Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೀತಿ ಸಂಹಿತೆಗೆ ಮಣ್ಣು ಹಾಕಿ:...

ನೀತಿ ಸಂಹಿತೆಗೆ ಮಣ್ಣು ಹಾಕಿ: ವಿವಾದಾತ್ಮಕ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ ಭಟ್

ವಾರ್ತಾಭಾರತಿವಾರ್ತಾಭಾರತಿ6 April 2018 10:16 PM IST
share
ನೀತಿ ಸಂಹಿತೆಗೆ ಮಣ್ಣು ಹಾಕಿ: ವಿವಾದಾತ್ಮಕ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ ಭಟ್

ಕೊಣಾಜೆ, ಎ. 6: ಕೈರಂಗಳ, ಪುಣ್ಯಕೋಟಿ ನಗರದ ಅಮೃತಧಾರಾ ಗೋಶಾಲೆಯಲ್ಲಿ ನಡೆಯುತ್ತಿದ್ದ ಧರಣಿ ಸ್ಥಳಕ್ಕೆ ಆಗಮಿಸಿದ ಕಲ್ಲಡ್ಕ ಪ್ರಭಾಕರ ಭಟ್ ಮೊಘಲರು, ಬ್ರಿಟೀಷರಿಗಿಂತ ಕೆಟ್ಟದಾಗಿ ಅಧಿಕಾರಶಾಹಿಗಳು ರಾಜ್ಯ ಆಳುತ್ತಿದ್ದಾರೆ. ಹಿಂದೂ ಧರ್ಮವನ್ನು, ಸಂಸ್ಕೃತಿಯನ್ನು ಅಳಿಸುವ ಎಲ್ಲಾ ಪ್ರಯತ್ನದಲ್ಲಿ ಸರಕಾರ ತೊಡಗಿಸಿಕೊಂಡಿದೆ ಎಂದಿದ್ದು, ಈ ಸಂದರ್ಭ ನೀತಿ ಸಂಹಿತೆಯ ಬಗ್ಗೆ ಸಭೆಯಲ್ಲಿದ್ದವರು ಹೇಳಿದಾಗ "ನೀತಿ ಸಂಹಿತೆಗೆ ಮಣ್ಣು ಹಾಕಿ, ಅದೊಂದು ನೀತಿ ಇಲ್ಲದ ಸಮಿತಿ" ಎಂದು ವಿವಾದಾತ್ಮಕ ಹೇಳಿಕೆ ನೀಡಿ, ನೀತಿ ಸಂಹಿತೆ ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಗೋವು ದರೋಡೆಕೋರರನ್ನು ನಿಗ್ರಹಿಸಿದ್ದರೆ ಪ್ರತಿಭಟಿಸುವ ಅವಕಾಶವೇ ಇರುತ್ತಿರಲಿಲ್ಲ. ಹೋರಾಟ ಅಪೂರ್ಣವಾಗಲು ಎಂದಿಗೂ ಬಿಡುವುದಿಲ್ಲ. ತಾನು ಕೂಡಾ ಕೈ ಜೋಡಿಸುವುದಾಗಿ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿ ಈ ಸಂದರ್ಭ ಹೇಳಿದರು.

ಕೈರಂಗಳದ ಪುಣ್ಯಕೋಟಿನಗರದ ಅಮೃತಧಾರಾ ಗೋಶಾಲೆಯಲ್ಲಿ ಜಾನುವಾರು ಕಳವು ಘಟನೆಯ ನೈಜ ಅಪರಾಧಿಗಳ ಪತ್ತೆಗೆ ಒತ್ತಾಯಿಸಿ ಗೋ ಶಾಲೆ ಸಮಿತಿ ಅಧ್ಯಕ್ಷ ಟಿ.ಜಿ. ರಾಜಾರಾಂ ಭಟ್ ಕೈಗೊಂಡಿರುವ ಆಮರಣಾಂತ ಉಪವಾಸದ 6ನೇ ದಿನವಾದ ಶುಕ್ರವಾರ ಗೋಶಾಲೆಗೆ ಭೇಟಿ ನೀಡಿ ಗೋ ಪೂಜೆ ನೆರವೇರಿಸಿ ಬಳಿಕ ನಡೆದ ಸಭೆಯಲ್ಲಿ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿ ಮಾತನಾಡಿದರು.

ಸಮಾಜದಲ್ಲಿ ಒಳಿತಿಗೆ ಉಳಿಗಾಲವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಅನ್ಯಾಯಗಳು ಮೇರೆಮೀರಿದೆ. ಅನ್ಯಾಯದ ವಿರುದ್ಧ ನಡೆಯುತ್ತಿರುವ ಆಮರಣಾಂತ ಉಪವಾಸ ಆರನೇ ದಿನ ಪೂರೈಸಿರುವುದು ಹೆಮ್ಮೆಯ ವಿಚಾರ. ಹೋರಾಟ ಜಿಲ್ಲೆ, ರಾಜ್ಯ ಹಾಗೂ ದೇಶಕ್ಕೆ ಮಾದರಿಯಾಗಿದೆ. ರಾಜಕಾರಣಿಗಳಂತೆ ಎಸಿಯೊಳಗೆ ಕುಳಿತು ಮಧ್ಯಾಹ್ನದವರೆಗಿನ ಉಪವಾಸದಲ್ಲಿ ಭಾಗಿಯಾಗಿ ರಾಜಾರಾಂ ಭಟ್ ಅವರು ನಾಟಕವಾಡಿಲ್ಲ. ಅವರಿಗೆ ಆಗಿರುವ ಮಾನಸಿಕ ಆಘಾತದಿಂದ ನೊಂದು ಉಪವಾಸದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.

ಗೋವುಗಳ ಜೀವ ಎಷ್ಟು ಅಮೂಲ್ಯವೋ, ಉಪವಾಸ ನಿರತರ ಜೀವವೂ ಅಷ್ಟೇ ಅಮೂಲ್ಯವಾಗಿರುತ್ತದೆ. ರಾಜಾರಾಂ ಭಟ್ ಹಾಗೂ ಅವರ ಜತೆಗೆ ಆಮರಣಾಂತ ಉಪವಾಸ ಕೈಗೊಂಡಿರುವ 40 ಮಂದಿಯ ಆರೋಗ್ಯದಲ್ಲಿ ಏರುಪೇರಾದಲ್ಲಿ ಇಡೀ ಸಮಾಜವೇ ಕಾನೂನಿನ ವಿರುದ್ಧ ನಿಲ್ಲುತ್ತದೆ. ಆದರೆ ಇದುವರೆಗೆ ಹಿಂದೂ ಸಮಾಜ ದೇಶ, ಧರ್ಮದ ಮೇಲೆ ಬಹಳಷ್ಟು ಆಕ್ರಮಣಗಳಾದರೂ ಎಂದಿಗೂ ಕಾನೂನು ಕೈಗೆತ್ತಿಕೊಂಡಿಲ್ಲ. ಸಂವಿಧಾನ ಚೌಕಟ್ಟಿನೊಳಗೆ ಹೋರಾಟಗಳು ನಡೆದಿವೆ. ಅದಕ್ಕಾಗಿ ನ್ಯಾಯ ದೊರೆತಲ್ಲಿ ಅದೇ ವ್ಯವಸ್ಥೆ ಉಳಿಯಲು ಸಾಧ್ಯ. ಸಾತ್ವಿಕರು ಕಾನೂನು ಕೈಗೆತ್ತಿಕೊಳ್ಳಲು ಮುಂದಾದರೆ ಸಮಾಜದಲ್ಲಿ ಯಾರೂ ಉಳಿಯಲು ಅಸಾಧ್ಯ, ಪ್ರಳಯವೂ ಆಗಬಹುದು ಎಂದು ಸ್ವಾಮಿ ಹೇಳಿದರು.

ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್, ಗೋ ಶಾಲೆ ಸಮಿತಿ ಅಧ್ಯಕ್ಷ ಟಿ.ಜಿ.ರಾಜಾರಾಂ ಭಟ್, ಕನ್ಯಾನ ಬಾಳೆಕೋಡಿ ಕಾಶೀಕಾಳ ಭೈರವೇಶ್ವರ ಶಿಲಾಂಜನ ಕ್ಷೇತ್ರದ ಶ್ರೀ ಶಶಿಕಾಂತಮಣಿ ಸ್ವಾಮೀಜಿ, ವಿ.ಹಿಂ.ಪ. ಮುಖಂಡರುಗಳಾದ ಗೋಪಾಲ ಕುತ್ತಾರ್, ಶರಣ್ ಪಂಪ್‌ವೆಲ್, ಬಿಜೆಪಿ ಮಂಗಳೂರು ಕ್ಷೇತ್ರ ಅಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರ್, ಬಂಟ್ವಾಳದ ಬಿಜೆಪಿ ಮುಖಂಡ ರಾಜೇಶ್ ನಾಯಕ್ ಉಳೇಪಾಡಿಗುತ್ತು, ಶ್ರೀ ಕ್ಷೇತ್ರ ಕಣಂತೂರು ತೋಡಕುಕ್ಕಿನಾರ್ ದೈವಸ್ಥಾನದ ಆಡಳಿತ ಮೊಕ್ತೇಸರ ಮಂಜು ಭಂಡಾರಿ ಯಾನೆ ತಿಮ್ಮಪ್ಪ ಕೊಂಡೆ, ನಂದರಾಜ್ ಶೆಟ್ಟಿ ಪಿಜಿನಬೈಲ್, ಜಗದೀಶ ಆಳ್ವ ಕುವೆತ್ತಬೈಲ್, ರವಿರಾಜ ಹೆಗ್ಡೆ, ರಾಧಾಕೃಷ್ಣ ಅಡ್ಯಂತಾಯ, ರಹೀಂ ಉಚ್ಚಿಲ್ ಉಪಸ್ಥಿತರಿದ್ದರು.

ವೆಂಕಟೇಶ್ವರ ಭಟ್ ಕಾರ್ಯಕ್ರಮ ನಿರೂಪಿಸಿದರು.

'ನೀತಿ ಸಂಹಿತೆಗೆ ಮಣ್ಣು ಹಾಕಿ' ವಿವಾದಾತ್ಮಕ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ ಭಟ್

ಧರಣಿ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿದ ಕಲ್ಲಡ್ಕ ಪ್ರಭಾಕರ ಭಟ್, ಮೊಘಲರು, ಬ್ರಿಟೀಷರಿಗಿಂತ ಕೆಟ್ಟದಾಗಿ ಅಧಿಕಾರಶಾಹಿಗಳು ರಾಜ್ಯ ಆಳುತ್ತಿದ್ದಾರೆ. ಹಿಂದೂ ಧರ್ಮವನ್ನು, ಸಂಸ್ಕೃತಿಯನ್ನು ಅಳಿಸುವ ಎಲ್ಲಾ ಪ್ರಯತ್ನದಲ್ಲಿ ಸರಕಾರ ತೊಡಗಿಸಿಕೊಂಡಿದೆ ಎಂದರು. ಈ ಸಂದರ್ಭದಲ್ಲಿ ನೀತಿ ಸಂಹಿತೆಯ ಬಗ್ಗೆ ಸಭೆಯಲ್ಲಿದ್ದವರು ಹೇಳಿದಾಗ ನೀತಿ ಸಂಹಿತೆಗೆ ಮಣ್ಣು ಹಾಕಿ, ಅದೊಂದು ನೀತಿ ಇಲ್ಲದ ಸಮಿತಿ ಎಂದು ವಿವಾದಾತ್ಮಕ ಹೇಳಿಕೆ ನೀಡಿಕೆ ನೀಡಿ, ನೀತಿ ಸಂಹಿತೆ ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಬಳಿಕ ಮಾತನಾಡಿದ ಅವರು, ಹಿಂದೆ ಗೋ ಕಳವು ನಡೆದಾಗ ಪ್ರತಿಭಟನೆ, ಸಭೆಗಳು ನಡೆದಿರಬಹುದು. ಆದರೆ ರಾಜಾರಾಂ ಭಟ್ ಅವರು ಕೈಗೊಂಡಿರುವ ಆಮರಣಾಂತ ಉಪವಾಸದ ಹೋರಾಟ ಕೊನೆಯವರೆಗೂ ನಡೆಯಬೇಕಿದೆ. ಇದು ಓಟಿನ ರಾಜಕಾರಣವಲ್ಲ. ನ್ಯಾಯಯುತ, ಸತ್ಯಕ್ಕಾಗಿ ಹಾಗೂ ಜೀವನದ ಮೌಲ್ಯಕ್ಕಾಗಿ ನಡೆಯುತ್ತಿರುವ ಹೋರಾಟ. ಕೆಟ್ಟ ರಾಜಕಾರಣ ಇರುವವರೆಗೆ ಸ್ವಾಮಿಗಳಿಗೆ, ಹೆಣ್ಮಕ್ಕಳಿಗೆ, ಹಸುಗಳಿಗೆ ಗೌರವ ಸಿಗುವುದಿಲ್ಲ. ಹಿಂದೂ ಧರ್ಮ ವಿರೋಧಿ ಪಕ್ಷವನ್ನು ಬೇರು ಸಮೇತ ಕಿತ್ತೊಗೆಯಬೇಕಿದೆ. ಖಾದರ್ ತೆರಳಿದ ದೇವಾಲಯಕ್ಕೆ ಮತ್ತೆ ಬ್ರಹ್ಮಕಲಶ ಆಗಬೇಕು ಎಂಬ ಹೇಳಿಕೆಯನ್ನು ಭಟ್ ಸಮರ್ಥಿಸಿಕೊಡರು. ಮಾಧ್ಯಮ ತನ್ನನ್ನು ಪ್ರಶ್ನಿಸಿದಲ್ಲಿ ಅದು ನೂರಕ್ಕೆ ನೂರು ಸತ್ಯ, ದನ ತಿನ್ನುವವರನ್ನು ದೇವಾಲಯದೊಳಕ್ಕೆ ಕರೆಸಿ ಗೌರವಿಸುವುದು ತಪ್ಪು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X