ವಿಭಿನ್ನ ಸಾವುರ್ಥ್ಯದ ಮಕ್ಕಳ ಸೇವೆ ಎಲ್ಲಕ್ಕಿಂತ ಮಿಗಿಲು: ಬಿಷಪ್ ಜೆರಾಲ್ಡ್ ಲೋಬೊ

ಉಡುಪಿ, ಎ.5: ಸಮಾಜದಲ್ಲಿರುವ ವಿಭಿನ್ನ ಸಾಮರ್ಥ್ಯದ ಮಕ್ಕಳ ಸೇವೆ ಮಾಡುವುದು ಎಲ್ಲಾ ಕೆಲಸಕ್ಕಿಂತಲೂ ಶ್ರೇಷ್ಟವಾದುದು ಮತ್ತು ಇದಕ್ಕೆ ದೇವರ ಅನುಗ್ರಹ ಸದಾ ಇರಲಿದೆ ಎಂದು ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಹೇಳಿದ್ದಾರೆ.
ಪಾಂಬೂರು ಮಾನಸ ವಿಶೇಷ ಮಕ್ಕಳ ಶಾಲೆಯಲ್ಲಿ ಗುರುವಾರ ನೂತನ ಆಟಿಸಂ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡುತಿದ್ದರು. ಮಾನಸ ಸಂಸ್ಥೆಯ ಮೂಲಕ ಈವರೆಗೆ 600ಕ್ಕೂ ಅಧಿಕ ಮಕ್ಕಳು ತಮ್ಮ ಬಾಳಿನಲ್ಲಿ ಹೊಸ ಭರವಸೆಯನ್ನು ಕಂಡಿದ್ದಾರೆ. ವಿಭಿನ್ನ ಸಾಮರ್ಥ್ಯದ ಮಕ್ಕಳಿಗೆ ವೈಯುಕ್ತಿಕ ಕಾಳಜಿಯ ಜೊತೆಯಲ್ಲಿ ಸಮಾಜದ ಕಾಳಜಿ ಮತ್ತು ಪ್ರೀತಿ ದೊರೆತಾಗ ಅವರೂ ಕೂಡ ಸಾಧನೆ ಶಿಖರ ಏರುವುದರಲ್ಲಿ ಸಂಶಯವಿಲ್ಲ ಎಂದರು.
ಕೆಥೊಲಿಕ್ ಸಭಾ ಮಂಗಳೂರು ಧರ್ಮಪ್ರಾಂತದ ಅಧ್ಯಕ್ಷ ಅನಿಲ್ ಲೋಬೊ, ಉಡುಪಿ ಧರ್ಮಪ್ರಾಂತದ ಅಧ್ಯಕ್ಷ ವಲೇರಿಯನ್ ಫೆರ್ನಾಂಡಿಸ್, ಕಾರ್ಯದರ್ಶಿ ಜಸಿಂತಾ ಕುಲಾಸೊ, ಕೋಶಾಧಿಕಾರಿ ಆಲ್ವಿನ್ ಕ್ವಾಡ್ರಸ್, ಆಧ್ಯಾತ್ಮಿಕ ನಿರ್ದೇಶಕ ವಂ.ಫರ್ಡಿನಾಂಡ್ ಗೊನ್ಸಾಲ್ವಿಸ್, ವಂ.ಹೆರಾಲ್ಡ್ ಪಿರೇರಾ, ಮಾನಸ ಸಂಸ್ಥೆಯ ಅಧ್ಯಕ್ಷ ಹೆನ್ರಿ ಮಿನೇಜಸ್, ಪ್ರಾಂಶುಪಾಲ ಸಿಸ್ಟರ್ ಅನ್ಸಿಲ್ಲಾ ಫೆರ್ನಾಂಡಿಸ್, ಸ್ವಾಕ್ ಸಂಸ್ಥೆಯ ಪ್ರತಿನಿಧಿ ಗ್ರೆಟ್ಟಾ ಡಿಸೋಜ, ಮಾಜಿ ಪದಾಧಿಕಾರಿಗಳಾದ ಡಾ.ಎಡ್ವರ್ಡ್ ಲೋಬೊ, ಡಾ.ಜೆರಾಲ್ಡ್ ಪಿಂಟೊ ಉಪಸ್ಥಿತರಿದ್ದರು.
ಮಾನಸ ಸಂಸ್ಥೆಯ ಕೋಶಾಧಿಕಾರಿ ಎಲ್ರೊಯ್ ಕಿರಣ್ ಕ್ರಾಸ್ತಾ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಅಧ್ಯಕ್ಷ ಹೆನ್ರಿ ಮಿನೇಜಸ್ ಸ್ವಾಗತಿಸಿದರು. ಕಾರ್ಯ ದರ್ಶಿ ಅನಿಲ್ ಲೋಬೊ ವಂದಿಸಿದರು. ರೀನಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.