Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ‘ರಾಯ್ಟರ್ಸ್’ ವರದಿಗಾರರ ಪರ...

‘ರಾಯ್ಟರ್ಸ್’ ವರದಿಗಾರರ ಪರ ವಾದಿಸಲಿದ್ದಾರೆ ಅಮಲ್ ಕ್ಲೂನಿ

ಮ್ಯಾನ್ಮಾರ್ ಸೇನಾ ದೌರ್ಜನ್ಯದ ಬಗ್ಗೆ ವರದಿ ಮಾಡಿದ್ದಕ್ಕೆ ಬಂಧನ

ವಾರ್ತಾಭಾರತಿವಾರ್ತಾಭಾರತಿ30 March 2018 11:51 PM IST
share
‘ರಾಯ್ಟರ್ಸ್’ ವರದಿಗಾರರ ಪರ ವಾದಿಸಲಿದ್ದಾರೆ ಅಮಲ್ ಕ್ಲೂನಿ

ನ್ಯೂಯಾರ್ಕ್, ಮಾ. 30: ಮ್ಯಾನ್ಮಾರ್‌ನಲ್ಲಿ ಬಂಧನದಲ್ಲಿರುವ ಇಬ್ಬರು ‘ರಾಯ್ಟರ್ಸ್’ ಪತ್ರಕರ್ತರ ಪರವಾಗಿ ವಾದಿಸಲು ಬ್ರಿಟಿಷ್-ಲೆಬನೀಸ್ ಮಾನವಹಕ್ಕುಗಳ ವಕೀಲೆ ಹಾಗೂ ಹಾಲಿವುಡ್ ನಟ ಜಾರ್ಜ್ ಕ್ಲೂನಿ ಪತ್ನಿ ಅಮಲ್ ಕ್ಲೂನಿ ಮುಂದೆ ಬಂದಿದ್ದಾರೆ.

ಮ್ಯಾನ್ಮಾರ್‌ನ ಪತ್ರಕರ್ತರಾದ ವಾ ಲೋನೆ ಮತ್ತು ಕ್ಯಾವ್ ಸೋ ಅವರನ್ನು ಕಳೆದ ವರ್ಷದ ಡಿಸೆಂಬರ್‌ನಲ್ಲಿ ಬಂಧಿಸಲಾಗಿತ್ತು. ಅವರ ವಿರುದ್ಧ ಸರಕಾರಿ ರಹಸ್ಯಗಳ ಕಾಯ್ದೆಯಡಿ ಮೊಕದ್ದಮೆ ದಾಖಲಿಸಲಾಗಿದೆ. ಅವರ ವಿರುದ್ಧದ ಆರೋಪಗಳು ಸಾಬೀತಾದರೆ, ಅವರು 14 ವರ್ಷಗಳವರೆಗೆ ಜೈಲು ಶಿಕ್ಷೆ ಎದುರಿಸುತ್ತಾರೆ.

ರೊಹಿಂಗ್ಯಾ ಮುಸ್ಲಿಮರ ವಿರುದ್ಧ ಮ್ಯಾನ್ಮಾರ್ ಸೇನೆ ನಡೆಸಿದ ದಮನ ಕಾರ್ಯಾಚರಣೆ ಮತ್ತು ಸೈನಿಕರು ನಡೆಸಿದ ದೌರ್ಜನ್ಯ ಮತ್ತು ಅತ್ಯಾಚಾರಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದ ‘ರಾಯ್ಟರ್ಸ್’ ಸುದ್ದಿ ಸಂಸ್ಥೆಯ ಪತ್ರಕರ್ತರನ್ನು ಬಂಧಿಸಲಾಗಿತ್ತು.

‘‘ವಾ ಲೋನೆ ಮತ್ತು ಕ್ಯಾವ್ ಸೋ ಸುದ್ದಿ ಪ್ರಸಾರ ಮಾಡಿದರು ಎಂಬ ಕಾರಣಕ್ಕಾಗಿ ಅವರನ್ನು ಶಿಕ್ಷಿಸಲಾಗುತ್ತಿದೆ. ಪ್ರಕರಣದ ಕಡತಗಳನ್ನು ನಾನು ಪರಿಶೀಲಿಸಿದ್ದೇನೆ. ಈ ಇಬ್ಬರು ಪತ್ರಕರ್ತರು ಅಮಾಯಕರು ಎನ್ನುವುದು ಸಂಶಯಾತೀತವಾಗಿ ಸ್ಪಷ್ಟವಾಗಿದೆ. ಹಾಗಾಗಿ, ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು’’ ಎಂದು ಅಮಲ್ ಕ್ಲೂನಿ ಹೇಳಿದ್ದಾರೆ.

‘‘ಇದರ ಹೊರತಾಗಿಯೂ ಅವರಿಗೆ ಜಾಮೀನು ನಿರಾಕರಿಸಲಾಗಿದೆ ಹಾಗೂ ಅವರು 14 ವರ್ಷ ಜೈಲು ಶಿಕ್ಷೆ ಎದುರಿಸುತ್ತಿದ್ದಾರೆ. ಈ ಪ್ರಕರಣದ ಫಲಿತಾಂಶವು, ಕಾನೂನಿನ ಆಡಳಿತ ಮತ್ತು ವಾಕ್ ಸ್ವಾತಂತ್ರಕ್ಕೆ ಮ್ಯಾನ್ಮಾರ್‌ನ ಬದ್ಧತೆಯೇನು ಎನ್ನುವುದನ್ನು ತಿಳಿಸಲಿದೆ’’ ಎಂದರು.

ಅಮಲ್ ಕ್ಲೂನಿ ಹಾಲಿವುಡ್ ನಟ ಹಾಗೂ ನಿರ್ಮಾಪಕ ಜಾರ್ಜ್ ಕ್ಲೂನಿಯನ್ನು 2014ರಲ್ಲಿ ವಿವಾಹವಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X