Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನವ ವಿವಾಹಿತ ಯೋಧರ ಒಂಟಿತನ ನೀಗಿಸಲು...

ನವ ವಿವಾಹಿತ ಯೋಧರ ಒಂಟಿತನ ನೀಗಿಸಲು ಬಿಎಸ್‌ಎಫ್ ಹೊಸ ತಂತ್ರ

ವಾರ್ತಾಭಾರತಿವಾರ್ತಾಭಾರತಿ8 April 2018 8:27 PM IST
share
ನವ ವಿವಾಹಿತ ಯೋಧರ ಒಂಟಿತನ ನೀಗಿಸಲು ಬಿಎಸ್‌ಎಫ್ ಹೊಸ ತಂತ್ರ

ಹೊಸದಿಲ್ಲಿ,ಎ.8: ಬಿಎಸ್‌ಎಫ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯೋಧರಿಗೆ ತಮ್ಮ 30 ವರ್ಷಗಳ ಸೇವಾವಧಿಯಲ್ಲಿ ಸರಾಸರಿ ಐದು ವರ್ಷಗಳಷ್ಟು ಕಾಲ ಮಾತ್ರ ಕುಟುಂಬದೊಂದಿಗೆ ಕಳೆಯಲು ಸಾಧ್ಯ. ಈ ಹಿನ್ನೆಲೆಯಲ್ಲಿ ನವ ವಿವಾಹಿತ ದಂಪತಿಗಳಿಗಾಗಿ ದೇಶಾದ್ಯಂತ 190ಕ್ಕೂ ಅಧಿಕ ‘ಜವಾನ್ ಗೆಸ್ಟ್ ಹೌಸ್’ಗಳನ್ನು ಸ್ಥಾಪಿಸಲು ಬಿಎಸ್‌ಎಫ್ ನಿರ್ಧರಿಸಿದೆ.

ದೇಶದ ಪಶ್ಚಿಮ ಮತ್ತು ಪೂರ್ವ ಗಡಿಗಳಲ್ಲಿಯ ಎಂಟು ಮುಂಚೂಣಿ ನೆಲೆಗಳಲ್ಲಿ ಹೊಸದಾಗಿ ಅಥವಾ ಈಗಿರುವ ವಸತಿ ಸೌಲಭ್ಯಗಳನ್ನೇ ಬಳಸಿಕೊಂಡು 2,800ಕ್ಕೂ ಅಧಿಕ ಸುಸಜ್ಜಿತ ಮನೆಗಳನ್ನು ನಿರ್ಮಿಸಲಾಗುವುದು. ಪಡೆಯ 186 ತಾಣಗಳಲ್ಲಿ ಮತ್ತು ಇತರ ಕೆಲವು ಕೇಂದ್ರಗಳಲ್ಲಿ ತಲಾ 15 ಸ್ಟುಡಿಯೋ ಅಪಾರ್ಟ್‌ಮೆಂಟ್ ನಂತಹ ಸೌಲಭ್ಯಗಳನ್ನು ಸ್ಥಾಪಿಸುವ ಪ್ರಸ್ತಾಪಕ್ಕೆ ಕೇಂದ್ರ ಗೃಹ ಸಚಿವಾಲಯವು ಇತ್ತೀಚಿಗೆ ಅನುಮತಿಯನ್ನು ನೀಡಿದೆ ಎಂದು ಬಿಎಸ್‌ಎಫ್‌ನ ಮಹಾ ನಿರ್ದೇಶಕ ಕೆ.ಕೆ.ಶರ್ಮಾ ಅವರು ತಿಳಿಸಿದರು.

ಯೋಧರು ತಮ್ಮ ಕುಟುಂಬಗಳೊಂದಿಗೆ ಹೆಚ್ಚುಕಾಲವನ್ನು ಕಳೆಯುವಂತಾಗಲು ದೇಶಾದ್ಯಂತ 192 ಕಡೆಗಳಲ್ಲಿ ಇಂತಹ ಸೌಲಭ್ಯಗಳನ್ನು ನಾವು ನಿರ್ಮಿಸುತ್ತಿದ್ದೇವೆ ಎಂದ ಅವರು ಕುಟುಂಬದಿಂದ ದೂರವಾಗಿ ಒಂಟಿಯಾಗಿ ಬದುಕುವುದು ನವವಿವಾಹಿತರ ಮೇಲೆ ಹೆಚ್ಚಿನ ವ್ಯತಿರಿಕ್ತ ಪರಿಣಾಮಗಳನ್ನುಂಟು ಮಾಡುತ್ತದೆ. ಆದ್ದರಿಂದ ಈ ಸೌಲಭ್ಯಗಳನ್ನು ಬಳಸಿಕೊಳ್ಳಲು ಅವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು ಎಂದರು.

ಅಧಿಕಾರಿಗಳು ಮತ್ತು ಕಿರಿಯ ಅಧಿಕಾರಿಗಳಿಗೆ ಗೆಸ್ಟ್‌ಹೌಸ್‌ಗಳಿವೆಯಾದರೂ ಕಾನ್‌ಸ್ಟೇಬಲ್ ಮತ್ತು ಹೆಡ್ ಕಾನ್‌ಸ್ಟೇಬಲ್ ದರ್ಜೆಯ ಯೋಧರಿಗೆ ಈ ಸೌಲಭ್ಯವಿಲ್ಲ. ಹೀಗಾಗಿ ನೂತನ ಗೆಸ್ಟ್‌ಹೌಸ್‌ಗಳಲ್ಲಿ ತಮ್ಮ ಕುಟುಂಬದೊಂದಿಗೆ ನಿರ್ದಿಷ್ಟ ಅವಧಿಗೆ ವಾಸವಾಗಿರಲು ಅವರಿಗೆ ಅವಕಾಶ ನೀಡಲಾಗುವುದು. ಮಲಗುವ ಕೋಣೆ, ಅಡುಗೆ ಕೋಣೆ,ಟಿವಿ ಸೇರಿದಂತೆ ಎಲ್ಲ ರೀತಿಯಿಂದಲೂ ಇವು ಸುಸಜ್ಜಿತವಾಗಿರುತ್ತವೆ ಎಂದರು.

ಗಡಿಯ ಮುಂಚೂಣಿ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯೋಧರು ಹೊರಗೆ ಬಾಡಿಗೆಯ ಮನೆಗಳಲ್ಲಿ ಸಹ ತಮ್ಮ ಕುಟುಂಬಗಳೊಂದಿಗೆ ವಾಸವಿರಲು ಅನುಮತಿ ನೀಡಲಾಗುವುದು. ಆದರೆ ಇದಕ್ಕೂ ಮುನ್ನ ಆ ಪ್ರದೇಶಗಳಲ್ಲಿ ಅವರ ಸುರಕ್ಷತೆಗೆ ಯಾವುದೇ ಬೆದರಿಕೆ ಇಲ್ಲವೆನ್ನುವುದನ್ನು ಖಚಿತ ಪಡಿಸಿಕೊಳ್ಳಲಾಗುವುದು ಎಂದೂ ಶರ್ಮಾ ತಿಳಿಸಿದರು.

1965ರಲ್ಲಿ ಸ್ಥಾಪನೆಗೊಂಡ ಬಿಎಸ್‌ಎಫ್ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಗಳೊಂದಿಗಿನ ಗಡಿಗಳ ರಕ್ಷಣೆಯ ಹೊಣೆ ಹೊತ್ತಿದ್ದು, ಸುಮಾರು 2.5 ಲಕ್ಷ ಸಿಬ್ಬಂದಿಯನ್ನು ಹೊಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X