Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಪೈರಿಗೆ ನೀರು

ಪೈರಿಗೆ ನೀರು

ವಾರ್ತಾಭಾರತಿವಾರ್ತಾಭಾರತಿ7 April 2018 12:21 AM IST
share
ಪೈರಿಗೆ ನೀರು

ಪೈರಿಗೆ ನೀರು ಬೇಕೆಂಬಲ್ಲಿ ಉಚಿತವನರಿದು ಬಿಡಬೇಕು.

ಕ್ರಿಯೆಗೆ ಅರಿವು ಬೇಕೆಂಬಲ್ಲಿ ಉಭಯವನರಿದು ಘಟಿಸಬೇಕು.
ಏರಿ ಹಿಡಿವನ್ನಕ್ಕ ನೀರ ಹಿಡಿದಡೆ ಸುಖವಲ್ಲದೆ ಮೀರಿದರುಂಟೆ?
ಕ್ರಿಯೆ ಬಿಡಲಿಲ್ಲ, ಅರಿವ ಮರೆಯಲಿಲ್ಲ.
ಬೆಳೆಯ ಕೊಯಿದ ಮತ್ತೆ, ಹೊಲಕ್ಕೆ ಕಾವಲುಂಟೆ?
ಫಲವ ಹೊತ್ತ ಪೈರಿನಂತೆ, ಪೈರನೊಳಕೊಂಡ ಫಲದಂತೆ,
ಅರಿವು ಆಚರಣೆಯಲ್ಲಿ ನಿಂದು,
ಆಚರಣೆ ಅರಿವಿನಲ್ಲಿ ಲೇಪನಾದ ಮತ್ತೆ
ಕಾಮಭೀಮ ಜೀವಧನದೊಡೆಯನೆಂಬುದ ಭಾವಿಸಲಿಲ್ಲ.

                                                         -ಒಕ್ಕಲಿಗ ಮುದ್ದಣ್ಣ

  ಜೋಳದಹಾಳದ ಒಕ್ಕಲಿಗ ಮುದ್ದಣ್ಣ ಬಸವಣ್ಣನವರ ಸಮಕಾಲೀನ ಶರಣ. ಕೃಷಿಕಾಯಕದ ಮೂಲಕ ಜಂಗಮ ದಾಸೋಹ ನಡೆಸಿದಾತ. ಕೃಷಿಯ ಅನುಭವದ ಮೂಲಕ ಅನುಭಾವದ ಎತ್ತರಕ್ಕೆ ಏರುತ್ತಾನೆ. ಪೈರಿಗೆ ಎಷ್ಟು ಬೇಕೋ ಅಷ್ಟೇ ನೀರು ಬಿಡಬೇಕು. ಕಡಿಮೆ ನೀರು ಬಿಟ್ಟರೆ ಪೈರು ಒಣಗುವುದು. ಹೆಚ್ಚಿಗೆ ನೀರು ಬಿಟ್ಟರೆ ಎರೆಭೂಮಿ ಸವುಳಾಗಿ ಪೈರು ಕೊಳೆಯುವುದು. ಅರಿವಿಲ್ಲದ ಕ್ರಿಯೆಯಿಂದಾಗಿ ಇಂಥ ಸಮಸ್ಯೆಗಳು ಉದ್ಭವಿಸುತ್ತವೆ. ನಮ್ಮ ಕ್ರಿಯೆಗೆ ಅರಿವು ಬೇಕೆಂದರೆ ಕ್ರಿಯೆ ಮತ್ತು ಅರಿವಿನ ಸಂಬಂಧವನ್ನು ಅರ್ಥೈಸಿಕೊಂಡು ಅವು ಪರಿಪೂರ್ಣವಾಗಿ ಒಂದಾಗುವಂತೆ ಮಾಡಬೇಕು. ಮಡಿಯ ಏರಿಯ ಸಾಮರ್ಥ್ಯದಷ್ಟೇ ನೀರಿನ ಸದುಪಯೋಗ ಮಾಡಿಕೊಂಡರೆ ನೀರಿನ ಕೊರತೆ ಉಂಟಾಗುವುದಿಲ್ಲ ಮತ್ತು ಪೈರಿಗೂ ತೊಂದರೆಯಾಗುವುದಿಲ್ಲ. ಕರ್ತವ್ಯವನ್ನು ಅರಿವಿನೊಂದಿಗೆ ಪಾಲನೆ ಮಾಡುವುದರಿಂದ ಯಾವುದೇ ರೀತಿಯ ಹಾನಿ ಸಂಭವಿಸದೆ ಸುಖವಾಗಿರಬಹುದು. ಆದರೆ ಅರಿವು ಮತ್ತು ಕ್ರಿಯೆ ಒಂದಾಗದಿದ್ದರೆ ದುಃಖವು ಕಟ್ಟಿಟ್ಟ ಬುತ್ತಿ. ಬೀಜ ಸಂಗ್ರಹಿಸಲು, ಗೊಬ್ಬರ ತಯಾರಿಸಲು ಮತ್ತು ಕೀಟಗಳ ಹಾವಳಿಯನ್ನು ತಪ್ಪಿಸಲು ನಮ್ಮ ಪೂರ್ವಜರು ಯಾವ ಯಾವ ಕ್ರಮ ಕೈಗೊಳ್ಳುತ್ತಿದ್ದರು ಎಂಬುದನ್ನು ಮರೆತಾಗ ದುರಂತಗಳು ಸಂಭವಿಸುತ್ತವೆ. ಹಿಂದಿನ ಕಾಲದ ನಮ್ಮ ರೈತರು ಅತಿ ಆಸೆಯಿಂದ ಗತಿಗೆಟ್ಟವರಾಗಿರಲಿಲ್ಲ. ಕಂಬಾರ, ಕುಂಬಾರ, ಹಡಪದ, ಮಡಿವಾಳ, ಬಡಗಿ ಮುಂತಾದ 12 ಮಂದಿ ಆಯಗಾರರ ಕುಟುಂಬಗಳಿಗೂ ಆಹಾರಧಾನ್ಯ ಪೂರೈಸುತ್ತ, ಇದ್ದುದರಲ್ಲೇ ಸಂತೃಪ್ತಿಯಿಂದ ಬದುಕುವವರಾಗಿದ್ದರು. ಇಂಥ ಸರಳ ಸಹಜ ಕೃಷಿ ಸಂಸ್ಕೃತಿಗೆ ಹತ್ತು ಸಾವಿರ ವರ್ಷಗಳ ಇತಿಹಾಸವಿದೆ. (ಕೃಷಿ ಸಂಸ್ಕೃತಿಯೇ ಋಷಿ ಸಂಸ್ಕೃತಿಗೆ ಮೂಲ ಎಂದು ಘನ ವಿದ್ವಾಂಸರಾದ ಪ್ರೊ. ಎ.ಎಸ್. ಹಿಪ್ಪರಗಿ ಅವರು ಹೇಳುತ್ತಾರೆ.) ಬೆಳೆಯನ್ನು ಕೊಯ್ದಮೇಲೆ ಹೊಲ ಕಾಯಬೇಕಿಲ್ಲ. ಆದರೆ ಬೆಳೆ ಕೊಯ್ಯುವವರೆಗೆ ಕ್ರಿಯೆ ಮತ್ತು ಅರಿವು ಒಂದಾಗಿರಬೇಕಾಗುತ್ತದೆ ಎಂದು ಮುದ್ದಣ ತಿಳಿಸುತ್ತಾನೆ. ಫಲವನ್ನು ಹೊತ್ತ ಪೈರಿನ ಹಾಗೆ, ಪೈರಿನೊಂದಿಗಿನ ಫಲದ ಹಾಗೆ. ಅರಿವು ಆಚರಣೆಯಲ್ಲಿ ಇರಬೇಕು; ಆಚರಣೆ ಅರಿವಿಗೆ ಅಂಟಿಕೊಂಡಿರಬೇಕು. ಈ ಸಾಧನೆ ಮಾಡಿದಾತ ಶಿವಸ್ವರೂಪಿಯೇ ಆಗುವನು.

***

share
ವಾರ್ತಾಭಾರತಿ
ವಾರ್ತಾಭಾರತಿ
Next Story
X