Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಓದುಗರ ಅಭಿರುಚಿಗನುಗುಣವಾಗಿ ಪುಸ್ತಕ...

ಓದುಗರ ಅಭಿರುಚಿಗನುಗುಣವಾಗಿ ಪುಸ್ತಕ ಬರೆಯಬೇಕು: ದೊಡ್ಡರಂಗೇಗೌಡ

ವಾರ್ತಾಭಾರತಿವಾರ್ತಾಭಾರತಿ30 March 2018 8:28 PM IST
share
ಓದುಗರ ಅಭಿರುಚಿಗನುಗುಣವಾಗಿ ಪುಸ್ತಕ ಬರೆಯಬೇಕು: ದೊಡ್ಡರಂಗೇಗೌಡ

ಬೆಂಗಳೂರು, ಮಾ.30: ಈ ತಲೆಮಾರಿನವರು ಪುಸ್ತಕಗಳನ್ನು ರಸಿಕನಾಗಿ, ಆಕರ್ಷಿಣೀಯವಾಗಿ ಓದುಲು ಇಷ್ಟಪಡುತ್ತಾನೆ. ಹೀಗಾಗಿ, ಓದುಗರ ಅಭಿರುಚಿಗೆ ತಕ್ಕಂತೆ ಪುಸ್ತಕಗಳನ್ನು ಬರೆಯಬೇಕೆಂದು ಸಾಹಿತಿ ಡಾ.ದೊಡ್ಡರಂಗೇಗೌಡ ಸಲಹೆ ನೀಡಿದ್ದಾರೆ.

ಶುಕ್ರವಾರ ನಗರದ ಬಿ.ಪಿ ವಾಡಿಯಾ ಸಭಾಂಗಣದಲ್ಲಿ ಟೋಟಲ್ ಕನ್ನಡ ಪ್ರಕಾಶನ ಬಾಷಾ ಭಾವೈಕ್ಯ ಕಾವ್ಯ ಕವಿ ಕೂಟ ಸಹಕಾರದೊಂದಿಗೆ ಆಯೋಜಿಸಿದ್ದ ಲೇಖಕ ಶಾಂತಾರಾಮ ವಿ.ಶೆಟ್ಟಿ ಅವರ ‘ಸುಳ್ಳು ಹೇಳಿದ ಸತ್ಯ’ ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಕ್ಲಿಷ್ಟಕರ ಸಾಹಿತ್ಯದಿಂದ ಓದುಗರು ಪುಸ್ತಕಗಳಿಂದ ವಿಮುಖರಾಗುತ್ತಿದ್ದಾರೆ. ಹೀಗಾಗಿ ಓದುಗರ ಅಭಿರುಚಿಗೆ ತಕ್ಕಂತೆ ಪುಸ್ತಕಗಳನ್ನು ಬರೆಯಬೇಕು ಎಂದರು.

ಇಂದಿನ ಪೀಳಿಗೆ ಕ್ಲಿಷ್ಟಕರ ಕೃತಿಗಳನ್ನು ಓದಲು ಇಷ್ಟಪಡುವುದಿಲ್ಲ. ಓದುಗರನ್ನು ಹಿಡಿದಿಟ್ಟುಕೊಂಡು ಓದಿಸುವಂತ ಸಾಹಿತ್ಯವನ್ನು ಬೇಂದ್ರೆಯವರು ಬಳಸುತ್ತಿದ್ದರು. ಈ ಪರಂಪರೆಯನ್ನು ತಿನಂಶ್ರೀ, ಪಾ.ವೆಂ. ಆಚಾರ್ಯ, ಎಚ್.ಎಸ್.ಬಿಳಿಗಿರಿ, ವಿ.ಜಿ.ಭಟ್ ಮುಂದುವರೆಸಿದರು. ಲೇಖಕ ಶಾಂತಾರಾಮ ವಿ.ಶೆಟ್ಟಿ ಅವರ ಸುಳ್ಳು ಹೇಳಿದ ಸತ್ಯ ಈ ಕಾಲದ ಓದುಗರಿಗೆ ಓಯಸಿಸ್ ಆಗಿದೆ ಎಂದು ಅವರು ಹೇಳಿದರು.

ಸುಳ್ಳು ಹೇಳಿದ ಸತ್ಯ ಕೃತಿಯಲ್ಲಿ ಲೇಖಕರು ಆಡುಮಾತಿನ ಅನೇಕ ಅರ್ಥಗಳನ್ನು ತೆರೆದಿಟ್ಟಿದ್ದಾರೆ. ಈ ಕೃತಿಯು ನಾಟಕ, ರಂಗಭೂಮಿ, ಯಕ್ಷಗಾನದ ನೆರಳಿನಂತಿದೆ. ಕೃತಿಯಲ್ಲಿನ ವಿನೋಧಿಕ ಕಾವ್ಯಗಳು ಚಿಂತನಶೀಲವಾಗಿವೆ. ಇಲ್ಲಿ ಭಾವನತ್ಮಾಕವಾದ, ನಿರ್ಮಲವಾದ, ಸೂರ್ಯ ಮೂಡಿದ, ತಂಗಾಳಿ ಬೀಸಿದ ಹಾಗೆ ಕಾವ್ಯಗಳು ಮೂಡಿಬಂದಿವೆ. ಸಾರ್ವತ್ರಿಕ ಸತ್ಯಗಳನ್ನು ಹೇಳುವ ಮೂಲಕ ರೋಗಗ್ರಸ್ಥ ಸಮಾಜವನ್ನು ಜಾಗೃತಗೊಳಿಸಲು ಪ್ರಯತ್ನಪಟ್ಟಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಮುಂಬೈ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಡಾ.ಪೂರ್ಣಿಮಾ ಶೆಟ್ಟಿ ಮಾತನಾಡಿ, ನವೀರಾದ ಹಾಸ್ಯ, ವ್ಯಂಗ್ಯನುಡಿಗಳಿಂದ ಲೇಖಕರು ಸಮಾಜವನ್ನು ಬಡಿದ್ದೆಬ್ಬಿಸಿದ್ದಾರೆ. ಕೃತಿಯಲ್ಲಿರುವ ವ್ಯಾಖ್ಯೆಗಳು ಸಾಗರದಿಂದ ಮುತ್ತುಗಳನ್ನು ಹೆಕ್ಕಿ ತಂದಂತಿವೆ. ಓದುಗರನ್ನು ಚಿಂತನೆಗೆ ಹಚ್ಚುವ ಕಾವ್ಯ ಕೃತಿಯಲ್ಲಿದೆ ಎಂದು ವರ್ಣಿಸಿದರು.

ನಿರ್ದೇಶಕ ಟಿ.ಎಸ್.ನಾಗಾಭರಣ ಮಾತನಾಡಿ, ಪರರಿಗಾಗಿ ಸ್ಪಂದಿಸುವಂತ ಸಾಹಿತ್ಯ ಅತ್ಯಂತ ಅದ್ಭುತವಾದದು. ಹೃದಯದಿಂದ ಹೃದಯಕ್ಕೆ ತಲುಪುವ ಭಾಷೆ ಸಾಹಿತ್ಯ. ಆದರೆ ಇತ್ತೀಚಿನ ಕಾವ್ಯಲೋಕ ಗೊಂದಲಕ್ಕೆ ಸಿಲುಕಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಡಾ.ದೊಡ್ಡರಂಗೇಗೌಡರನ್ನು ಅಭಿನಂದಿಸಿ ಗೌರವಿಸಲಾಯಿತು. ಚುಟುಕು ಕವಿ ಎಚ್.ಡುಂಡಿರಾಜ್, ಲೇಖಕ ವೈ.ವಿ.ಗುಂಡೂರಾವ್, ಕವಿ ಪೇತ್ರಿ ವಿಶ್ವನಾಥ್ ಶೆಟ್ಟಿ, ಕಲಾವಿದ ಮೋಹನ್ ಮಾರ್ನಾಡ್, ಲೇಖಕ ಶಾಂತಾರಾಮ್ ವಿ.ಶೆಟ್ಟಿ ಸೇರಿದಂತೆ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X