Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನೂತನ ವೆಬ್ ಪೋರ್ಟಲ್‌ಗೆ ಷೇರುದಾರರಿಗೆ...

ನೂತನ ವೆಬ್ ಪೋರ್ಟಲ್‌ಗೆ ಷೇರುದಾರರಿಗೆ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ31 March 2018 11:44 PM IST
share

ಬೆಂಗಳೂರು, ಮಾ.31: ಇಂಡಿಯನ್ ನ್ಯಾಷನಲ್ ಕೋ-ಅಪರೇಟಿವ್ ಸೊಸೈಟಿಯು ನೂತನ ವೆಬ್ ಪೋರ್ಟಲ್ ಆರಂಭಿಸಲಿದ್ದು, ಕರ್ನಾಟಕದಲ್ಲಿ ಸದಸ್ಯತ್ವ ಪಡೆಯಲು ಆಸಕ್ತಿಯುಳ್ಳವರು ಸೊಸೈಟಿಯ ಸದಸ್ಯರನ್ನು ಸಂಪರ್ಕ ಮಾಡಬಹುದು ಎಂದು ಸೊಸೈಟಿ ಮುಖಂಡ ವಿನೋದ್ ಚಾಂದ್ ತಿಳಿಸಿದ್ದಾರೆ.

ಶನಿವಾರ ಮಾತನಾಡಿದ ಅವರು, ದೇಶದ ಜನರ ಹಿತ ಕಾಯುವ, ಭ್ರಷ್ಟಾಚಾರ ಬಯಲಿಗೆಳೆಯುವ ಮಾಧ್ಯಮಗಳು ಬೇಕು. ಈ ನಿಟ್ಟಿನಲ್ಲಿ ಸಾಮೂಹಿಕ ಕೇಂದ್ರೀಕೃತ ಒಡೆತನದ ಸ್ವತಂತ್ರ ಮಾಧ್ಯಮ ಸಂಸ್ಥೆಯನ್ನು ಆರಂಭಿಸಲಾಗುತ್ತಿದೆ. ಅದಕ್ಕೆ ಷೇರುದಾರರು ಬೇಕಾಗಿದ್ದಾರೆ ಎಂದು ತಿಳಿಸಿದರು.

ಮಹಾರಾಷ್ಟ್ರ, ಕರ್ನಾಟಕ, ಕೇರಳ, ಉತ್ತರ ಪ್ರದೇಶ, ತಮಿಳುನಾಡು, ಗುಜರಾತ್ ಮತ್ತು ರಾಜಸ್ತಾನಗಳಲ್ಲಿ ಈ ವೆಬ್ ಪೋರ್ಟಲ್ ಆರಂಭಿಸಲು ಉದ್ದೇಶಿಸಲಾಗಿದೆ. ಸೊಸೈಟಿಯ ಸದಸ್ಯರಾಗಲು ಇಚ್ಛಿಸುವವರು 500 ರೂ. ಮೌಲ್ಯದ, ಅಂದರೆ 10 ರೂ. ಮುಖಬೆಲೆಯ 50 ಷೇರುಗಳನ್ನು ಕೊಳ್ಳಬೇಕು. ಇದು ಸ್ವಯಂ ನಿಧಿಯಿಂದ ನಡೆಯುವ ಸೊಸೈಟಿಯಾಗಿದ್ದು, ಇದರ ಚಟುವಟಿಕೆ ನಡೆಸಲು ದೇಣಿಗೆ ನೀಡಬೇಕಾಗುತ್ತದೆ. ಇದರಿಂದ ಸದಸ್ಯರಿಗೆ ಯಾವುದೇ ಲಾಭ ನೀಡಲಾಗುವುದಿಲ್ಲ ಎಂದು ಹೇಳಿದರು.

ಸದಸ್ಯರು ತನ್ನ ಹೆಸರಿನಲ್ಲಿ 1 ಲಕ್ಷ ರೂ. ಠೇವಣಿಯಿಟ್ಟು, ಅದರಿಂದ ಬರುವ ಬಡ್ಡಿಯನ್ನು ಸೊಸೈಟಿಗೆ ನೀಡಬಹುದು. ಒಂದು ವೇಳೆ ಹೊರಹೋಗಲು ಬಯಸಿದಲ್ಲಿ 6 ತಿಂಗಳು ಮುಂಚಿತವಾಗಿ ನೋಟಿಸ್ ನೀಡಬೇಕು. ಆ ಜಾಗಕ್ಕೆ ಬರುವ ಮತ್ತೊಬ್ಬರಿಗೆ ಷೇರುಗಳನ್ನು ವರ್ಗಾಯಿಸಲಾಗುತ್ತದೆ. ಒಟ್ಟಾರೆ ಜನರಿಗೆ ಸುದ್ದಿ ಮತ್ತು ಪೂರ್ವಗ್ರಹ ಮುಕ್ತ ವಿಶ್ಲೇಷಣೆ ನೀಡುವುದು ನಮ್ಮ ಗುರಿಯಾಗಿದೆ ಎಂದರು.

ಸೊಸೈಟಿಯು ಒಂದು ಸಾವಿರ ಶೇರುದಾರ ಸದಸ್ಯರನ್ನು ಹೊಂದಿರಲಿದ್ದು, ಅದರಲ್ಲಿ 900 ಮಂದಿ ಸಾಮಾನ್ಯ ಸದಸ್ಯರಿದ್ದರೆ, 100 ಮಂದಿ ಪತ್ರಕರ್ತ ಶೇರುದಾರರಾಗಿರುತ್ತಾರೆ. ಇವರು ಮಾಡುವ ಪೂರ್ಣಾವಧಿ ಅಥವಾ ಅಲ್ಪಾವಧಿ ಕೆಲಸಕ್ಕೆ ಮಾರುಕಟ್ಟೆ ದರದಲ್ಲಿ ವೇತನ ಪಡೆಯಲು ಅರ್ಹರಾಗಿರುತ್ತಾರೆ. ಅಲ್ಲದೆ, ಸುದ್ದಿ ಮಾಧ್ಯಮವನ್ನು ನಡೆಸಲು ವೇತನ ಪಡೆಯುವ ಇನ್ನಷ್ಟು ನೌಕರರನ್ನು ನೇಮಕ ಮಾಡಿಕೊಳ್ಳುವ ಅವಕಾಶವಿದೆ. ಸೊಸೈಟಿಯು ಹಣಕಾಸಿನ ಅಗತ್ಯಗಳನ್ನು ಈಡೇರಿಸಿಕೊಳ್ಳುವ ಸಲುವಾಗಿ ವಿಶಿಷ್ಟವಾದ ಆರ್ಥಿಕ ಮಾದರಿಯನ್ನು ಅಳವಡಿಸಿಕೊಳ್ಳುತ್ತಾ, ತನ್ನ ಪ್ರಕಾಶನ ಮತ್ತು ಮಾಧ್ಯಮ ಕೆಲಸಕ್ಕಾಗಿ ಯಾವುದೇ ಜಾಹೀರಾತುಗಳನ್ನು ಅವಲಂಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಷೇರುದಾರರು ಚುನಾವಣಾ ಪ್ರಕ್ರಿಯೆಯ ಮೂಲಕ 20 ಜನರ ಮೇಲ್ವಿಚಾರಣಾ ಮಂಡಳಿಯನ್ನು ರಚಿಸಲಿದ್ದು, ಈ ಸಮಿತಿಯು ಸಂಪಾದಕ ಮಂಡಳಿಗೆ ನಿರ್ದಿಷ್ಟವಾದ ನಿರ್ದೇಶನ ನೀಡುತ್ತದೆ. ಸುದ್ದಿ ಹಾಗೂ ದೃಷ್ಟಿಕೋನಗಳ ಪರಿಣಾಮಕಾರಿ ಪ್ರಸರಣದ ಮೂಲಕ ಪ್ರಜಾತಂತ್ರವನ್ನು ರಕ್ಷಿಸುವ ಸೊಸೈಟಿಯ ಮೂಲ ಉದ್ದೇಶದಿಂದ ದೂರ ಸರಿಯದಂತೆ ಎಚ್ಚರ ವಹಿಸುವ ಕೆಲಸ ಈ ಮಂಡಳಿ ಮಾಡಲಿದೆ ಎಂದು ವಿವರಿಸಿದರು. ಸೊಸೈಟಿ ಷೇರುದಾರರಾಗಲು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ.ಸಂ.9902616196 ಸಂಪರ್ಕಿಸಬಹುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸೊಸೈಟಿಯ ಮುಖಂಡ ಮುತ್ತುರಾಜು, ರವಿನಾರಾಯಣ್, ದೇವೆಂದ್ರ ವರ್ಮ, ಪಿ.ಕೆ.ಸುದರ್ಶನ್, ವಿಜಯ್ ಗಾಯಕವಾಡ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X