ಉಡುಪಿ: ಪದವಿ ವಿದ್ಯಾರ್ಥಿಗಳಿಂದ ಮತದಾನ ಜಾಗೃತಿ ಜಾಥಾ

ಉಡುಪಿ, ಎ.5: ಉಡುಪಿ ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಪದವಿ ಕಾಲೇಜುಗಳ ವಿದ್ಯಾರ್ಥಿಗಳ ಮತದಾನ ಜಾಗೃತಿ ಜಾಥವನ್ನು ಗುರುವಾರ ಉಡುಪಿ ನಗರದಲ್ಲಿ ಆಯೋಜಿಸಲಾಗಿತ್ತು.
ಉಡುಪಿ ನಗರದ ಕ್ಲಾಕ್ ಟವರ್ನಲ್ಲಿ ಜಾಥಕ್ಕೆ ಚಾಲನೆ ನೀಡಿದ ಸ್ವೀಪ್ ಸಮಿತಿಯ ಅಧ್ಯಕ್ಷ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾ ನಂದ ಕಾಪಶಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಮಹತ್ವ ವನ್ನು ಅರಿತು ಯಾವುದೇ ಆಮಿಷ, ಹಣದ ಪ್ರಭಾವಕ್ಕೆ ಒಳಗಾಗದೆ ಮತದಾನ ಮಾಡಬೇಕು ಎಂದು ಹೇಳಿದರು.
ಬಳಿಕ ಅವರು ವಿದ್ಯಾರ್ಥಿಗಳಿಗೆ ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಶಿಕ್ಷಣಾಧಿಕಾರಿ ಅಶೋಕ್ ಕಾಮತ್ ಮತ ದಾನದ ಕುರಿತು ಮಾಹಿತಿ ನೀಡಿದರು. ಎಂಜಿಎಂ ಕಾಲೇಜಿನ ವಿದ್ಯಾರ್ಥಿ ಶ್ರೇಯಸ್ ಕೋಟ್ಯಾನ್ ಹಾಗೂ ತೆಂಕನಿಡಿಯೂರು ಕಾಲೇಜಿನ ವಿದ್ಯಾರ್ಥಿನಿ ವಿಜೇತಾ ಶೆಟ್ಟಿ ಚುನಾವಣೆಯ ಮಹತ್ವದ ಬಗ್ಗೆ ಮಾತನಾಡಿದರು.
ಉಡುಪಿ ನಗರದ 13 ಕಾಲೇಜುಗಳ ಸುಮಾರು ಎರಡು ಸಾವಿರ ವಿದ್ಯಾರ್ಥಿ ಗಳು ಈ ಜಾಥದಲ್ಲಿ ಪಾಲ್ಗೊಂಡಿದ್ದರು. ನೆರೆದ ವಿದ್ಯಾರ್ಥಿಗಳಿಂದ ಬೃಹತ್ ಸಹಿ ಸಂಗ್ರಹ ಅಭಿಯಾನ, ಭಿತ್ತಿಪತ್ರಗಳ ಪ್ರದರ್ಶನ ನಡೆಯಿತು. ಒಂಟೆ ಹಾಗೂ ಕುದುರೆಯ ಮೇಲೆರಿದ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಮತ ದಾನದ ಹೇಳುವ ಮೂಲಕ ಗಮನಸೆಳೆದರು. ಕಲಾ ತಂಡಗಳು ನೋಡುಗರ ಆಕರ್ಷಣೀಯವಾಗಿದ್ದವು.
ಜಾಥದಲ್ಲಿ ಪೌರಾಯುಕ್ತ ಡಿ.ಮಂಜುನಾಥಯ್ಯ, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಕಾಲೇಜಿನ ಪ್ರಾಂಶುಪಾಲರು, ವಿವಿಧ ಇಲಾಖೆಯ ಅಧಿಕಾರಿಗಳು ಜಾಥಾದಲ್ಲಿ ಪಾಲ್ಗೊಂಡರು. ನಗರದ ಕ್ಲಾಕ್ಟವರ್ನಿಂದ ಆರಂಭಗೊಂಡ ಜಾಥವು ಅಜ್ಜರಕಾಡು ುರಭವನದಲ್ಲಿ ಸಮಾಪ್ತಿಗೊಂಡಿತು.