Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕ್ಯಾಲಿಫೋರ್ನಿಯ: ಕರಿಯ ಯುವಕನ ಹತ್ಯೆ...

ಕ್ಯಾಲಿಫೋರ್ನಿಯ: ಕರಿಯ ಯುವಕನ ಹತ್ಯೆ ಖಂಡಿಸಿ ಭಾರೀ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ31 March 2018 10:51 PM IST
share
ಕ್ಯಾಲಿಫೋರ್ನಿಯ: ಕರಿಯ ಯುವಕನ ಹತ್ಯೆ ಖಂಡಿಸಿ ಭಾರೀ ಪ್ರತಿಭಟನೆ

ಸ್ಯಾಕ್ರಮೆಂಟೊ (ಅಮೆರಿಕ), ಮಾ. 31: ಇತ್ತೀಚೆಗೆ ನಿರಾಯುಧ ಕರಿಯ ಯುವಕನೋರ್ವನನ್ನು ಪೊಲೀಸರು ಗುಂಡು ಹಾರಿಸಿ ಕೊಂದಿರುವುದನ್ನು ವಿರೋಧಿಸಿ ಕ್ಯಾಲಿಫೋರ್ನಿಯ ರಾಜಧಾನಿ ಸ್ಯಾಕ್ರಮೆಂಟೊದಲ್ಲಿ ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಸಿದರು.

ಆತನ ಬೆನ್ನಿಗೆ ಗುಂಡು ಹಾರಿಸಲಾಗಿದೆ ಎಂಬುದಾಗಿ ಮರಣೋತ್ತರ ಪರೀಕ್ಷೆ ವರದಿ ಹೇಳಿದೆ.

22 ವರ್ಷದ ಸ್ಟೀಫನ್ ಕ್ಲಾರ್ಕ್‌ರನ್ನು ಪೊಲೀಸರು ಉದ್ದೇಶಪೂರ್ವಕವಾಗಿ ಹಲವು ದಿನಗಳ ಹಿಂದೆ ಕೊಂದಿದ್ದಾರೆ ಎಂಬುದಾಗಿ ಸಿಟಿ ಹಾಲ್‌ನಲ್ಲಿ ನೆರೆದ ಪ್ರತಿಭಟನಕಾರರು ಆರೋಪಿಸಿದರು. ಯುವಕನ ಸಾವಿನ ಬಗ್ಗೆ ಪೊಲೀಸರು ನೀಡುತ್ತಿರುವ ಹೇಳಿಕೆಗೂ, ಮರಣೋತ್ತರ ಪರೀಕ್ಷೆಯ ವರದಿಗೂ ವ್ಯತ್ಯಾಸವಿರುವ ಹಿನ್ನೆಲೆಯಲ್ಲಿ ಯುವಕನ ನೆರೆಯವರು ಹಾಗೂ ಸ್ನೇಹಿತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕಪ್ಪು ಮುಸುಕುಗಳನ್ನು ಧರಿಸಿದ ಪ್ರತಿಭಟನಕಾರರು, ‘ನಮ್ಮನ್ನು ಗುಂಡು ಹಾರಿಸಿ ಕೊಲ್ಲಿ, ನಾವು ನಿಮ್ಮನ್ನು ಬಂದ್ ಮಾಡುತ್ತೇವೆ’ ಎಂಬುದಾಗಿ ಮೆಗಾಫೋನ್‌ನಲ್ಲಿ ಘೋಷಣೆಗಳನ್ನು ಕೂಗಿದರು.

ಮೃತಪಟ್ಟ ಯುವಕನ ಹೆಸರನ್ನು ಏಕಸ್ವರದಲ್ಲಿ ಕೂಗುತ್ತಾ ಪ್ರತಿಭಟನಕಾರರು ಸಿಟಿ ಹಾಲ್‌ನಲ್ಲಿ ನೆರೆದರು ಹಾಗೂ ಬಳಿಕ ಓಲ್ಡ್ ಸ್ಯಾಕ್ರಮೆಂಟೊದತ್ತ ತೆರಳಿದರು.

ನಿರಾಯುಧ ಕಪ್ಪು ವರ್ಣೀಯರನ್ನು ಪೊಲೀಸರು ಹತ್ಯೆ ನಡೆಸುತ್ತಿರುವುದು ಅಮೆರಿಕದಾದ್ಯಂತ ದೊಡ್ಡ ವಿವಾದವಾಗಿ ಪರಿಣಮಿಸಿದೆ. ಇದು ಅಮೆರಿಕದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ಇರುವ ತಾರತಮ್ಯವನ್ನು ತೋರಿಸುತ್ತದೆ ಎಂಬ ಆರೋಪಗಳು ಎದ್ದಿವೆ.

ಬೆನ್ನಿಗೆ ಗುಂಡು ಹಾರಿಸಿದ ಪೊಲೀಸರು: ಮರಣೋತ್ತರ ಪರೀಕ್ಷೆಯಲ್ಲಿ ಪತ್ತೆ

ಇಬ್ಬರು ಮಕ್ಕಳ ತಂದೆಯನ್ನು ಆತನ ಅಜ್ಜಿ ಮನೆಯ ಹಿತ್ತಲಲ್ಲಿ ಪೊಲೀಸರು ಗುಂಡು ಹಾರಿಸಿ ಕೊಂದಿದ್ದರು. ಆತನ ಬಳಿ ಬಂದೂಕು ಇದೆ ಎಂಬುದಾಗಿ ಭಾವಿಸಿ ಗುಂಡು ಹಾರಿಸಲಾಗಿತ್ತು ಎಂಬುದಾಗಿ ಪೊಲೀಸರು ಹೇಳಿದ್ದಾರೆ. ಆದರೆ, ಆತನ ಬಳಿಕ ಐಫೋನ್ ಮಾತ್ರ ಪತ್ತೆಯಾಗಿದೆ.

ಕ್ಲಾರ್ಕ್ ತಮ್ಮತ್ತ ಆಕ್ರಮಣಕಾರಿ ರೀತಿಯಲ್ಲಿ ಬಂದನು ಎಂಬುದಾಗಿ ಪೊಲೀಸರು ಹೇಳಿದ್ದಾರೆ. ಆದರೆ, ಸಾವಿನ ಬಗ್ಗೆ ಹೆತ್ತವರು ನಡೆಸಿದ ಖಾಸಗಿ ಮರಣೋತ್ತರ ಪರೀಕ್ಷೆಯ ವರದಿಯ ಪ್ರಕಾರ, ಆತನ ದೇಹದ ಒಳಗಿದ್ದ 8 ಗುಂಡುಗಳ ಪೈಕಿ ಯಾವುದನ್ನೂ ಎದುರಿನಿಂದ ಹಾರಿಸಲಾಗಿಲ್ಲ.

ಕ್ಲಾರ್ಕ್‌ಗೆ 6 ಬಾರಿ ಹಿಂಬದಿಯಿಂದ ಗುಂಡು ಹಾರಿಸಲಾಗಿದೆ ಎಂದು ಮರಣೋತ್ತರ ಪರೀಕ್ಷೆ ವರದಿ ತಿಳಿಸಿದೆ. ಇದು ಪೊಲೀಸರ ಹೇಳಿಕೆಗೆ ವಿರುದ್ಧವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X