Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪವಿತ್ರ ಭೂಮಿಯಲ್ಲಿ ಅಸಹಾಯಕರ ಹತ್ಯೆ...

ಪವಿತ್ರ ಭೂಮಿಯಲ್ಲಿ ಅಸಹಾಯಕರ ಹತ್ಯೆ ನಿಲ್ಲಲಿ: ಪೋಪ್ ಫ್ರಾನ್ಸಿಸ್‌ರಿಂದ ಈಸ್ಟರ್ ಸಂದೇಶ

ವಾರ್ತಾಭಾರತಿವಾರ್ತಾಭಾರತಿ1 April 2018 10:23 PM IST
share
ಪವಿತ್ರ ಭೂಮಿಯಲ್ಲಿ ಅಸಹಾಯಕರ ಹತ್ಯೆ ನಿಲ್ಲಲಿ: ಪೋಪ್ ಫ್ರಾನ್ಸಿಸ್‌ರಿಂದ ಈಸ್ಟರ್ ಸಂದೇಶ

ವ್ಯಾಟಿಕನ್ ಸಿಟಿ, ಎ. 1: ‘ಹೋಲಿ ಲ್ಯಾಂಡ್’ (ಯಹೂದಿಗಳು, ಕ್ರೈಸ್ತರು ಮತ್ತು ಮುಸ್ಲಿಮರು ಪವಿತ್ರ ಎಂಬುದಾಗಿ ಭಾವಿಸುವ ಇಸ್ರೇಲ್ ಮತ್ತು ಫೆಲೆಸ್ತೀನ್ ಭೂಭಾಗಗಳು)ನಲ್ಲಿ ಶಾಂತಿ ಸ್ಥಾಪನೆಗಾಗಿ ಪೋಪ್ ಫ್ರಾನ್ಸಿಸ್ ರವಿವಾರ ತನ್ನ ಈಸ್ಟರ್ ಸಂದೇಶದಲ್ಲಿ ಕರೆ ನೀಡಿದ್ದಾರೆ. ಅಲ್ಲಿ ನಡೆಯುತ್ತಿರುವ ಸಂಘರ್ಷಕ್ಕೆ ಅಸಹಾಯಕರು ಬಲಿಯಾಗುತ್ತಾರೆ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಇಸ್ರೇಲ್-ಗಾಝಾ ಗಡಿಯಲ್ಲಿ ಎರಡು ದಿನಗಳ ಹಿಂದೆ ನಡೆದ ಸಂಘರ್ಷದಲ್ಲಿ 15 ಫೆಲೆಸ್ತೀನೀಯರು ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಸಂದೇಶವು ಮಹತ್ವ ಪಡೆದುಕೊಂಡಿದೆ.

 ಸೇಂಟ್ ಪೀಟರ್ಸ್ ಬ್ಯಾಸಿಲಿಕದ ಮಧ್ಯದ ಬಾಲ್ಕನಿಯಿಂದ ನೀಡಿದ ‘ಉರ್ಬಿ ಎಟ್ ಒರ್ಬಿ’ (ನಗರಕ್ಕೆ ಮತ್ತು ಜಗತ್ತಿಗೆ) ಸಂದೇಶದಲ್ಲಿ ಪೋಪ್ ಈ ಮನವಿ ಮಾಡಿದ್ದಾರೆ. ಕೆಳಗಿನ ಪುಷ್ಪಾಲಂಕಾರಗೊಂಡ ಚೌಕದಲ್ಲಿ ಹತ್ತಾರು ಸಾವಿರ ಜನರು ಅವರ ಭಾಷಣವನ್ನು ಆಲಿಸಿದರು.

ಸಿರಿಯದಲ್ಲಿನ ‘ಹತ್ಯಾಕಾಂಡ’ವೂ ಕೊನೆಯಾಗಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು ಹಾಗೂ ಸಂಘರ್ಷಪೀಡಿತ ಪ್ರದೇಶಗಳಿಗೆ ಮಾನವೀಯ ನೆರವು ಸಲಕರಣೆಗಳು ತಲುಪಬೇಕು ಎಂದು ಅವರು ಕರೆ ನೀಡಿದರು.

ದಕ್ಷಿಣ ಸುಡಾನ್ ಮತ್ತು ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೊದಲ್ಲಿಯೂ ಶಾಂತಿ ನೆಲೆಸಬೇಕು ಎಂದು ಅವರು ಪ್ರಾರ್ಥಿಸಿದರು.

ಕಳೆದ ಶುಕ್ರವಾರ ನಡೆದ ಗಾಝಾ ಹಿಂಸಾಚಾರವನ್ನು ನೇರವಾಗಿ ಪ್ರಸ್ತಾಪಿಸಿದಂತೆ ಕಂಡುಬಂದ ಪೋಪ್, ಪವಿತ್ರ ಭೂಮಿಯಲ್ಲಿ ರಾಜಿಸಂಧಾನ ನಡೆಯಬೇಕು ಎಂದು ಕರೆ ನೀಡಿದರು.

‘‘ಈ ಈಸ್ಟರ್ ಸಂದರ್ಭದಲ್ಲಿ, ಎದ್ದು ಬಂದ ಕ್ರಿಸ್ತನ ಬೆಳಕು ಎಲ್ಲ ರಾಜಕೀಯ ಮತ್ತು ಸೇನಾ ನಾಯಕರ ಅಂತಃಸಾಕ್ಷಿಯನ್ನು ಬೆಳಗಲಿ ಹಾಗೂ ಎಲ್ಲಾ ಕಡೆ ನಡೆಯುತ್ತಿರುವ ಹತ್ಯಾಕಾಂಡ ಶೀಘ್ರ ಕೊನೆಯನ್ನು ಕಾಣಲಿ’’ ಎಂದು ಪೋಪ್ ಆಶಿಸಿದರು.

ಹತ್ಯೆಗಳ ತನಿಖೆ ನಿರಾಕರಿಸಿದ ಇಸ್ರೇಲ್

ಗಾಝಾ-ಇಸ್ರೇಲ್ ಗಡಿಯಲ್ಲಿ ಶುಕ್ರವಾರ ಫೆಲೆಸ್ತೀನೀಯರು ನಡೆಸಿದ ಬೃಹತ್ ಪ್ರತಿಭಟನೆಯ ವೇಳೆ ಇಸ್ರೇಲ್ ಸೈನಿಕರು ನಡೆಸಿದರು ಹತ್ಯೆಗಳ ಬಗ್ಗೆ ತನಿಖೆಯಾಗಬೇಕು ಎಂಬ ಕರೆಗಳನ್ನು ಇಸ್ರೇಲ್ ರಕ್ಷಣಾ ಸಚಿವರು ತಿರಸ್ಕರಿಸಿದ್ದಾರೆ.

 ಫೆಲೆಸ್ತೀನ್‌ನಲ್ಲಿರುವ ನಿರಾಶ್ರಿತರಿಗೆ ಇಸ್ರೇಲ್‌ನಲ್ಲಿರುವ ತಮ್ಮ ಮೂಲ ನೆಲೆಗಳಿಗೆ ಮರಳುವ ಅಧಿಕಾರ ನೀಡಬೇಕೆಂದು ಒತ್ತಾಯಿಸಿ ಹತ್ತಾರು ಸಾವಿರ ಫೆಲೆಸ್ತೀನೀಯರು ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆಯ ವೇಳೆ ಇಸ್ರೇಲ್ ಸೈನಿಕರು ನಡೆಸಿದ ಗೋಲಿಬಾರಿನಲ್ಲಿ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ.

ವಿಶ್ವಸಂಸ್ಥೆಯ ಮಹಾಕಾರ್ಯದರ್ಶಿ ಆಂಟೋನಿಯೊ ಗುಟರಸ್, ಐರೋಪ್ಯ ಒಕ್ಕೂಟದ ವಿದೇಶ ನೀತಿ ಮುಖ್ಯಸ್ಥೆ ಫೆಡರಿಕಾ ಮೊಗೆರಿನಿ ಹಾಗೂ ಇತರ ನಾಯಕರು ಹಿಂಸಾಚಾರದ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X