Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮತದಾನ ಜಾಗೃತಿ: ಪಾಲಿಕೆಯೊಂದಿಗೆ ಕೈ...

ಮತದಾನ ಜಾಗೃತಿ: ಪಾಲಿಕೆಯೊಂದಿಗೆ ಕೈ ಜೋಡಿಸಿದ ಎಪಿಡಿ

ವಾರ್ತಾಭಾರತಿವಾರ್ತಾಭಾರತಿ3 April 2018 11:17 PM IST
share
ಮತದಾನ ಜಾಗೃತಿ: ಪಾಲಿಕೆಯೊಂದಿಗೆ ಕೈ ಜೋಡಿಸಿದ ಎಪಿಡಿ

ಮಂಗಳೂರು,ಎ.3: ಮತದಾರ ಶಿಕ್ಷಣ ಮತ್ತು ಮತದಾರರ ಸಹಭಾಗಿತ್ವಕ್ಕೆ ಸಂಬಂಧಿಸಿದ ಚುನಾವಣಾ ಪೂರ್ವ ಕಾರ್ಯಕ್ರಮಗಳನ್ನು ಉತ್ತೇಜಿಸಲು ಎ.ಪಿ.ಡಿ. ಪ್ರತಿಷ್ಟಾನವು ಮಂಗಳೂರು ಮಹಾನಗರ ಪಾಲಿಕೆಯ ಜೊತೆ ಕೈ ಜೋಡಿಸಿದೆ.

ಭಾರತದ ಚುನಾವಣಾ ಆಯೋಗದ ಸ್ವೀಪ್ ಕಾರ್ಯಕ್ರಮದ ಅಡಿಯಲ್ಲಿ ಮತದಾರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ಎ.ಪಿ.ಡಿ. ಪ್ರತಿಷ್ಟಾನವು ಮಂಗಳೂರು ಮಹಾನಗರ ಪಾಲಿಕೆಯ ಅಧಿಕೃತ ಸ್ವಯಂಸೇವಾ ಸಂಘಟನೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. 

ಎ.ಪಿ.ಡಿ.ಯ ಜಾಗೃತಿ ಕಾರ್ಯಕ್ರಮಗಳು 'ನಿಮ್ಮ ಬೆರಳಿಗೆ ಶಾಯಿ' ಶೀರ್ಷಿಕೆಯಡಿ ಆಯೋಜನೆಯಾಗುತ್ತದೆ ಮತ್ತು ಅವುಗಳನ್ನು ಕರ್ನಾಟಕ ವಿಧಾನಸಭಾ ಕ್ಷೇತ್ರ 202 (ಮಂಗಳೂರು ನಗರ ಉತ್ತರ) ಹಾಗು 203 (ಮಂಗಳೂರು ನಗರ ದಕ್ಷಿಣ) ರಲ್ಲಿಯ ಮತದಾರರನ್ನು ತಲುಪುವಂತೆ ವಿನ್ಯಾಸಗೊಳಿಸಲಾಗಿದೆ. ಎ.ಪಿ.ಡಿ.ಯು ದಕ್ಷಿಣ ಕನ್ನಡ ಸ್ವೀಪ್ ಸಮಿತಿ ಮತ್ತು ಮಂಗಳೂರು ನಗರ ಪಾಲಿಕೆಗಳ ಮಾರ್ಗದರ್ಶಿ ಸೂತ್ರಗಳ ಅನ್ವಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತದೆ. 

ಸ್ವೀಪ್ ಕಾರ್ಯಕ್ರಮಗಳನ್ನು ಭಾರತದ ಚುನಾವಣಾ ಆಯೋಗವು ಮತದಾರರ ಸಹಭಾಗಿತ್ವವನ್ನು ಹೆಚ್ಚಿಸುವುದಕ್ಕಾಗಿ ಮತ್ತು ಭಾರತವನ್ನು ಉತ್ಸಾಹ ಭರಿತ ಪ್ರಜಾಪ್ರಭುತ್ವವನ್ನಾಗಿ ರೂಪಿಸಲು ಆರಂಭಿಸಿದೆ. ಮತದಾನದಲ್ಲಿ ಸರಾಸರಿ ಶೇ.60 ಮತದಾರರು ಮಾತ್ರವೇ ಮತ ಚಲಾಯಿಸುತ್ತಿದ್ದ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ರೂಪಿಸಲಾಯಿತು. ಮತದಾನದಿಂದ ಹೊರಗುಳಿಯುವವರ ಸಂಖ್ಯೆಯನ್ನು ತಗ್ಗಿಸುವುದು ಮತ್ತು ಮತದಾರರಲ್ಲಿಯ ನಿರ್ಲಕ್ಷ್ಯದಿಂದ ಉದ್ಭವಿಸುವ ಸಮಸ್ಯೆಗಳಾದ ಅನರ್ಹಗೊಳ್ಳುವ ಮತಗಳು, ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳದಿರುವುದು ಇತ್ಯಾದಿಗಳನ್ನು  ತೊಡೆದು ಹಾಕುವುದು ಸ್ವೀಪ್ ಗುರಿಯಾಗಿದೆ. 

'ನಿಮ್ಮ ಬೆರಳಿಗೆ ಶಾಯಿ' ಕಾರ್ಯಕ್ರಮವು ಹೇಗೆ ಮತದಾನ ಮಾಡಬೇಕು, ಮತಗಟ್ಟೆಗಳ ಅವಧಿ, ಅವುಗಳು ಇರುವ ಸ್ಥಳ ಇತ್ಯಾದಿ ವಿಷಯಗಳ ಬಗ್ಗೆ ಮತದಾರರನ್ನು ಸುಶಿಕ್ಷಿತರನ್ನಾಗಿಸಲಿದೆ. ಪ್ರಜಾಪ್ರಭುತ್ವದಲ್ಲಿ ಮತದಾನ ನಾಗರಿಕರ ಪವಿತ್ರ ಕರ್ತವ್ಯ ಎಂಬ ಸಂವೇದನೆಯನ್ನು ಮೂಡಿಸುವುದು ಮತ್ತು ಮಂಗಳೂರು ಮಹಾನಾರ ಪಾಲಿಕೆಯ ಮತದಾರರನ್ನು ಕ್ರಿಯಾಶೀಲಗೊಳಿಸುವ ಕ್ರಮಗಳಿಗೆ ಸಮುದಾಯದ ಬೆಂಬಲವನ್ನು ಒದಗಿಸುವುದು ಇದರ ಉದ್ದೇಶಗಳಲ್ಲಿ ಸೇರಿದೆ. ಎಪಿಡಿಯೊಂದಿಗೆ ಬೆಂಗಳೂರಿನ ಇಎಫ್‍ಐಎಂ ಬಿಸಿನೆಸ್ ಸ್ಕೂಲಿನಲ್ಲಿ ಪಿಜಿಡಿಎಂ ಅನುಸರಿಸುವ 13 ಸ್ನಾತಕೋತ್ತರ ವಿದ್ಯಾರ್ಥಿಗಳು ಇಂಕ್ ಯುವರ್ ಫಿಂಗರ್ ಪ್ರಚಾರವನ್ನು ನಿರ್ವಹಿಸುತ್ತಿದ್ದಾರೆ. 'ನೀವು ಬೆರಳು ತೋರಿಸಬೇಡಿ - ನಿಮ್ಮ ಬೆರಳಿಗೆ ಶಾಯಿ ಹಾಕಿ' ಎಂಬುದು ಈ ಪ್ರಚಾರಾಂದೋಲನದ ಘೋಷಣೆಯಾಗಿದೆ.

ಈ ಕಾರ್ಯಕ್ರಮವು ಎರಡು ಅಂಶಗಳನ್ನು ಒಳಗೊಂಡಿದೆ. ಮೊದಲನೆಯದು 'ಸಾರ್ವಜನಿಕ ಶಿಕ್ಷಣ' ಮತ್ತು ಎರಡನೆಯದ್ದು 'ಸಮುದಾಯದ ಭಾಗವಹಿಸುವಿಕೆ'. ಆ ಮೂಲಕ ತಿಂಗಳು ಕಾಲ ಸರಣಿ ಕಾರ್ಯಕ್ರಮಗಳು ಆಯೋಜನೆಯಾಗಿದ್ದು, ವಸತಿ ಪ್ರದೇಶಗಳು, ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಪ್ರದೇಶಗಳು, ಮಾಲ್ ಗಳು ಮತ್ತು ವಾಣಿಜ್ಯ ಸಂಸ್ಥೆಗಳು, ಕಾಲೇಜು ಮತ್ತು ವಿಶ್ವವಿದ್ಯಾಲಯಗಳು, ಮಾಹಿತಿ ತಂತ್ರಜ್ಞಾನ ಸಂಸ್ಥೆಗಳ ಆವರಣಗಳು, ಸರಕಾರಿ ಕಚೇರಿಗಳು, ಮಾರುಕಟ್ಟೆ, ಸಭಾಂಗಣಗಳು, ಮದುವೆ ಛತ್ರಗಳು, ಉದ್ಯಾನವನಗಳು, ಕಡಲಕಿನಾರೆಗಳು ಮತ್ತು ಇತರ ಮನರಂಜನಾ ತಾಣಗಳು ಇತ್ಯಾದಿ ಪ್ರದೇಶಗಳಲ್ಲಿ ನಡೆಸಲ್ಪಡುತ್ತವೆ. ಮಹಾನಗರ ಪಾಲಿಕೆಯಲ್ಲಿ ಲಭ್ಯ ಇರುವ, ಈ ಹಿಂದೆ ನಡೆದ ಚುನಾವಣೆಗಳಲ್ಲಿ ಮತದಾರರ ಸಹಭಾಗಿತ್ವ ಕುರಿತ ಅಂಕಿಅಂಶಗಳನ್ನು ಒಳಗೊಂಡ ದತ್ತಾಂಶಗಳು ಪ್ರಚಾರ ಅಭಿಯಾನವನ್ನು ಸುಸೂತ್ರವಾಗಿ ಮತ್ತು ಪರಿಣಾಮಕಾರಿಯಾಗಿ ನಡೆಸಲು ಸಹಕಾರಿಯಾಗಲಿವೆ. 

ಈ ಪ್ರಚಾರಾಂದೋಲನ ವ್ಯಾಪಕ ಪ್ರಮಾಣದಲ್ಲಿ ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಳ್ಳುತ್ತದೆ. ರೋಡ್ ಶೋ ಮತ್ತು ಇತರ ಸಮೂಹ ಮಾಧ್ಯಮಗಳನ್ನು ಇದರಲ್ಲಿ ಬಳಸಿಕೊಳ್ಳಲಾಗುತದೆ. ಈ ನಿಟ್ಟಿನಲ್ಲಿ ಎ.ಪಿ.ಡಿ.ಯು ಕ್ರಿಯಾ ಯೋಜನೆಯನ್ನು ರೂಪಿಸಿ ಮಂಗಳೂರು ಮಹಾನಗರ ಪಾಲಿಕೆಗೆ ಸಲ್ಲಿಸಿದೆ. 'ನಿಮ್ಮ ಬೆರಳಿಗೆ ಶಾಯಿ' ಅಭಿಯಾನ 2018 ಎಪಿಡಿ ಚಾಲನೆ ನೀಡಿದೆ.
ಹೆಚ್ಚಿನ ವಿವರಗಳಿಗೆ 0824-4270008 (ಎ.ಪಿ.ಡಿ. ಕಚೇರಿ.) ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X