಾಭಾರತಿವಾರ್ತಾಭಾರತಿ30 March 2018 7:52 PM IST
share
ತನ್ನ ಬಾಗಿಲಿಗೆ ಪೊಲೀಸರು ಬಂದು ನಿಲ್ಲುವಾಗಲೇ ಆತನಿಗೆ ಗೊತ್ತಾಗಿದ್ದು ತಾನು ಭಯೋತ್ಪಾದಕ ಎಂದು !

ಶ್ರೀನಗರ, ಮಾ. 30 : ಆತನ ಅಂಗಡಿ ಬಾಗಿಲಿಗೆ ಪೊಲೀಸರು ಬಂದು ನಿಲ್ಲುವವರೆಗೆ ಆಖಿಬ್ ಫಾರೂಕ್ ಮೀರ್ ಗೆ ತಾನು 'ಹೊಸತಾಗಿ ಸೇರ್ಪಡೆಗೊಂಡ ಭಯೋತ್ಪಾದಕ' ಎಂಬುದೇ ಗೊತ್ತಿರಲಿಲ್ಲ ! 

ಪೊಲೀಸರು ಬಂದು ಆಖಿಬ್ ನನ್ನು ಮತ್ತು ಅವರ ಮನೆಯವರನ್ನು ವಿವರವಾಗಿ ವಿಚಾರಣೆ ನಡೆಸಿದ ಬಳಿಕವೇ ಆತನಿಗೆ ಗೊತ್ತಾಗಿದ್ದು ಅಂಗಡಿ ಮಾಲಕನಾದ ತಾನು ಇದ್ದಕ್ಕಿದ್ದಂತೆ ಭಯೋತ್ಪಾದಕನಾಗಿಬಿಟ್ಟಿದ್ದೆ ಎಂದು !

ಆಗಿದ್ದಿಷ್ಟು. ಇಲ್ಲಿನ ಗಂದೇರ್ಬಲ್ ನ ಬೀಹಾಮ ಪ್ರದೇಶದಲ್ಲಿ ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡುತ್ತಿರುವ ಆಖಿಬ್ ಬಗ್ಗೆ ಸ್ಥಳೀಯರಲ್ಲಿ ಉತ್ತಮ ಅಭಿಪ್ರಾಯವಿದೆ. ಈವರೆಗೆ ಆತ ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗವಹಿಸಿದ ದಾಖಲೆಗಳೂ ಇಲ್ಲ. ಆದರೆ ಇದ್ದಕ್ಕಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಆಖಿಬ್ ನ ಚಿತ್ರ ಹರಡುತ್ತದೆ. ಅದರ ಜೊತೆ ಒಂದು ಸಂದೇಶ. ಆಖಿಬ್ ಉಗ್ರಗಾಮಿ ಸಂಘಟನೆಯೊಂದಕ್ಕೆ ಇತ್ತೀಚಿಗೆ ಸೇರ್ಪಡೆಯಾಗಿದ್ದಾರೆ ಎಂಬುದು ಆ ಸಂದೇಶದ ಸಾರಾಂಶ. ಹಾಗಾಗಿ ಆಖಿಬ್  ಫೋಟೋ ವೈರಲ್ ಆಗಲು ಹೆಚ್ಚು ಸಮಯ ಬೇಕಾಗಿರಲಿಲ್ಲ. ಆದರೆ ಆಖಿಬ್ ಮತ್ತು ಅವರ ಮನೆಯವರಿಗೆ ಮಾತ್ರ ಈ ವಿಷಯ ಗೊತ್ತೇ ಆಗಿಲ್ಲ.

ಸಾಮಾಜಿಕ ಜಾಲತಾಣಗಳಲ್ಲಿ ಆಖಿಬ್ ಕುರಿತ ಸಂದೇಶ ನೋಡಿದ ಪೊಲೀಸರು ಅವರನ್ನು ಹುಡುಕಿಕೊಂಡು ಅಂಗಡಿಗೆ ಬಂದಿದ್ದಾರೆ. ಬಳಿಕ ವದಂತಿ ಕುರಿತು ಸಮಗ್ರ ವಿಚಾರಣೆ ನಡೆಸಿದ್ದಾರೆ. ವದಂತಿ ಸುಳ್ಳು ಎಂದು ಖಚಿತವಾದ ಮೇಲೆ ಆಖಿಬ್ ರನ್ನು ಅವರ ಪಾಡಿಗೆ ಬಿಟ್ಟು ಹೋಗಿದ್ದಾರೆ. ಆದರೆ ಈ ಪ್ರಕ್ರಿಯೆ ಮುಗಿಯುವಾಗ ಆಖಿಬ್ ಹಾಗು ಅವರ ಮನೆಯವರು ಕಂಗಾಲಾಗಿದ್ದಾರೆ. ಎಲ್ಲೆಡೆಯಿಂದ ಸಂಬಂಧಿಕರ, ಮಿತ್ರರ ಕರೆಗಳು ಬಂದಿವೆ. 

ಬಳಿಕ ತನಿಖೆ ನಡೆಸಿದ ಪೊಲೀಸರಿಗೆ ದುರುದ್ದೇಶದಿಂದಲೇ ಆಖಿಬ್ ಫೋಟೊವನ್ನು ಸುಳ್ಳು ಸುದ್ದಿ ಜೊತೆ ವಾಟ್ಸ್ಆ್ಯಪ್ ಹಾಗು ಫೇಸ್ ಬುಕ್ ಗಳಲ್ಲಿ ಹರಡಲಾಗಿತ್ತು ಎಂದು ತಿಳಿದು ಬಂದಿದೆ. ಪ್ರಕರಣದಲ್ಲಿ ಓರ್ವ ಆರೋಪಿ ಮಂಝುರ್ ಅಹ್ಮದ್ ಘನಿ ಎಂಬಾತನನ್ನು ಬಂಧಿಸಲಾಗಿದೆ. ಇಂತಹ ವದಂತಿಕೋರರ ವಿರುದ್ಧ ಅತ್ಯಂತ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X