Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉ.ಪ್ರದೇಶದಲ್ಲಿ ದಲಿತ ಯುವಕನ ಹತ್ಯೆ:...

ಉ.ಪ್ರದೇಶದಲ್ಲಿ ದಲಿತ ಯುವಕನ ಹತ್ಯೆ: ಗ್ರಾಮ ತೊರೆಯುತ್ತಿರುವ ದಲಿತರು

ಮೇಲ್ವರ್ಗದವರಿಂದ ದಲಿತ ಯುವಕರ ಹಿಟ್ ಲಿಸ್ಟ್!

ವಾರ್ತಾಭಾರತಿವಾರ್ತಾಭಾರತಿ7 April 2018 7:45 PM IST
share
ಉ.ಪ್ರದೇಶದಲ್ಲಿ ದಲಿತ ಯುವಕನ ಹತ್ಯೆ: ಗ್ರಾಮ ತೊರೆಯುತ್ತಿರುವ ದಲಿತರು

ಮೀರತ್, ಎ.7: ಎಪ್ರಿಲ್ 2ರಂದು ವಿವಿಧ ದಲಿತ ಸಂಘಟನೆಗಳು ನಡೆಸಿದ ಭಾರತ್ ಬಂದ್ ವೇಳೆ ದಲಿತರನ್ನು ಸಂಘಟಿಸಿ ಬಂದ್ ಯಶಸ್ವಿಗೊಳಿಸಿದ್ದ ಉ.ಪ್ರದೇಶದ ಶೋಭಾಪುರದ 28ರ ಹರೆಯದ ಗೋಪಿ ಪಾರ್ಯ ಎಂಬ ದಲಿತ ಯುವಕನನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದ್ದು, ಘಟನೆಯಿಂದ ಆಘಾತಕ್ಕೀಡಾಗಿರುವ ದಲಿತ ಸಮುದಾಯದ ಹಲವರು ಗ್ರಾಮ ತೊರೆದು ಸುರಕ್ಷಿತ ಪ್ರದೇಶಗಳಿಗೆ ತೆರಳುತ್ತಿದ್ದಾರೆ.

ಭಾರತ್ ಬಂದ್ ವೇಳೆ ಶೋಭಾಪುರದಲ್ಲಿ ಪ್ರತಿಭಟನೆಯ ಮುಂಚೂಣಿಯಲ್ಲಿದ್ದ 83 ದಲಿತ ಯುವಕರ ಹೆಸರುಗಳುಳ್ಳ ಹಿಟ್ ಲಿಸ್ಟನ್ನು ಸಿದ್ಧಪಡಿಸಲಾಗಿದೆ. ಇದನ್ನು ಮೇಲ್ಜಾತಿಗೆ ಸೇರಿದ ವ್ಯಕ್ತಿಗಳೇ ತಯಾರಿಸಿದ್ದಾರೆ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ. ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಹೆಸರು ಗೋಪಿ ಪಾರ್ಯ ಅವರದ್ದು.

 ಶೋಭಾಪುರದಲ್ಲಿ ಗೋಪಿ ಪಾರ್ಯ ದಲಿತರ ಮಧ್ಯೆ ಜನಪ್ರಿಯರಾಗುತ್ತಿರುವುದನ್ನು ಸಹಿಸದ ಮೇಲ್ಜಾತಿಯವರು ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಈಗ ಈ ಪಟ್ಟಿಯಲ್ಲಿ ಹೆಸರಿರುವ ಬಹುತೇಕ ಎಲ್ಲ ಯುವಕರು ಗ್ರಾಮ ಬಿಟ್ಟು ಬೇರೆ ಕಡೆ ಅವಿತುಕೊಂಡಿದ್ದಾರೆ. ಇದೀಗ ಈ ಪಟ್ಟಿಯನ್ನು ಪೊಲೀಸರಿಗೆ ನೀಡಲಾಗಿದೆ. ಆದರೆ ದಲಿತರ ಭಯ ಕಡಿಮೆಯಾಗಿಲ್ಲ ಎಂದು 41ರ ಹರೆಯದ ಅಶೋಕ್ ಕುಮಾರ್ ತಿಳಿಸಿದ್ದಾರೆ.

ಇಂಥ ಉದ್ವಿಗ್ನ ಪರಿಸ್ಥಿತಿಯ ಮಧ್ಯೆಯೂ ಕೆಲವು ಯುವಕರು ಇನ್ನೂ ಗ್ರಾಮದಲ್ಲೇ ಉಳಿದಿದ್ದು ಎಪ್ರಿಲ್ 14ರಂದು ಅಂಬೇಡ್ಕರ್ ಜಯಂತಿ ಆಚರಿಸಿದ ನಂತರವೇ ಗ್ರಾಮ ತೊರೆಯುವುದಾಗಿ ನಿರ್ಧರಿಸಿದ್ದಾರೆ. ಗೋಪಿ ಪರ್ಯಾ ಹತ್ಯೆ ಮತ್ತು ಅನೇಕ ಯುವಕರು ಊರು ಬಿಟ್ಟಿರುವುದರಿಂದ ಈ ಬಾರಿಯ ಅಂಬೇಡ್ಕರ್ ಜಯಂತಿ ಹಿಂದಿನಂತೆ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಗೋಪಿ ಪಾರ್ಯ ಮೇಲೆ ಐದು ಗುಂಡುಗಳನ್ನು ಹಾರಿಸಿ ಹತ್ಯೆ ಮಾಡಲಾಗಿದೆ. ಘಟನೆಗೆ ಸಂಬಂಧಪಟ್ಟಂತೆ ಆರೋಪಿಗಳಾದ ಮನೋಜ್ ಗುಜ್ಜರ್, ಆಶಿಶ್ ಗುಜ್ಜರ್, ಕಪಿಲ್ ರಾಣಾ ಮತ್ತು ಗಿರಿಧರ್ ಎಂಬವರನ್ನು ಬಂಧಿಸಲಾಗಿದೆ. ಇವರ ಮೇಲೆ ಐಪಿಸಿ ಸೆಕ್ಷನ್ 302 (ಹತ್ಯೆ), 504 ಶಾಂತಿ ಕದಡಲು ಯತ್ನ) ಮತ್ತು 506 (ಬೆದರಿಕೆ) ಹಾಗೂ ಎಸ್ಸಿ/ಎಸ್ಟಿ ಕಾಯ್ದೆಯಡಿ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೋಪಿ ತಂದೆ ತಾರಾಚಂದ್ ಬಹುಜನ ಸಮಾಜ ಪಕ್ಷದ ಸದಸ್ಯರಾಗಿದ್ದು ಗೋಪಿ ಕೂಡಾ ಬಿಎಸ್ಪಿ ಕಾರ್ಯಕರ್ತರಾಗಿದ್ದರು. ಅವರ ಸಹೋದರ 24ರ ಹರೆಯದ ಪ್ರಶಾಂತ್ ಹೆಸರು ಕೂಡಾ ಹಿಟ್ ಲಿಸ್ಟ್‌ನಲ್ಲಿದ್ದು, ಐದನೇ ಸ್ಥಾನದಲ್ಲಿದೆ.

ಶೋಭಾಪುರದಲ್ಲಿ ಕಳೆದ ಮೂರು ದಶಕಗಳಿಂದ ದಲಿತರು ಮತ್ತು ಮೇಲ್ಜಾತಿಯವರ ಮಧ್ಯೆ ಸಂಘರ್ಷ ನಡೆಯುತ್ತಿದ್ದರೂ ಈ ಹಂತಕ್ಕೆ ಎಂದೂ ತಲುಪಿರಲಿಲ್ಲ ಎಂದು ತಾರಾಚಂದ್ ತಿಳಿಸಿದ್ದಾರೆ. ಶೋಭಾಪುರದಲ್ಲಿ ಹಲವು ಗಲಭೆಗಳು ನಡೆದಿವೆ. ಈ ಸಂದರ್ಭದಲ್ಲಿ ಚೂರಿ ಇರಿತಗಳು ನಡೆದ ಉದಾಹರಣೆಗಳಿವೆ. ಆದರೆ ಈ ರೀತಿ ಬರ್ಬರವಾಗಿ ಹತ್ಯೆ ಮಾಡಿರುವುದು ಇದೇ ಮೊದಲು ಎಂದು ದುಃಖತಪ್ತ ತಾರಾಚಂದ್ ತಿಳಿಸಿದ್ದಾರೆ.

ಎಸ್ಸಿ/ಎಸ್ಟಿ ಕಾಯ್ದೆಯಲ್ಲಿ ಸಡಿಲಿಕೆ ಮಾಡಿದ ನ್ಯಾಯಾಲಯದ ಆದೇಶದ ವಿರುದ್ಧ ವಿವಿಧ ದಲಿತ ಸಂಘಟನೆಗಳು ಭಾರತ್ ಬಂದ್‌ಗೆ ಕರೆ ನೀಡಿದ್ದವು. ಈ ವೇಳೆ ಹಲವೆಡೆ ಹಿಂಸಾಚಾರಗಳು ಭುಗಿಲೆದ್ದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X