Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋಮುಗಲಭೆ: ಪ.ಬಂಗಾಳ ಸರಕಾರಕ್ಕೆ...

ಕೋಮುಗಲಭೆ: ಪ.ಬಂಗಾಳ ಸರಕಾರಕ್ಕೆ ಎನ್‌ಆಚ್‌ಆರ್‌ಸಿ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ2 April 2018 9:35 PM IST
share
ಕೋಮುಗಲಭೆ: ಪ.ಬಂಗಾಳ ಸರಕಾರಕ್ಕೆ ಎನ್‌ಆಚ್‌ಆರ್‌ಸಿ ನೋಟಿಸ್

ಹೊಸದಿಲ್ಲಿ,ಎ.2:  ಕೋಮುಗಲಭೆ ಪೀಡಿತ ಪಶ್ಚಿಮಬಂಗಾಳದ ರಾಣಿಗಂಜ್ ಹಾಗೂ ಅಸಾನ್‌ಸೊಲ್ ಜಿಲ್ಲೆಗಳಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಹಿಂಸಾಚಾರದ ಘಟನೆಗಳಿಗೆ ಸಂಬಂಧಿಸಿ ತನಗೆ ವರದಿಯನ್ನು ಸಲ್ಲಿಸಬೇಕೆಂದು ರಾಷ್ಟ್ರೀಯ ಮಾನವಹಕ್ಕುಗಳ ಆಯೋಗವು ಸೋಮವಾರ ಪಶ್ಚಿಮಬಂಗಾಳ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

 ಕೋಮುಹಿಂಸಾಚಾರದ ಘಟನೆಗಳಿಗೆ ಸಂಬಂಧಿಸಿ ಸಮಿತಿಯೊಂದನ್ನು ರಚಿಸುವಂತೆ ಹಾಗೂ ಸ್ಥಳದಲ್ಲೇ ತನಿಖೆ ನಡೆಸುವಂತೆ ಆಯೋಗವು ಪ.ಬಂಗಾಳದ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ಕೂಡಾ ನೀಡಿದೆ.

ಮಾರ್ಚ್ 29ರಂದು ಪಶ್ಚಿಮ ಬುರ್ದವಾನ್ ಜಿಲ್ಲೆಯ ರಾಣಿಗಂಜ್ ಹಾಗೂ ಅಸನ್‌ಸೋಲ್ ನಗರಗಳಲ್ಲಿ ಕೋಮುಗಲಭೆ ಭುಗಿಲೆದ್ದಾಗ ಕೇಂದ್ರ ಸರಕಾರವು ಈ ಬಗ್ಗೆ ರಾಜ್ಯ ಸರಕಾರದಿಂದ ವರದಿಯನ್ನು ಕೇಳಿತ್ತು ಹಾಗೂ ಗಲಭೆ ನಿಯಂತ್ರಣಕ್ಕೆ ಅರೆಸೈನಿಕ ಪಡೆಗಳನ್ನು ಕಳುಹಿಸಿಕೊಡುವುದಾಗಿ ತಿಳಿಸಿತ್ತು. ಆದರೆ ಪ.ಬಂಗಾಳ ಸರಕಾರವು ಕೇಂದ್ರಕ್ಕೆ ವರದಿಯನ್ನು ಸಲ್ಲಿಸಿತ್ತಾದರೂ, ಅರೆಸೈನಿಕ ಪಡೆಗಳ ಕೊಡುಗೆಯನ್ನು ನಿರಾಕರಿಸಿತ್ತು. ಮಾರ್ಚ್ 26ರಂದು ರಾಣಿಗಂಜ್ ಹಾಗೂ ಅಸನ್‌ಸೋಲ್ ನಗರಗಳಲ್ಲಿ ರಾಮನವಮಿ ಮೆರವಣಿಗೆಯ ಬಳಿಕ ಭುಗಿಲೆದ್ದ ಹಿಂಸಾಚಾರದಲ್ಲಿ 12ಕ್ಕೂ ಅಧಿಕ ಮನೆಗಳನ್ನು ಸುಟ್ಟುಹಾಕಲಾಗಿತ್ತು ಹಾಗೂ ಅಂಗಡಿಗಳನ್ನು ಲೂಟಿಗೈಯಲಾಗಿತ್ತು.

  ರಾಣಿಗಂಜ್ ಹಾಗೂ ಅಸನ್‌ಸೋಲ್ ನಗರಗಳಲ್ಲಿ 144 ಎ ಸೆಕ್ಷನ್‌ನಡಿ ನಿಷೇಧಾಜ್ಞೆಯನ್ನು ಹೇರಲಾಗಿದ್ದರೂ, ಅಮಿತ್‌ಶಾ ನೇಮಿಸಿದ ನಾಲ್ವರು ಸದಸ್ಯರ ಬಿಜೆಪಿ ನಿಯೋಗವು ರವಿವಾರ ಗಲಭೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದೆ. ಗಲಭೆ ಸಂತ್ರಸ್ತರನ್ನು ಸಂದರ್ಶಿಸಿರುವ ನಿಯೋಗವು, ಈ ಬಗ್ಗೆ ಸಮಗ್ರ ವರದಿಯೊಂದನ್ನು ಪಕ್ಷದ ಅಧ್ಯಕ್ಷರಿಗೆ ಸಲ್ಲಿಸಿದೆ.

ಶನಿವಾರದಂದು ಪಶ್ಚಿಮ ಬಂಗಾಳದ ರಾಜ್ಯಪಾಲ ಕೇಶವನಾಥ್ ತ್ರಿಪಾಠಿ, ಅಸನ್‌ಸೋಲ್ ಹಾಗೂ ರಾಣಿಗಂಜ್‌ನ ಗಲಭೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು ಹಾಗೂ ಸಂತ್ರಸ್ತರು ಮತ್ತು ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದರು.

 ಆದಾಗ್ಯೂ ರಾಜ್ಯಪಾಲರು ತನ್ನ ನಾಲ್ಕೂವರೆ ತಾಸುಗಳ ಅವಧಿಯ ಪ್ರವಾಸದ ಸಂದರ್ಭದಲ್ಲಿ ಅಲ್ಪಸಂಖ್ಯಾತ ಪ್ರಾಬಲ್ಯದ ಪ್ರದೇಶಗಳಿಗೆ ಭೇಟಿ ನೀಡದಿರುವುದು ಭಾರೀ ವಿವಾದಕ್ಕೆ ಗ್ರಾಸವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X