Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೇಲುಕೋಟೆ ಫಲಿತಾಂಶ ಈಗಾಗಲೇ ಡಿಕ್ಲೇರ್...

ಮೇಲುಕೋಟೆ ಫಲಿತಾಂಶ ಈಗಾಗಲೇ ಡಿಕ್ಲೇರ್ ಆಗಿದೆ ಎನಿಸುತ್ತಿದೆ: ಸಾಹಿತಿ ದೇವನೂರ ಮಹಾದೇವ

ವಾರ್ತಾಭಾರತಿವಾರ್ತಾಭಾರತಿ5 April 2018 11:31 PM IST
share

ಮಂಡ್ಯ, ಎ.5: ದರ್ಶನ್ ಪುಟ್ಟಣ್ಣಯ್ಯ ಪರವಾದ ಜನರ ಅಲೆಯನ್ನು ಗಮನಿಸಿದರೆ ನನಗನ್ನಿಸುತ್ತದೆ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಈಗಾಗಲೇ ಡಿಕ್ಲೇರ್ ಆಗಿದೆ ಎಂದು ಸಾಹಿತಿ ಹಾಗೂ ಸ್ವರಾಜ್ ಇಂಡಿಯಾ ಪಕ್ಷದ ನಾಯಕ ದೇವನೂರ ಮಹಾದೇವ ಅಭಿಪ್ರಾಯಪಟ್ಟಿದ್ದಾರೆ. 

ನಗರದಲ್ಲಿ ಗುರುವಾರ ನಡೆದ ಪುಟ್ಟಣ್ಣಯ್ಯ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನರ ಒಲವು ಪಕ್ಷಾತೀತವಾಗಿ ಪ್ರವಾಹೋಪಾಯದಲ್ಲಿ ನೀರಿನ ಚಿಲುಮೆಯಂತೆ ದರ್ಶನ್ ಪುಟ್ಟಣ್ಣಯ್ಯ ಪರವಾಗಿ ಚಿಮ್ಮುತ್ತಿದೆ ಎಂದರು. ಬೀದಿಬದಿಯ ಅಂಗಡಿಯಲ್ಲಿ ತಿಂಡಿ ತಿನ್ನುವ ದರ್ಶನ್ ಸರಳತೆ ಗಮನಿಸಿದರೆ ಈ ಹೊಸ ಕಾಲಕ್ಕೆ ಹೊಸ ನಾಯಕ ಹುಟ್ಟಿದ ಅನಿಸಿದೆ. ಆ ಕಾರಣಕ್ಕೇ ಇರಬೇಕು ಜನರ ಮತ್ತು ಯುವಪಡೆಯ ಒಲವು ದರ್ಶನ್ ಕಡೆಗೆ ಹರಿದಿದೆ ಎಂದು ಅವರು ಹೇಳಿದರು.

ಮೇಲುಕೋಟೆ ಕ್ಷೇತ್ರದಲ್ಲಿ ಆದಂತೆಯೇ ಯುವ ಜನತೆಯ ಅಲೆ ರಾಜ್ಯಾದ್ಯಂತ ಹಬ್ಬುವಂತಾಗಲು ದರ್ಶನ್ ವೇಗ ವರ್ಧಕ ವಾಗಬೇಕಾಗಿದೆ. ರಾಜ್ಯ ಯುವ ನಾಯಕತ್ವಕ್ಕಾಗಿ ಕಾಯುತ್ತಿದೆ. ಅದು ನಿಜವಾಗುವ ನಂಬಿಕೆ ನನಗಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ದರ್ಶನ್ ಜತೆಗೆ ‘ಸಂಪತ್ತಿಗೆ’ ಸವಾಲು ಹಾಕಿ ಮದ್ದೂರು ಕ್ಷೇತ್ರದಿಂದ ಸ್ಪರ್ಧಿಸಿರುವ ಲಿಂಗೇಗೌಡ ಅವರನ್ನೂ ಗೆಲ್ಲಿಸುವ ಮೂಲಕ ರಾಜ್ಯಕ್ಕೆ ಯುವ ನಾಯಕತ್ವದ ದಿಕ್ಸೂಚಿಯಾಗಬೇಕು ಎಂದು ಅವರು ಮತದಾರರಿಗೆ ಸಲಹೆ ನೀಡಿದರು.

ಮೇಲುಕೋಟೆ ಕ್ಷೇತ್ರಕ್ಕೆ ಪುಟ್ಟಣ್ಣಯ್ಯ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟಿದ್ದರು. ಇದುವರೆಗೂ ಪುಟ್ಟಣ್ಣಯ್ಯ ಅವರಿಗೆ ಓಟು ಹಾಕಿಲ್ಲ. ದರ್ಶನ್‍ಗೆ ಓಟು ಹಾಕಿ ಅವರ ಋಣ ತೀರಿಸಬೇಕೆಂದುಕೊಂಡಿದ್ದೇವೆಂದು ಕ್ಷೇತ್ರದ ಹಲವು ಜನರು ತೀರ್ಮಾನಿಸಿದ್ದಾರೆ ಎಂದು ದೇವನೂರು ಪ್ರಸ್ತಾಪಿಸಿದರು.

ಪುಟ್ಟಣ್ಣಯ್ಯ ಅವರ ಚುನಾವಣೆ ಪ್ರಚಾರಕ್ಕೆ ನಾನೊಬ್ಬ ಬರುತ್ತಿದ್ದೆ. ದರ್ಶನ್ ಪರ ಪ್ರಚಾರಕ್ಕೆ ನನ್ನ ಹೆಂಡತಿ ಸುಮಿತ್ರ, ಮಕ್ಕಳಾದ ಉಜ್ವಲ, ಡಾ.ಮಿತಾ, ಮೊಮ್ಮಗಳು ಬರುತ್ತಿದ್ದಾರೆ. ಈ ವಿದ್ಯಮಾನ ನಮ್ಮ ಮನೆಯಲ್ಲಿ ಮಾತ್ರವಲ್ಲ; ಇಡೀ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಮನೆ-ಮನಗಳಲ್ಲಿ ನೈಜವಾಗಿ, ಪಕ್ಷಾತೀತವಾಗಿ ಸಂಭವಿಸಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X