Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರಾವಳಿಯ ಯೋಧ ಝುಬೈರ್ ರಿಗೆ ತವರಿನಲ್ಲಿ...

ಕರಾವಳಿಯ ಯೋಧ ಝುಬೈರ್ ರಿಗೆ ತವರಿನಲ್ಲಿ ಅದ್ಧೂರಿ ಸ್ವಾಗತ

ಲಷ್ಕರ್ ಉಗ್ರರನ್ನು ಸದೆಬಡಿದ ತಂಡದಲ್ಲಿದ್ದ ಸೈನಿಕ

ವಾರ್ತಾಭಾರತಿವಾರ್ತಾಭಾರತಿ1 April 2018 12:48 PM IST
share
ಕರಾವಳಿಯ ಯೋಧ ಝುಬೈರ್ ರಿಗೆ ತವರಿನಲ್ಲಿ ಅದ್ಧೂರಿ ಸ್ವಾಗತ

ಕಡಬ, ಎ.1. ಕಳೆದ ಫೆಬ್ರವರಿಯಲ್ಲಿ ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಉಗ್ರರನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿ ಊರಿಗೆ ಆಗಮಿಸಿದ ತುಳುನಾಡಿನ ವೀರ ಯೋಧನಿಗೆ ಹುಟ್ಟೂರ ಸನ್ಮಾನ ರವಿವಾರದಂದು ಆತೂರಿನಲ್ಲಿ ನಡೆಯಿತು.

ಫೆಬ್ರವರಿಯ ಎರಡನೇ ವಾರದಲ್ಲಿ ಜಮ್ಮು ಕಾಶ್ಮೀರದ ಕರಣ್ ನಗರಕ್ಕೆ ನುಗ್ಗಿದ್ದ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಹೊಡೆದುರುಳಿಸಿದ ತಂಡ ದಲ್ಲಿದ್ದ ಕಡಬ ತಾಲೂಕಿನ ಆತೂರು ಸಮೀಪದ ಬಜತ್ತೂರು ಗ್ರಾಮದ ನೇರೆಂಕಿಯ ಮೇಲೂರು ನಿವಾಸಿ ಸಮೂನ್ ಬ್ಯಾರಿ ಹಾಗೂ ಆಮಿನಮ್ಮ ದಂಪತಿಯ ದ್ವಿತೀಯ ಪುತ್ರ ಝುಬೈರ್ ಎಂ. ನೇರಂಕಿ ರವಿವಾರ ಹುಟ್ಟೂರಿಗೆ ಆಗಮಿಸಿದ್ದು, ಈ ಸಂದರ್ಭ ಸಾರ್ವಜನಿಕರು ಅವರನ್ನು ಮೆರವಣಿಗೆ ನಡೆಸಿ ಸನ್ಮಾನಿಸಿದರು.

ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿದ ಊರವರು ಸಂಭ್ರಮಾಚರಿಸಿದರು. ಕಟ್ಟಡವೊಂದರಲ್ಲಿ ಅವಿತು ಕುಳಿತು ಭಾರತೀಯ ಯೋಧರನ್ನು ಗುರಿಯಾಗಿಸಿ  ದಾಳಿ ನಡೆಸಿದ್ದ ಉಗ್ರರನ್ನು ಭಾರತದ ಸೈನಿಕರು ಹೊಡೆದುರುಳಿಸಿದ್ದರು. ಲಷ್ಕರ್ ಎ ತೊಯ್ಬಾ ಉಗ್ರಗಾಮಿ ಸಂಘಟನೆಯ ಕೆಲ ಉಗ್ರರು ನುಗ್ಗಿ ಅಲ್ಲಿದ್ದ ಸೈನಿಕರ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಹಲವು ಭಾರತೀಯ ಯೋಧರು ಹುತಾತ್ಮರಾಗಿದ್ದರು. ಇಂತಹ ಸನ್ನಿವೇಶದಲ್ಲೂ ಅಪಾಯಕಾರಿ ಹಾಗೂ ಅನಿರೀಕ್ಷಿತ ದಾಳಿ ಯಿಂದ ಕಂಗೆಡದ ಭಾರತದ ಸಿ.ಆರ್.ಪಿ.ಎಫ್ ಯೋಧರು ಎಲ್ಲಾ ದಾಳಿಗಳನ್ನು ಎದುರಿಸಿ ನಿಂತು ತಕ್ಕ ಉತ್ತರ ನೀಡುವ ಮೂಲಕ ಭಯೋತ್ಪಾದಕರನ್ನು ಸದೆ ಬಡಿದಿದ್ದರು.

ತನ್ನ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳೆನೇರಂಕಿಯಲ್ಲಿ ಪಡೆದಿದ್ದ ಝುಬೈರ್ ಪ್ರೌಢ ಶಿಕ್ಷಣವನ್ನು ರಾಮಕುಂಜದ ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆಯಲ್ಲಿ ಮುಗಿಸಿದ್ದರು. ನಂತರ ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಪಿಯು ಹಾಗೂ ಬಿ.ಬಿ.ಎಂ. ವ್ಯಾಸಂಗವನ್ನು ಮುಗಿಸಿ ದೇಶಸೇವೆಗೆ ತನ್ನನ್ನು ತಾನು ತೊಡಗಿಸಿಕೊಂಡ ಅವರು ಇದೀಗ ಮೊದಲ ಬಾರಿಗೆ ಹುಟ್ಟೂರಿಗೆ ಆಗಮಿಸಿದ್ದಾರೆ. ಶನಿವಾರ ರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ ಅವರು ರವಿವಾರ ಊರಿಗೆ ತಲುಪಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X