ಯಡಿಯೂರಪ್ಪ ಆಪ್ತ ಎಂ.ವೈ. ಪಾಟೀಲ್ ಕಾಂಗ್ರೆಸ್ ಸೇರ್ಪಡೆಗೆ ಸಿದ್ಧತೆ
![ಯಡಿಯೂರಪ್ಪ ಆಪ್ತ ಎಂ.ವೈ. ಪಾಟೀಲ್ ಕಾಂಗ್ರೆಸ್ ಸೇರ್ಪಡೆಗೆ ಸಿದ್ಧತೆ ಯಡಿಯೂರಪ್ಪ ಆಪ್ತ ಎಂ.ವೈ. ಪಾಟೀಲ್ ಕಾಂಗ್ರೆಸ್ ಸೇರ್ಪಡೆಗೆ ಸಿದ್ಧತೆ](https://www.varthabharati.in/sites/default/files/images/articles/2018/04/2/afjel.jpg)
ಕಲಬುರಗಿ, ಎ.2: ಜಿಲ್ಲೆಯ ಅಫ್ಜಲ್ಪುರ ಕ್ಷೇತ್ರದಲ್ಲಿ ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿದ್ದ ಎಂ.ವೈ.ಪಾಟೀಲ್ ಬಿಜೆಪಿ ತೊರೆದು ಕಾಂಗ್ರೆಸ್ಗೆ ಸೇರ್ಪಡೆಯಾಗಲು ಸಿದ್ಧರಾಗಿದ್ದಾರೆ.
ಕಾಂಗ್ರೆಸ್ನಿಂದ ಆರು ಬಾರಿ ಆಯ್ಕೆಯಾಗಿದ್ದ ಮಾಲೀಕಯ್ಯ ಗುತ್ತೇದಾರ್ ಇತ್ತೀಚೆಗೆ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ಗುತ್ತೇದಾರ್ ಬಿಜೆಪಿಗೆ ಬರುವುದಕ್ಕೆ ತನ್ನ ಅಭ್ಯಂತರವಿಲ್ಲ ಎಂದು ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಬಳಿ ಹೇಳಿದ್ದ ಪಾಟೀಲ್ ಕ್ಷೇತ್ರದ ಟಿಕೆಟ್ ಮಾತ್ರ ತನಗೆ ನೀಡಬೇಕೆಂದು ಒತ್ತಾಯಿಸಿದ್ದರು.
ಬಿಎಸ್ವೈ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಪಾಟೀಲ್ ಅವರು ಬಿಎಸ್ವೈ ಕೆಜೆಪಿ ಕಟ್ಟಿದಾಗ ಅವರೊಂದಿಗೆ ತೆರಳಿ ಕೆಜೆಪಿ ಅಭ್ಯರ್ಥಿಯಾಗಿ ಚುನಾವಣೆ ಸ್ಪರ್ಧಿಸಿದ್ದರು. ಗುತ್ತೇದಾರ್ ಬಿಜೆಪಿ ಸೇರ್ಪಡೆಯಾಗುವ ತನಕವೂ ಪಾಟೀಲ್ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿಯನ್ನು ತೊರೆಯಲು ನಿರ್ಧರಿಸಿರುವ ಪಾಟೀಲ್ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಪರಮೇಶ್ವರ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಶೀಘ್ರವೇ ಕಾಂಗ್ರೆಸ್ಗೆ ಸೇರ್ಪಡೆಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ.