Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದತ್ತಾಂಶ ಕಳ್ಳತನ ತಡೆಯಲು ಭಾರತದಲ್ಲಿ...

ದತ್ತಾಂಶ ಕಳ್ಳತನ ತಡೆಯಲು ಭಾರತದಲ್ಲಿ ಸೂಕ್ತ ಕಾನೂನುಗಳಿಲ್ಲ: ತಜ್ಞರ ಅಭಿಮತ

ವಾರ್ತಾಭಾರತಿವಾರ್ತಾಭಾರತಿ1 April 2018 7:43 PM IST
share
ದತ್ತಾಂಶ ಕಳ್ಳತನ ತಡೆಯಲು ಭಾರತದಲ್ಲಿ ಸೂಕ್ತ ಕಾನೂನುಗಳಿಲ್ಲ: ತಜ್ಞರ ಅಭಿಮತ

 ಹೊಸದಿಲ್ಲಿ,ಎ.1: ಚೀನಾದ ನಂತರ ಅತ್ಯಂತ ಹೆಚ್ಚಿನ ಅಂತರ್ಜಾಲ ಬಳಕೆದಾರರು ಇರುವುದು ಭಾರತದಲ್ಲಿ. ಇಲ್ಲಿ 462.12 ಮಿಲಿಯ ಜನರು ಅಂತರ್ಜಾಲವನ್ನು ಬಳಸುತ್ತಿದ್ದಾರೆ. ಆದರೂ ದೇಶವು ದತ್ತಾಂಶಗಳ ರಕ್ಷಣೆ ಮತ್ತು ಖಾಸಗಿತನವನ್ನು ಕಾಯ್ದುಕೊಳ್ಳಲು ಸೂಕ್ತ ಕಾನೂನಿನ ಚೌಕಟ್ಟಿನ ಕೊರತೆಯನ್ನೆದು ರಿಸುತ್ತಿದೆ. ತ್ವರಿತವಾಗಿ ಅಭಿವೃದ್ಧಿಗೊಳ್ಳುತ್ತಿರುವ ಅಂತರ್ಜಾಲ ಕ್ಷೇತ್ರವನ್ನು ನಿಯಂತ್ರಿಸುವಲ್ಲಿ ಸದ್ಯದ ಕಾನೂನುಗಳು ಸಮರ್ಥ ವಾಗಿಲ್ಲ ಎಂದು ಸೈಬರ್ ಭದ್ರತಾ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದತ್ತಾಂಶ ಸೋರಿಕೆಯು ಆಡಳಿತ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೆ ವೇದಿಕೆ ಒದಗಿಸಿದ್ದರೆ, ಜನರು ಈಗ ತಮ್ಮ ಸಾಮಾಜಿಕ ಜಾಲತಾಣಗಳನ್ನು, ನಿರ್ದಿಷ್ಟವಾಗಿ ಫೇಸ್‌ಬುಕ್‌ನ್ನು ಪ್ರತಿದಿನ ಬ್ರೌಸ್ ಮಾಡುವ ತಮ್ಮ ಚಟವನ್ನು ಮರುಪರಿಶೀಲಿಸುವ ಅನಿವಾರ್ಯತೆಗೆ ಸಿಲುಕಿದ್ದಾರೆ.

ಮಾರ್ಚ್ ತಿಂಗಳ ಮಧ್ಯಭಾಗದಲ್ಲಿ ಬ್ರಿಟನ್‌ನ ಕೇಂಬ್ರಿಜ್ ಅನಲಿಟಿಕಾ(ಸಿಎ)ದ ಹಗರಣವು ಬಹಿರಂಗಗೊಳ್ಳುವುದ ರೊಂದಿಗೆ ಬಳಕೆದಾರರು ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ವೈಯಕ್ತಿಕ ಮಾಹಿತಿಗಳನ್ನು ಹಂಚಿಕೊಳ್ಳುವುದು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಸೃಷ್ಟಿಯಾಗಿದೆ. ಫೇಸ್ ಬುಕ್‌ನ 50 ಮಿಲಿಯ ಬಳಕೆದಾರರ ದತ್ತಾಂಶಗಳಿಗೆ ಕನ್ನ ಹಾಕಿದ್ದ ಅದು ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ, ಬ್ರೆಕ್ಸಿಟ್ ಪರ ಅಭಿಯಾನದಲ್ಲಿ ಮತ್ತು ಇತರ ರಾಷ್ಟ್ರಗಳಲ್ಲಿಯ ಚುನಾವಣೆಗಳಲ್ಲಿ ಪ್ರಭಾವ ಬೀರಲು ಅವುಗಳನ್ನು ಬಳಸಿಕೊಂಡಿದ್ದು ಈಗ ಗುಟ್ಟಾಗಿ ಉಳಿದಿಲ್ಲ.

ಜಾಗತಿಕವಾಗಿ ಚೀನಾದ ನಂತರ ಅತ್ಯಂತ ಹೆಚ್ಚು ಸಂಖ್ಯೆಯ ಅಂತರ್ಜಾಲ ಬಳಕೆದಾರರು ಭಾರತದಲ್ಲಿದ್ದಾರೆ. ಆದರೆ ಭಾರತದ ಮಾಹಿತಿ ತಂತ್ರಜ್ಞಾನ ಕಾಯ್ದೆ,2000 ಮತ್ತು 2008 ಹಾಗೂ 2011ರಲ್ಲಿ ಅದಕ್ಕೆ ತರಲಾಗಿರುವ ತಿದ್ದುಪಡಿಗಳು ಸಾಮಾಜಿಕ ಮಾಧ್ಯಮಗಳು ಮತ್ತು ಅಂತರ್ಜಾಲ ಸಂಬಂಧಿತ ಅಪರಾಧಗಳನ್ನು ನಿಯಂತ್ರಿಸಲು ಅಷ್ಟೊಂದು ಸೂಕ್ತವಾಗಿಲ್ಲ ಎಂದು ಸೈಬರ್ ಭದ್ರತೆ ಸಂಸ್ಥೆ ಅರ್ನ್ಸ್ಟ್ ಆ್ಯಂಡ್ ಯಂಗ್‌ನ ಪಾಲುದಾರ ಜಸ್ಪ್ರೀತ್ ಸಿಂಗ್ ಹೇಳಿದರು.

ಚೀನಾದಲ್ಲಿ 738.5 ಮಿಲಿಯ ಜನರು ಅಂತರ್ಜಾಲವನ್ನು ಬಳಸುತ್ತಿದ್ದರೆ ಮೂರನೆಯ ಸ್ಥಾನದಲ್ಲಿರುವ ಅಮೆರಿಕದಲ್ಲಿ ಅವರ ಸಂಖ್ಯೆ 286.94ರಷ್ಟಿದೆ.

ದತ್ತಾಂಶಗಳ ಸೋರಿಕೆಯನ್ನು ತಡೆಯಲು ಮತ್ತು ಖಾಸಗಿತನವನ್ನು ರಕ್ಷಿಸಲೆಂದೇ ನಿರ್ದಿಷ್ಟವಾದ ಕಾನೂನು ಭಾರತದಲ್ಲಿಲ್ಲ ಎಂದು ಸಿಂಗ್ ತಿಳಿಸಿದರು.

 ಮಾಹಿತಿ ತಂತ್ರಜ್ಞಾನ ಕಾಯ್ದೆಯು 10 ವರ್ಷಗಳಷ್ಟು ಹಳೆಯದಾಗಿರುವುದರಿಂದ ಸೈಬರ್ ಭದ್ರತೆಯನ್ನು ಕಾಯ್ದುಕೊಳ್ಳಲು ಅದು ಸರ್ವಶಕ್ತವಾಗಿದೆ ಎಂದು ನಿರೀಕ್ಷಿಸು ವುದು ತಪ್ಪಾಗುತ್ತದೆ ಎಂದು ಸೈಬರ್ ಕಾನೂನು ತಜ್ಞರೂ ಸರ್ವೋಚ್ಚ ನ್ಯಾಯಾಲಯದ ವಕೀಲರೂ ಆಗಿರುವ ಪವನ್ ದುಗ್ಗಲ್ ಹೇಳಿದರು.

ಸೈಬರ್ ಭದ್ರತೆಯಲ್ಲಿ ಬಹಳಷ್ಟು ಅಭಿವೃದ್ಧಿಗಳಾಗಿವೆ. ಅದರಂತೆ ಸೈಬರ್ ಭದ್ರತೆಯ ಉಲ್ಲಂಘನೆಯಲ್ಲಿಯೂ ಹೊಸಹೊಸ ತಂತ್ರಗಳು ಬಳಕೆಯಾಗುತ್ತಿವೆ. ಆದರೆ ನಮ್ಮ ಕಾನೂನು ಮಾತ್ರ ಎಲ್ಲಿತ್ತೋ ಅಲ್ಲಿಯೇ ಇದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X