Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಹಿಳಾ ಚಳವಳಿಗೆ ಯುವತಿಯರು ನಾಯಕತ್ವ...

ಮಹಿಳಾ ಚಳವಳಿಗೆ ಯುವತಿಯರು ನಾಯಕತ್ವ ವಹಿಸಬೇಕು: ಡಾ.ವಿಜಯಮ್ಮ

ವಾರ್ತಾಭಾರತಿವಾರ್ತಾಭಾರತಿ31 March 2018 10:59 PM IST
share
ಮಹಿಳಾ ಚಳವಳಿಗೆ ಯುವತಿಯರು ನಾಯಕತ್ವ ವಹಿಸಬೇಕು: ಡಾ.ವಿಜಯಮ್ಮ

ಬೆಂಗಳೂರು, ಮಾ.31: ಭಾರತೀಯ ಸಂದರ್ಭಕ್ಕೆ ಅಗತ್ಯವಾದ ಸ್ತ್ರೀವಾದವನ್ನು ನಾವು ಕಟ್ಟಿಕೊಳ್ಳಬೇಕು. ಹೀಗಾಗಿ, ಸಮಾಜದ ಆರೋಗ್ಯಕ್ಕಾಗಿ ನಡೆಯುವ ಎಲ್ಲ ರೀತಿಯ ಮಹಿಳಾ ಚಳವಳಿಗಳಿಗೆ ಯುವತಿಯರು ನಾಯಕತ್ವ ವಹಿಸಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತೆ ಡಾ.ವಿಜಯಮ್ಮ ಕರೆ ನೀಡಿದ್ದಾರೆ.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮುನ್ನಡೆ ಸಂಘಟನೆಯಿಂದ ನಗರದ ಜೈ ಭೀಮ್ ಭವನದಲ್ಲಿ ಆಯೋಜಿಸಿದ್ದ ‘ಮಹಿಳೆ, ಸಂಧಾನ ಮತ್ತು ಸಮಕಾಲೀನ ಸಂದರ್ಭ: ಯುವ ತಲೆಮಾರಿನ ದೃಷ್ಟಿಯಲ್ಲಿ ಯುವ ಮಹಿಳೆಯರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಆಧುನಿಕತೆಗೆ ತಕ್ಕ ರೀತಿಯಲ್ಲಿ ನಮ್ಮ ವಾದಗಳನ್ನು ಬದಲಿಸಿಕೊಂಡು ಮುನ್ನಡೆಯಬೇಕಿದೆ. ಅಲ್ಲದೆ, ಇಂದಿನ ಬಹುತೇಕ ಚಳವಳಿಗಳು ಹಿರಿಯರ ನಾಯಕತ್ವ ವಹಿಸಿಕೊಳ್ಳುತ್ತಿವೆ. ಹೀಗಾಗಿ, ಯುವ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಲ್ಲಿ ಮುಂದಿನ ಚಳವಳಿಯನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಇಂದು ದೇವದಾಸಿ ಮಹಿಳೆಯರ ಸ್ಥಿತಿ ಅತ್ಯಂತ ಶೋಚನೀಯವಾಗಿದೆ. ಅವರ ಮಕ್ಕಳನ್ನು ಶಾಲೆಗೆ ದಾಖಲಾಗುವಾಗ ತಂದೆಯ ಹೆಸರು ಹೇಳಲೇಬೇಕು ಎಂದು ಒತ್ತಾಯ ಮಾಡುವುದನ್ನು ನಾವು ಗಮನಿಸಿದ್ದು, ಇದು ಮಗು ಹಾಗೂ ತಾಯಿಯನ್ನು ಶೋಷಣೆ ಮಾಡಿದಂತಾಗುತ್ತದೆ. ನನ್ನ ಪತಿಯ ಹೆಸರು ಬರೆಯಲಿಲ್ಲ ಎಂಬ ಕಾರಣಕ್ಕೆ ಪಾಸ್‌ಪೋರ್ಟ್ ಸಿಗುವುದಿಲ್ಲ. ಇವೆಲ್ಲವೂ ಪುರುಷಾಧಿಪತ್ಯ ಸಮಾಜದ ಉದಾಹರಣೆಗಳಾಗಿವೆ ಎಂದು ಹೇಳಿದರು.

ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ಮಹಿಳೆಯರ ಶೀಲದೊಂದಿಗೆ ಸಮೀಕರಿಸುವುದು ಸರಿಯಲ್ಲ. ಎಲ್ಲಾ ಹೆಣ್ಣು ಮಕ್ಕಳು ಈ ಒತ್ತಡದಿಂದ ಹೊರಬರಬೇಕು. ಸಮಾಜ ಇವುಗಳನ್ನು ದೌರ್ಬಲ್ಯ ಎಂದು ಕರೆಯುತ್ತಿದೆ ನಾವು ಅದನ್ನು ದೌರ್ಬಲ್ಯ ಎಂದು ಪರಿಗಣಿಸದೆ ಅದನ್ನು ಧಿಕ್ಕರಿಸಿ ನಮ್ಮ ಶಕ್ತಿಯಿಂದ ಮುನ್ನಡೆಯಬೇಕು ಎಂದು ವಿಜಯಮ್ಮ ತಿಳಿಸಿದರು.

ಮಾಧ್ಯಮಗಳು ಉಳ್ಳವರ ಕೈಯಲ್ಲಿದ್ದು, ಮಹಿಳೆಯರ ವಿಷಯಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿಲ್ಲ. ನಾವು ಸಮಾಜವನ್ನು ಬದಲಾಯಿಸಲು ಮುಂದಾಗಿದ್ದು, ಎಲ್ಲರೂ ನಮಗೆ ಬೆಂಬಲ ನೀಡಬೇಕಿದೆ. ಈ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಅವರು ಕರೆ ನೀಡಿದರು.

ಜನಶಕ್ತಿ ಸಂಘಟನೆ ಸದಸ್ಯೆ ಗೌರಿ ಮಾತನಾಡಿ, ದಿಲ್ಲಿಯಲ್ಲಿರುವ ಮಹಿಳಾ ವಿಜ್ಞಾನಿಗಳು ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ತಡೆಯುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುವ ಸ್ಥಿತಿ ನಿರ್ಮಾಣವಾಗಿರುವುದು ಶೋಚನೀಯ. ಅಲ್ಲದೆ, ದೌರ್ಜನ್ಯ ಪ್ರಕರಣಗಳಲ್ಲಿ ಸಾಕ್ಷಿ ಕೊರತೆ ನೆಪವೊಡ್ಡಿ ಪ್ರಕರಣಗಳನ್ನು ಖುಲಾಸೆ ಮಾಡುತ್ತಿರುವುದು ದೌರ್ಜನ್ಯಗಳು ಹೆಚ್ಚಾಗಲು ಪ್ರಮುಖ ಕಾರಣವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಯುವ ರೈತ ಸಂಘದ ನಳಿನಿ, ಮಂಜುಳಾ ಹುಲಿಕುಂಟೆ, ಮುಸ್ಲಿಂ ಮಹಿಳಾ ಆಂದೋಲನದ ನಸ್ರೀನ್, ವಕೀಲೆ ಸವಿತಾ ಹಾಗೂ ಮಂಜುಳಾ ತೆಲಗಡೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X