Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲ: ಬಿವಿಟಿ ಬೇಸಿಗೆ ರಜಾ ಶಿಬಿರ...

ಮಣಿಪಾಲ: ಬಿವಿಟಿ ಬೇಸಿಗೆ ರಜಾ ಶಿಬಿರ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ2 April 2018 9:54 PM IST
share
ಮಣಿಪಾಲ: ಬಿವಿಟಿ ಬೇಸಿಗೆ ರಜಾ ಶಿಬಿರ ಉದ್ಘಾಟನೆ

ಮಣಿಪಾಲ, ಎ.2: ಪಠ್ಯ ಪುಸ್ತಕಗಳ ಓದಿನಿಂದಲೇ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಸಾಧ್ಯವಾಗದು. ಇದಕ್ಕಾಗಿ ವಿದ್ಯಾರ್ಥಿಗಳು ಪಠ್ಯ ಪುಸ್ತಕಗಳ ಅಧ್ಯಯನ ಜೊತೆಗೆ ಬಿಡುವಿನ ವೇಳೆಯಲ್ಲಿ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ರಜಾ ಶಿಬಿರಗಳಲ್ಲಿ ತರಗತಿಗಿಂತ ವಿಭಿನ್ನವಾದ ಕಲಿಕೆಯ ವಾತಾವರಣ ನಿರ್ಮಾಣವಾಗಬೇಕು. ಆಗ ಮಾತ್ರ ಈ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಆತ್ಮ ಸ್ಥೈರ್ಯ, ಹೊಂದಾಣಿಕೆಯ ಮನೋಭಾವ ಮೂಡಿಸಿ ಸಕಾರಾತ್ಮಕ ಚಿಂತನೆ ಇತ್ಯಾದಿ ಗುಣಗಳನ್ನು ಬೆಳೆಸಲು ಸಾಧ್ಯವಾಗುತ್ತದೆ ಎಂದು ಡಾ.ಟಿ.ಎಂ.ಎ.ಪೈ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ, ಶಿಕ್ಷಣ ತಜ್ಞ ಡಾ.ಮಹಾಬಲೇಶ್ವರ ರಾವ್ ಹೇಳಿದ್ದಾರೆ.

ಶಿವಳ್ಳಿಯ ಭಾರತೀಯ ವಿಕಾಸ ಟ್ರಸ್ಟಿನಲ್ಲಿ ಹೈಸ್ಕೂಲು ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ಬೇಸಿಗೆ ರಜಾ ಶಿಬಿರವನ್ನು ಸೋಮವಾರ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕೆಲವು ಶಾಲೆಗಳಲ್ಲಿ ವಿಪರೀತ ಶಿಸ್ತಿನ ವಾತಾವರಣ ಮೂಡಿಸಲಾಗುತ್ತಿದೆ. ಶಿಸ್ತಿನ ಹೆಸರಿನಲ್ಲಿ ವಿದ್ಯಾರ್ಥಿಗಳನ್ನು ಕೂಡಿ ಹಾಕುವುದು ಸಲ್ಲ. ವಿದ್ಯಾರ್ಥಿಗಳು ಶಿಸ್ತು ಬೆಳೆಸಿಕೊಳ್ಳಬೇಕಾದದ್ದು ನಮ್ಮ ವ್ಯವಹಾರದಲ್ಲಿ, ಮಾತಿನಲ್ಲಿ ಮತ್ತು ಜೀವನ ಶೈಲಿಯಲ್ಲಿ ಎಂದು ಡಾ.ರಾವ್ ಅಭಿಪ್ರಾಯಪಟ್ಟರು.

ಭಾರತೀಯ ವಿಕಾಸ ಟ್ರಸ್ಟಿನ ಆಡಳಿತ ಟ್ರಸ್ಟಿ ಕೆ.ಎಂ. ಉಡುಪ ಮಾತನಾಡಿ ರಜಾ ಶಿಬಿರದ ಧ್ಯೇಯೋದ್ದೇಶಗಳನ್ನು ವಿವರಿಸಿದರು. ಬಿವಿಟಿಯ ಮುಖ್ಯ ಕಾರ್ಯಕ್ರಮ ಸಂಯೋಜಕಿ ಲಕ್ಷ್ಮೀಬಾಯಿ ಅತಿಥಿಗಳನ್ನು ಸ್ವಾಗತಿಸಿದರು. ಬಿವಿಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೋಹರ ಕಟ್ಗೇರಿ ವಂದಿಸಿದರು.

ಆರು ದಿನಗಳ ರಜಾ ಶಿಬಿರದಲ್ಲಿ ಮಹಾನ್ ವ್ಯಕ್ತಿಗಳ ಪರಿಚಯ, ಪರಿಸರ, ನಮ್ಮ ಭೂಮಿ, ಮಾಧ್ಯಮ ಕಲಿಕೆ, ಸ್ಮರಣ ಶಕ್ತಿ, ರಂಗವಲ್ಲಿ, ಆರೋಗ್ಯ ಜಾಹೀರಾತು ವಿಶ್ಲೇಷಣೆ, ಹದಿಹರೆಯದ ಸಮಸ್ಯೆಗಳು, ಕಲಿಕಾ ತೊಂದರೆ ನಿವಾರಣೆ, ಚಿತ್ರಕಲೆ, ಸಂಪನ್ಮೂಲ ಸದ್ಬಳಕೆ, ಕೃಷಿಯಲ್ಲಿ ಅವಕಾಶಗಳು, ಗಾಂಧೀಜಿಯ ಪ್ರಸ್ತುತತೆ, ರಾಷ್ಟ್ರಗೀತೆ, ನಾಡಗೀತೆ ಗಾಯನ ತರಬೇತಿ, ಸಾಹಿತ್ಯಾಸಕ್ತಿ, ಹರಿಕಥೆ, ಕರಕುಶಲತೆ, 108 ವಾಹನ ಪ್ರಾತ್ಯಕ್ಷತೆ, ಪ್ರಥಮ ಚಿಕಿತ್ಸೆ, ಯೋಗಾಭ್ಯಾಸ ಇತ್ಯಾದಿ ವಿಷಯಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ, ಗುಂಪು ಚಟುವಟಿಕೆ, ಮಣಿಪಾಲ ಪ್ಲಾನೆಟೋರಿಯಂ, ಮ್ಯೂಜಿಯಂ ಭೇಟಿ ಇತ್ಯಾದಿ ಚಟುವಟಿಕೆಗಳನ್ನು ಆಯೋಜಿಸಲಾಗಿದೆ.

ಶಿಬಿರದಲ್ಲಿ ಒಟ್ಟು 45 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸುತ್ತಿದ್ದಾರೆ. ಈ ರಜಾ ಶಿಬಿರವನ್ನು ಬಿವಿಟಿ ಹಾಗೂ ಮಣಿಪಾಲದ ಅಕಾಡಮಿ ಆಫ್ ಜನರಲ್ ಎಜ್ಯುಕೇಶನ್ ಜಂಟಿಯಾಗಿ ಆಯೋಜಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X