ದನ ಕಳವು ಪ್ರಕರಣ: ಆರೋಪಿ ಸೆರೆ
ಮೂಡುಬಿದಿರೆ, ಎ. 5: ದನ ಕಳ್ಳತನ ಪ್ರಕರಣದ ಆರೋಪಿಯೋರ್ವನನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಅದ್ಯಪಾಡಿ ನಿವಾಸಿ ಮುಹಮ್ಮದ್ ಮನ್ಸೂರ್ (38) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಮೂಡುಬಿದಿರೆ ಪೊಲೀಸ್ ಠಾಣೆ ವ್ಯಾಪ್ತಿಯ ಮೂಡು ಮಾರ್ನಾಡು ಎಂಬಲ್ಲಿನ ಮನೆಯ ಹಟ್ಟಿಯಲ್ಲಿ ಕಟ್ಟಿದ್ದ 2 ದನಗಳನ್ನು ಕಾರಿನಲ್ಲಿ ಕಳವು ಮಾಡಿದ್ದಾನೆನ್ನಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈತನ ವಿರುದ್ಧ ಈ ಹಿಂದೆ ಮಂಗಳೂರು ನಗರದ ಬಜಪೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ಉಡುಪಿ ಜಿಲ್ಲೆಯ ಕಾರ್ಕಳ ಅಜೆಕಾರು ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ, ತುಮಕೂರು ಜಿಲ್ಲೆಯ ಚಿಕ್ಕನಾಯಕನಕಳ್ಳಿ ಹುಳಿಯ ಪೊಲೀಸ್ ಠಾಣೆಯಲ್ಲಿ ಒಂದು ದರೋಡೆ ಪ್ರಕರಣ, ಕೊಡಗು ಜಿಲ್ಲೆಯ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ಕೊಡ್ಲಿ ಪೇಟೆ ಪೊಲೀಸ್ ಠಾನೆಯಲ್ಲಿ 3 ಪ್ರಕರಣ, ಕುಶಾಲನಗರ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ ಹೀಗೆ ಒಟ್ಟು 13 ಪ್ರಕರಣ ದಾಖಲಾಗಿರುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.