Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೋಟರ್ ಐಡಿಗೆ ಆಧಾರ್ ಜೋಡಣೆ ಬೇಡ: ಸಚಿವ...

ವೋಟರ್ ಐಡಿಗೆ ಆಧಾರ್ ಜೋಡಣೆ ಬೇಡ: ಸಚಿವ ರವಿಶಂಕರ್ ಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ2 April 2018 10:34 PM IST
share
ವೋಟರ್ ಐಡಿಗೆ ಆಧಾರ್ ಜೋಡಣೆ ಬೇಡ: ಸಚಿವ ರವಿಶಂಕರ್ ಪ್ರಸಾದ್

ಹೊಸದಿಲ್ಲಿ, ಎ.2: ಆಧಾರ್ ಸಂಖ್ಯೆಯನ್ನು ಮತದಾರರ ಗುರುತುಚೀಟಿಯ ಜೊತೆ ಲಿಂಕ್ ಮಾಡುವುದಕ್ಕೆ ತನಗೆ ವೈಯಕ್ತಿಕವಾಗಿ ಒಲವಿಲ್ಲವೆಂದು ಕೇಂದ್ರ ವಿದ್ಯುನ್ಮಾನ, ಮಾಹಿತಿ ಹಾಗೂ ತಂತ್ರಜ್ಞಾನ ಸಚಿವ ರವಿಶಂಕರ್ ತಿಳಿಸಿದ್ದಾರೆ.

 ಆಧಾರ್ ಸಂಖ್ಯೆ ಹಾಗೂ ಮತದಾರರ ಗುರುತು ಚೀಟಿ ವಿಭಿನ್ನ ಉದ್ದೇಶಗಳಿಗಾಗಿ ಇರುವುದರಿಂದ ಅವುಗಳನ್ನು ಪರಸ್ಪರ ಜೋಡಿಸುವುದನ್ನು ತಾನು ಬಯಸುವುದಿಲ್ಲವೆಂದು ಅವರು ತಿಳಿಸಿದ್ದಾರೆ.

ರವಿಶಂಕರ್ ಪ್ರಸಾದ್ ಅವರು ರವಿವಾರ ಹೊಸದಿಲ್ಲಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡುತ್ತಾ, ಆಧಾರ್ ಸಂಖ್ಯೆಯನ್ನು ಮತದಾರರ ಗುರುತುಚೀಟಿ ಜೊತೆ ಜೋಡಿಸಬಾರದೆಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ಆದರೆ ಇದನ್ನು ನಾನು ಮಾಹಿತಿ ತಂತ್ರಜ್ಞಾನ ಸಚಿವನೆಂಬ ನೆಲೆಯಲ್ಲಿ ನಾನು ಈ ಮಾತನ್ನು ಹೇಳುತ್ತಿಲ್ಲ. ಎಂದರು.

ಒಂದು ವೇಳೆ ನಾವು ಆಧಾರ್‌ನ್ನು ಮತದಾರರ ಗುರುತುಚೀಟಿ ಜೊತೆ ಲಿಂಕ್ ಮಾಡಿದಲ್ಲಿ, ನಮ್ಮ ಟೀಕಾಕಾರರು ‘‘ ಪ್ರಧಾನಿ ನರೇಂದ್ರ ಮೋದಿ ನಾವು ಏನನ್ನು ತಿನ್ನುತ್ತೇವೆ ಹಾಗೂ ಯಾವ ಸಿನೆಮಾ ನೋಡುತ್ತಿದ್ದೇವೆ ಎಂಬ ಬಗ್ಗೆ ಬೇಹುಗಾರಿಕೆ ನಡೆಸುತ್ತಿದ್ದಾರೆಂದು ದೂರಲಿದ್ದಾರೆ. ಅದನ್ನು ನಾನು ಬಯಸುವುದಿಲ್ಲ’’ ಎಂದು ಸಚಿವರು ವ್ಯಂಗ್ಯವಾಡಿದರು.

        ‘‘ ಆಧಾರ್ ಹಾಗೂ ಮತದಾರರು ಗುರುತು ಚೀಟಿ ಎರಡೂ ವಿಭಿನ್ನ ವಲಯಗಳಲ್ಲಿ ಕಾರ್ಯಾಚರಿಸುತ್ತವೆ. ನೀವು ಮತಚಲಾಯಿಸಲು ಹೋದಾಗ ಆಧಾರ್ ಕಾರ್ಡ್‌ಪ್ರದರ್ಶಿಸಿದಲ್ಲಿ ನಿಮಗೆ ಮತಹಾಕಲು ಸಾಧ್ಯವಿಲ್ಲ. ಆಗ ನೀವು ಮತದಾರರ ಗುರುತುಚೀಟಿ ತೋರಿಸುವುದು ಅಗತ್ಯವಾಗಿರುತ್ತದೆ’’ ಎಂದು ರವಿಶಂಕರ್ ಹೇಳಿದರು.

ಮತದಾರರು ಗುರುತುಚೀಟಿ (ಎಪಿಕ್)ಗಳನ್ನು ಈಗ ಚುನಾವಣಾ ಆಯೋಗದ ವೆಬ್‌ಸೈಟ್ ಜೊತೆ ಸಂಪರ್ಕಿಸಲಾಗಿದ್ದು, ಇದು ಮತದಾರರಿಗೆ ಮತಗಟ್ಟೆಯ ವಿವರಗಳು ಸೇರಿದಂತೆ ಮತದಾನದ ಸಮಗ್ರ ಮಾಹಿತಿಯನ್ನು ಪಡೆಯಲು ನೆರವಾಗಲಿದೆಯೆಂದು ಪ್ರಸಾದ್ ಹೇಳಿದರು.

 ಆದಾಗ್ಯೂ ಐಟಿ ಸಚಿವರು ಬ್ಯಾಂಕ್ ಖಾತೆಗಳನ್ನು ಆಧಾರ್ ಸಂಖ್ಯೆ ಜೊತೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿರುವುದನ್ನು ಬೆಂಬಲಿಸಿದ್ದಾರೆ. ಇದರಿಂದಾಗಿ ವಿವಿಧ ಸಮಾಜಕಲ್ಯಾಣ ಕಾರ್ಯಕ್ರಮಗಳನ್ನು ಸವಲತ್ತುಗನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸಬಹುದಾಗಿದೆಯೆಂದವರು ಹೇಳಿದ್ದಾರೆ.

  ಮೋದಿಯವರ ಆಧಾರ್‌ಗೂ ಹಾಗೂ ಮನಮೋಹನ್‌ಸಿಂಗ್ ಅವರ ಆಧಾರ್‌ಗೂ ವ್ಯತ್ಯಾಸವಿದೆ. ಮನಮೋಹನ್‌ಸಿಂಗ್‌ರ ಆಧಾರ್‌ಗೆ ಕಾನೂನು ಬೆಂಬಲವಿರಲಿಲ್ಲ. ಆದರೆ ಮೋದಿಯವರ ಆಧಾರ್ ಕಾನೂನಿನ ಬೆಂಬಲ ಹೊಂದಿದೆ ಹಾಗೂ ಅದರ ಸುರಕ್ಷತೆ ಹಾಗೂ ಖಾಸಗಿತನವು ಖಾತರಿಪಡಿಸಲ್ಪಟ್ಟಿದೆಯೆಂದು ರವಿಶಂಕರ್ ತಿಳಿಸಿದರು. ದೇಶಾದ್ಯಂತ 80 ಕೋಟಿಗೂ ಅಧಿಕ ಮೊಬೈಲ್ ಸಂಖ್ಯೆಗಳನ್ನು ಬ್ಯಾಂಕ್ ಖಾತೆಗಳ ಜೊತೆ ಜೋಡಿಸಲಾಗಿದೆ ಹಾಗೂ 120 ಕೋಟಿಗೂ ಅಧಿಕ ಮೊಬೈಲ್ ಫೋನ್‌ಗಳು ಆಧಾರ್ ಜೊತೆ ಲಿಂಕ್ ಹೊಂದಿವೆಯೆಂದವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X