Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕನ್ನಡಿಗರಿಗೆ ಕನ್ನಡ ಬಳಸಲು ದಟ್ಟ...

ಕನ್ನಡಿಗರಿಗೆ ಕನ್ನಡ ಬಳಸಲು ದಟ್ಟ ದಾರಿದ್ರ ಅಂಟಿಕೊಂಡಿದೆ: ಪ್ರೊ.ಎಸ್.ಜಿ.ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ7 April 2018 8:28 PM IST
share
ಕನ್ನಡಿಗರಿಗೆ ಕನ್ನಡ ಬಳಸಲು ದಟ್ಟ ದಾರಿದ್ರ ಅಂಟಿಕೊಂಡಿದೆ: ಪ್ರೊ.ಎಸ್.ಜಿ.ಸಿದ್ದರಾಮಯ್ಯ

ಬೆಂಗಳೂರು, ಎ.7: ವಿಶ್ವದಾದ್ಯಂತ ಹರಡಿಕೊಂಡಿರುವ ಕನ್ನಡ ಭಾಷೆ ಇಂದು ಆತಂಕದ ಸ್ಥಿತಿಯಲ್ಲಿದ್ದು, ಕನ್ನಡಿಗರಿಗೆ ಕನ್ನಡ ಬಳಸಲು ಈಗ ದಟ್ಟ ದಾರಿದ್ರ ಅಂಟಿಕೊಂಡಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಹೇಳಿದ್ದಾರೆ.

ನಗರದ ಮಲ್ಲೇಶ್ವರ ಸರಕಾರಿ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಕನ್ನಡ ಸಾಹಿತ್ಯ ಪರಿಷತ್‌ನ 2ನೆ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕನ್ನಡಿಗರಲ್ಲಿ ಭಾಷೆ ಬಗೆಗಿನ ಇಚ್ಛಾಶಕ್ತಿ ಕೊರತೆಯಾಗಿದೆ ಎಂದರು.

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕನ್ನಡ ಭಾಷೆ ಅಳಿಯುತ್ತಿದೆ. ಇಲ್ಲಿನ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳ ಪ್ರಭಾವ ಎಷ್ಟು ಎಂಬುದು ಇದರಿಂದ ಅರ್ಥವಾಗುತ್ತದೆ. ರಾಜ್ಯದಲ್ಲಿ ಕನ್ನಡ ಶಾಲೆಗಳನ್ನು ಮುಚ್ಚಿದರೆ ಅದು ಕನ್ನಡ ಭಾಷೆ ನಾಶಕ್ಕೆ ದಾರಿ ಎಂದು ಆಂತಕ ವ್ಯಕ್ತಪಡಿಸಿದರು.

ಸಮ್ಮೇಳನಾಧ್ಯಕ್ಷ ಬೇಂದ್ರೆ ಕೃಷ್ಣಪ್ಪ ಮಾತನಾಡಿ, ವಿಶ್ವ ವಾಣಿಜ್ಯೀಕರಣದಲ್ಲಿ ಜಗತ್ತಿನ ವ್ಯಾಪಾರ ವ್ಯವಹಾರದ ನಗರವಾದ ಬೆಂಗಳೂರಿನಲ್ಲಿ ಕನ್ನಡ ಇಂದು ಉಸಿರುಗಟ್ಟಿದ ವಾತಾವರಣದಲ್ಲಿದೆ. ರಾಜ್ಯದಲ್ಲಿರುವ ಕನ್ನಡ ಸಂಸ್ಥೆಗಳು ಇಂದು ವ್ಯಾಪಾರಿ ಕೇಂದ್ರಗಳಾಗಿ ನಿರ್ಮಾಣವಾಗುತ್ತಿವೆ. ಈಗ ಆಂಗ್ಲಭಾಷಾ ಮೋಹದಿಂದ ಇಂಗ್ಲಿಷ್ ಮಾಧ್ಯಮ ಶಾಲೆಗಳ ಹೆಚ್ಚಳದಲ್ಲಿ ಕನ್ನಡದ ಅಸ್ಮಿತೆಯನ್ನು ಹೇಗೆ ಉಳಿಸಿಕೊಳ್ಳಬೇಕು ಎಂಬ ಪ್ರಶ್ನೆ ಕಾಡುತ್ತಿದೆ ಎಂದರು.

ಬೆಂಗಳೂರಿಗೆ ವಲಸಿಗರು ದಂಡು ದಂಡಾಗಿ ಬರುತ್ತಿದ್ದಾರೆ. ನಾವು ಇಲ್ಲಿರುವ ಎಲ್ಲರನ್ನೂ ಕರ್ನಾಟಕದವರು ಎಂದು ಕರೆಯುತ್ತೇವೆ. ಕರ್ನಾಟಕದವರು ಆಗುವುದು ಬೇರೆ ಕನ್ನಡಿಗರಾಗಿ ಬಾಳುವುದು ಬೇರೆ ಎಂದ ಅವರು, ಈ ಕಾರಣಕ್ಕಾಗಿ ದ.ರಾ. ಬೇಂದ್ರೆಯವರ ಕವಿತೆ ‘ಒಂದೇ ಒಂದೇ ಒಂದೇ ಕರ್ನಾಟಕ ಒಂದೇ’ ಹಾಡಿನ ಸಾಲುಗಳನ್ನು ಉಲ್ಲೇಖಿಸಿದರು.

ನಾವೆಲ್ಲ ಆತ್ಮವಂಚಕರು: ನಾವು ಆತ್ಮವಂಚನೆ ಮಾಡಿಕೊಳ್ಳುತ್ತಿದ್ದು, ನಮ್ಮ ಮಕ್ಕಳನ್ನು ಇಂಗ್ಲಿಷ್ ಮಾಧ್ಯಮದ ಶಾಲೆಗೆ ಸೇರಿಸುತ್ತಿದ್ದೇವೆ. ಬಾಯಿ ಉಪಚಾರಕ್ಕೆ ಮಾತ್ರ ಕನ್ನಡ ಮಾತನಾಡುತ್ತಿದ್ದೇವೆ. ಅದನ್ನು ಬಿಟ್ಟು ನಾವು ರಾಜ್ಯದಲ್ಲಿ ವಾಸಿಸುವ ಎಲ್ಲರಿಗೂ ಕನ್ನಡ ಕಲಿಸುವುದರ ಜೊತೆಗೆ ನಮ್ಮ ಮಕ್ಕಳಿಗೆ ಮೊದಲು ಕನ್ನಡ ಕಲಿಸಬೇಕು ಎಂದು ಸಲಹೆ ನೀಡಿದರು.

ಸಮ್ಮೇಳನದಲ್ಲಿ ಮೊದಲಿಗೆ ಕನ್ನಡ ರಾಜರತ್ನ ಜಿ.ಪಿ. ರಾಜರತ್ನಂ ಮಹಾದ್ವಾರದಲ್ಲಿ ಕನ್ನಡ ಧ್ವಜಾರೋಹಣ ಮಾಡಿ ಚಾಲನೆ ನೀಡಲಾಯಿತು. ಧ್ವಜಾರೋಹಣದಲ್ಲಿ ಶಾಸಕ ಡಾ. ಅಶ್ವತ್‌ನಾರಾಯಣ್, ಪರಿಷತ್ತಿನ ಅಧ್ಯಕ್ಷ ಕೆ. ಗಣೇಶರಾವ್ ಕೇಸರ್ಕರ, ಮಾಜಿ ಅಧ್ಯಕ್ಷ ಸಮಿವುಲ್ಲಾ ಖಾನ್ ಉಪಸ್ಥಿತರಿದ್ದರು.

ಅದ್ದೂರಿ ಮೆರವಣಿಗೆ: ಸಮ್ಮೇಳನ ಆರಂಭಕ್ಕೂ ಮೊದಲು ಇಲ್ಲಿನ ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಅನಂತರ ಕನ್ನಡ ರಥದಲ್ಲಿ ಸಮ್ಮೇಳನಾಧ್ಯಕ್ಷ ಬೇಂದ್ರೆ ಕೃಷ್ಣಪ್ಪ ಅವರನ್ನು ಮಲ್ಲೇಶ್ವರ ಸಂಪಿಗೆ ಮುಖ್ಯರಸ್ತೆ, ಮಾರ್ಗೋಸಾ ರಸ್ತೆಗಳ ಮೂಲಕ ಮೆರವಣಿಗೆ ಮಾಡಲಾಯಿತು. ಇದೇ ವೇಳೆ ಡೊಳ್ಳು ಕುಣಿತ, ಪಟ ಕುಣಿತ, ವಾದ್ಯಗೋಷ್ಠಿ ಮುಂತಾದ ಜನಪದ ತಂಡಗಳು, ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು, ಶಾಲಾ ಕಾಲೇಜುಗಳ ಮಕ್ಕಳು, ಕನ್ನಡ ಅಭಿಮಾನಿಗಳು ಭುವನೇಶ್ವರಿ ತಾಯಿಯ ಭಾವಚಿತ್ರದೊಂದಿಗೆ ಅದ್ದೂರಿಯಾಗಿ ಮೆರವಣಿಗೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X