Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶ್ರಮಶಕ್ತಿ ಯೋಜನೆ ರಾಜಕೀಯ ಲಾಭಕ್ಕೆ...

ಶ್ರಮಶಕ್ತಿ ಯೋಜನೆ ರಾಜಕೀಯ ಲಾಭಕ್ಕೆ ದುರುಪಯೋಗ: ಶೋಭಾ ಕರಂದ್ಲಾಜೆ

ವಾರ್ತಾಭಾರತಿವಾರ್ತಾಭಾರತಿ3 April 2018 10:54 PM IST
share
ಶ್ರಮಶಕ್ತಿ ಯೋಜನೆ ರಾಜಕೀಯ ಲಾಭಕ್ಕೆ ದುರುಪಯೋಗ: ಶೋಭಾ ಕರಂದ್ಲಾಜೆ

ಬೆಂಗಳೂರು, ಎ.3: ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಶ್ರಮ ಶಕ್ತಿ ಯೋಜನೆಯಡಿಯಲ್ಲಿ ಕಾಂಗ್ರೆಸ್‌ನ 94 ಶಾಸಕರ ಕ್ಷೇತ್ರಗಳಿಗೆ ಪ್ರತಿ ಕ್ಷೇತ್ರಕ್ಕೆ ತಲಾ 18.75 ಲಕ್ಷ ರೂ.ಗಳಂತೆ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಮಂಗಳವಾರ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 224 ಕ್ಷೇತ್ರಗಳಿರುವ ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳಿಗೆ ಮಾತ್ರ ಈ ಅನುದಾನ ಬಿಡುಗಡೆ ಮಾಡಿರುವುದರ ಹಿಂದೆ ಕೇವಲ ಚುನಾವಣೆಯಲ್ಲಿ ಲಾಭ ಪಡೆಯುವುದು ಬಿಟ್ಟರೆ, ಬೇರೆ ಯಾವುದೆ ಸದುದ್ದೇಶವಿಲ್ಲ ಎಂದರು.

ಶ್ರಮಶಕ್ತಿ ಯೋಜನೆಯಡಿಯಲ್ಲಿ ಅರ್ಜಿದಾರರಿಂದ ನಿಯಮಾನುಸಾರ ದಾಖಲಾತಿಯನ್ನು ಪಡೆದು ಯಾರು ಅರ್ಹರಿದ್ದಾರೋ ಅವರ ಹೆಸರುಗಳನ್ನು ನಿಗಮವೇ ಶಿಫಾರಸ್ಸು ಮಾಡಬೇಕು. ಆ ಪಟ್ಟಿಯನ್ನು ಅನುಮೋದಿಸುವುದಷ್ಟೇ ಶಾಸಕರ ಕೆಲಸ ಎಂದು ಅವರು ಹೇಳಿದರು. ಆದರೆ, ಈ ಆದೇಶ ಗಮನಿಸಿದಾಗ ನಿಗಮದ ಜಿಲ್ಲಾ ವ್ಯವಸ್ಥಾಪಕರು ಮಾಡಬೇಕಾದ ಫಲಾನುಭವಿಗಳ ಆಯ್ಕೆಯನ್ನು ಶಾಸಕರಿಗೆ ಬಿಡಲಾಗಿದೆ. ಮುಂದಿನ ಚುನಾವಣೆಯಲ್ಲಿ ಲಾಭ ದೊರೆಯುವಂತಹ ವ್ಯಕ್ತಿಗಳನ್ನು ಫಲಾನುಭವಿಗಳಾಗಿ ಆಯ್ಕೆಮಾಡುವುದೆ ಇದರ ಹಿಂದಿರುವ ಉದ್ದೇಶ ಎಂದು ಶೋಭಾ ಕರಂದ್ಲಾಜೆ ದೂರಿದರು.

ಫಲಾನುಭವಿಗಳನ್ನು 94 ಶಾಸಕರು ಯಾವ ಅರ್ಹತೆ ಇಲ್ಲವೇ ಮಾನದಂಡದ ಮೇಲೆ ಆಯ್ಕೆ ಮಾಡಿದ್ದಾರೆ ? ಯಾವ ದಾಖಲಾತಿಗಳನ್ನು ಪರಿಶೀಲಿಸಲಾಗಿದೆ ಎಂಬುದನ್ನು ಅಲ್ಪಸಂಖ್ಯಾತರ ಇಲಾಖೆ ಸ್ಪಷ್ಟಪಡಿಸಬೇಕು. ಒಟ್ಟಾರೆ, ಶ್ರಮ ಶಕ್ತಿ ಯೋಜನೆಯನ್ನು ಕಾಂಗ್ರೆಸ್ ಸರಕಾರ ರಾಜಕೀಯ ಲಾಭಕ್ಕೆ ಅಲ್ಪಸಂಖ್ಯಾತರ ಓಲೈಕೆಗಾಗಿ ದುರುಪಯೋಗ ಮಾಡಿಕೊಂಡಿರುವುದು ದುರಾದೃಷ್ಟಕರ ಸಂಗತಿ ಎಂದು ಅವರು ಹೇಳಿದರು.

ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಬದ್ಧ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಸರಕಾರ ಅಲ್ಪಸಂಖ್ಯಾತರಿಗೆ ಮೋಸ ಮಾಡಿರುವುದು ದುರ್ದೈವದ ಸಂಗತಿ. ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡುವುದರಲ್ಲಿ ಕಾಂಗ್ರೆಸ್ ಸರಕಾರ ನಿಸ್ಸೀಮ ಎನ್ನುವ ಖ್ಯಾತಿಗೆ ಪಾತ್ರವಾಗಿದೆ. ಇದೂ ಸಹ ಮತ್ತೊಂದು ಅಂತಹುದೇ ಹಣ ದುರುಪಯೋಗ ಕ್ರಮವಾಗಿದೆ. ಈ ಅನುದಾನ ಬಿಡುಗಡೆಗೆ ಚುನಾವಣೆ ಆಯೋಗವು ತಕ್ಷಣ ತಡೆ ನೀಡಬೇಕು ಹಾಗೂ ಸೂಕ್ತ ತನಿಖೆಗೆ ಆದೇಶಿಸಬೇಕು ಎಂದು ಶೋಭಾ ಕರಂದ್ಲಾಜೆ ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X