Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ: ಪೊಲೀಸ್ ಧ್ವಜ ದಿನಾಚರಣೆ...

ದಾವಣಗೆರೆ: ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ2 April 2018 10:20 PM IST
share
ದಾವಣಗೆರೆ: ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ

ದಾವಣಗೆರೆ,ಎ.02: ನಿವೃತ್ತ ಪೊಲೀಸ್ ಸಿಬ್ಬಂದಿಗೆ ಆರೋಗ್ಯ ಭಾಗ್ಯ ಯೋಜನೆ ಜಾರಿಯಾಗಬೇಕು ಹಾಗೂ ನಿವೃತ್ತ ಪೊಲೀಸ್ ಸಿಬ್ಬಂದಿ ಮಕ್ಕಳಿಗೆ ಉದ್ಯೋಗ ಸಿಗುವಂತೆ ಸೇವೆಯಲ್ಲಿರುವ ಸಿಬ್ಬಂದಿ ಸಹಕಾರ ಮಾಡಬೇಕು ಎಂದು ಪೂರ್ವ ವಲಯದ ಐಜಿಪಿ ಕೆ.ವಿ. ಶರತ್‍ಚಂದ್ರ ಹೇಳಿದರು.

ಇಲ್ಲಿನ ಜಿಲ್ಲಾ ಪೋಲಿಸ್ ಕವಾಯತು ಮೈದಾನದಲ್ಲಿ ಸೋಮವಾರ ಜಿಲ್ಲಾ ಪೋಲಿಸ್ ವತಿಯಿಂದ ನಡೆದ 'ಪೋಲಿಸ್ ಧ್ವಜ' ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪೊಲೀಸರ ಕೆಲಸ ಸುಲಭದ ಕೆಲಸ ಎಂದು ಹಲವರು ಅಂದುಕೊಂಡಿರುತ್ತಾರೆ. ಆದರೆ, ನಿಜವಾಗಿಯು ಪೋಲಿಸರ ಕೆಲಸ ಸುಲಭವಲ್ಲ. ಅವರಿಗೆ ಸಾಕಷ್ಟು ಜವಾಬ್ದಾರಿಗಳಿರುತ್ತವೆ. ಕೇಸ್ ಡೈರಿ ಹಾಗೂ ಚಾರ್ಚ್‍ಶಿಟ್ ಸರಿಯಾಗಿ ಹೊಂದಿಸದಿದ್ದರೆ ಅಪರಾಧಿಗಳಿಗೆ ಆಗುವ ಶಿಕ್ಷೆ ತಪ್ಪುತ್ತದೆ. ಇಂತಹ ಜವಾಬ್ದಾರಿಯುತ ಕೆಲಸ ಮಾಡುವುದು ಸುಲಭದ ಕೆಲಸವಲ್ಲ ಎಂದ ಅವರು, ಪೊಲೀಸ್ ಅಧಿಕಾರಿಗಳು ತಮ್ಮ ಸ್ವಾರ್ಥಕ್ಕಾಗಿ ಕಾರ್ಯನಿರ್ವಹಿಸದೆ, ಗೌರಯುತವಾಗಿ ಸಮಾಜದ ಎದುರು ಜೀವಿಸುತ್ತಿದ್ದಾರೆ. ಹಲವಾರು ಪೊಲೀಸ್ ಅಧಿಕಾರಿಗಳು ಪರಿಸರಕ್ಕೆ ಪ್ರಾಮುಖ್ಯತೆ ನೀಡುವ ಸಲುವಾಗಿ ಹಲವಾರು ಗಿಡಗಳನ್ನು ನೆಟ್ಟಿದ್ದಾರೆ ಎಂದು ಹೇಳಿದರು.

ನಿವೃತ್ತ ಅಧಿಕಾರಿಗಳಿಗೆ ಗೌರವವನ್ನು ಎಲ್ಲರೂ ಸೂಚಿಸಬೇಕು. ಇಲಾಖೆಯಿಂದ ಏನನ್ನು ಮಾಡಲು ಸಾಧ್ಯವೊ ಅದೆಲ್ಲವನ್ನು ಮಾಡಿ ಕೊಡಲು ಅಧಿಕಾರಗಳು ಶ್ರಮಿಸಬೇಕು. ಕಛೇರಿಗೆ ನಿವೃತ್ತರು ಭೇಟಿ ಕೊಟ್ಟಾಗ ಅವರಿಗೆ ಗೌರವ ಪೂರ್ವಕವಾಗಿ ನಡೆದುಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಚೇತನ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪೊಲೀಸ್ ಹಾಗೂ ಸಾರ್ವಜನಿಕರ ನಡುವಿನ ಸಂಬಂಧ ಉತ್ತಮವಾಗಿದ್ದಾಗ ಸ್ವಸ್ಥ ಸಮಾಜ ನಿರ್ಮಾಣವಾಗುವುದು. ಭಾರತದಂತಹ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪೊಲೀಸ್ ಹಾಗೂ ಸಾರ್ವಜನಿಕರ ಸಂಬಂಧ ಸರಿಯಾಗಿದ್ದರೆ ಉತ್ತಮ ಸ್ವಸ್ಥ ಸಮಾಜ ನಿರ್ಮಾಣವಾಗುವುದು. ಪೊಲೀಸ್ ಅಧಿಕಾರಿಗಳು ನಿಷ್ಠೆಯಿಂದ ಸದಾ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದಕ್ಕೆ ನಿರತರಾಗುವಲ್ಲಿ ಸಾರ್ವಜನಿಕರ ಪಾತ್ರ ಮುಖ್ಯವಾಗುತ್ತದೆ ಎಂದು ಹೇಳಿದರು.

ಭಾರತದಲ್ಲಿ ಮೊದಲು ಪೋಲಿಸ್ ಧ್ವಜ ದಿನಾಚರಣೆ ಮಾಡಿದ್ದು 1965 ಏ.2 ರಂದು ಎಂದು ಹೇಳಿದ ಅವರು, ಧ್ವಜ ಮಾರಾಟದಿಂದ ಬಂದಂತಹ ಶೇ.50ರಷ್ಟು ಹಣವನ್ನು ನಿವೃತ್ತ ಪೋಲಿಸ್ ಅಧಿಕಾರಿಗಳ ಕಲ್ಯಾಣ ನಿಧಿಯಾಗಿ, ಶೇ.20ರಷ್ಟು ಹಣವನ್ನು ಈ ಘಟಕದ ಕಾರ್ಯನಿರತ ಪೋಲಿಸ್ ಕಲ್ಯಾಣನಿಧಿಗೆ, ಹಾಗೂ ಉಳಿದ ಶೇ.30ರಷ್ಟು ಹಣ ಕೇಂದ್ರ ಪೋಲಿಸ್ ಕಲ್ಯಾನ ನಿಧಿಗೆ ಸೇರಲಿದೆ. ಪೋಲಿಸ್ ಇಲಾಖೆಯಿಂದ ನಿವೃತ್ತ ಹೊಂದಿದ ಪೋಲಿಸ್ ಅಧಿಕಾರಿಗಳ ಆರೋಗ್ಯ ಹಾಗೂ ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ಈ ಹಣ ಸಲ್ಲಲಿದೆ ಎಂದು ತಿಳಿಸಿದ ಅವರು ಪೋಲಿಸ್ ಕಲ್ಯಾಣ ನಿಧಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಹೇಳಿದರು.

ನಿವೃತ್ತ ಸಹಾಯಕ ಪೋಲಿಸ್ ಉಪನಿರೀಕ್ಷಕ ರಾಮನಾಯ್ಕ ಮಾತನಾಡಿ, ರೆಡ್ ಡ್ರೆಸ್‍ನಲ್ಲಿ ಬಲಗೈ ಮುಂದೆ ಹೇಗೆ ಹೋಗುತ್ತದೆ. ಹಾಗೆಯೇ ನಿವೃತ್ತ ಪೊಲೀಸ್ ಅಧಿಕಾರಿಗಳು ತಮ್ಮ ವೃತ್ತಿ ಜೀವನದಲ್ಲಿ ಹಲವಾರಿ ಏಳು ಬೀಳುಗಳನ್ನು ಕಂಡು ಸಮಾಜದ ಹಿತಕ್ಕಾಗಿ ಶ್ರಮಿಸಿರುವವರು ಎಂದು ಹೇಳಿದರು.
ಪ್ರಸ್ತುತ ದಿನಗಳಲ್ಲಿ ಯುವ ಪೊಲೀಸ್ ಅಧಿಕಾರಿಗಳು ಕೆಲವು ವಿಷಯಗಳಲ್ಲಿ ಗರ್ವ ಬಂದಿರುವ ರೀತಿಯಲ್ಲಿ ವರ್ತಿಸುತ್ತಾರೆ. ಆದರೆ, ಶಿಸ್ತನ್ನು ಹಾಗೂ ಸಮಯ ಪಾಲನೆ ಮೊದಲು ಮಾಡುವುದನ್ನು ಕಲಿಯಬೇಕು. ಸಮಾಜದ ಜನರು, ನಿಮ್ಮನ್ನು ನೋಡುತ್ತಾರೆ ಅವರ ಎದುರು ಅಸಭ್ಯ ವರ್ತನೆ ಮಾಡುವುದು ಉತ್ತಮ ವಾತಾವರಣ ನಿರ್ಮಿಸದು ಎಂದು ಹೇಳಿದರು.

ಇದೇ ಸಂದರ್ಭ ನಿವೃತ್ತ ಪೋಲಿಸ್ ಅಧಿಕಾರಿಗಳಾದ ಹಾಲಪ್ಪ, ವಾಸುದೇವ, ಪಾರ್ವತಿ, ಹೆಚ್.ಕೆ. ರೇವಣ್ಣ, ಸಿದ್ದವೀರಯ್ಯ, ಗುರುಲಿಂಗಯ್ಯ, ಎಸ್.ಟಿ.ಪಿ.ಎನ್ ಶಾಸ್ತ್ರೀ, ರಾಜಶೇಖರ್, ನಾಗರಾಜ ಕರೋರೆ, ಎಂ. ಖಾಸೀಮ್ ಮತ್ತಿತರರಿಗೆ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X