Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಲ್ಪೆಯಲ್ಲಿ ಮತದಾರ ಜಾಗೃತಿಗೆ ಚಾಲನೆ...

ಮಲ್ಪೆಯಲ್ಲಿ ಮತದಾರ ಜಾಗೃತಿಗೆ ಚಾಲನೆ ನೀಡಿದ ಶೀರೂರು ಶ್ರೀ

‘ಬಿಜೆಪಿ ಟಿಕೆಟ್ ನಿರೀಕ್ಷೆ, ತಪ್ಪಿದರೆ ಪಕ್ಷೇತರನಾಗಿ ಸ್ಪರ್ಧೆ ಖಂಡಿತ’

ವಾರ್ತಾಭಾರತಿವಾರ್ತಾಭಾರತಿ8 April 2018 9:23 PM IST
share
ಮಲ್ಪೆಯಲ್ಲಿ ಮತದಾರ ಜಾಗೃತಿಗೆ ಚಾಲನೆ ನೀಡಿದ ಶೀರೂರು ಶ್ರೀ

ಮಲ್ಪೆ, ಎ.8: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಕ್ಷೇತ್ರದಿಂದ ತನಗೆ ಬಿಜೆಪಿಯ ಟಿಕೆಟ್ ದೊರೆಕುವ ನಿರೀಕ್ಷೆಯಲ್ಲಿದ್ದೇನೆ. ಒಂದು ವೇಳೆ ಅಲ್ಲಿ ಟಿಕೆಟ್ ಸಿಗದೇ ಹೋದರೆ ಪಕ್ಷೇತರನಾಗಿ ಕಣಕ್ಕಿಳಿಯುವುದು ಖಚಿತ. ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ’ ಎಂದು ಶೀರೂರು ಮಠದ ಶ್ರೀ ಲಕ್ಷ್ಮೀವರತೀರ್ಥರು ಸ್ಪಷ್ಟವಾಗಿ ಸಾರಿದ್ದಾರೆ.

ಕ್ಷೇತ್ರದ ಮತದಾರರಲ್ಲಿ ಜಾಗೃತಿ ಮೂಡಿಸಿ ಶೇಕಡಾವಾರು ಮತದಾನವನ್ನು ಹೆಚ್ಚಿಸುವ ಸಲುವಾಗಿ ಮಲ್ಪೆ ವಡಭಾಂಡೇಶ್ವರದ ಬಲರಾಮ ದೇವಸ್ಥಾನದಲ್ಲಿ ರವಿವಾರ ಸಂಜೆ ವಿಶೇಷ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಿದ ಶ್ರೀಗಳು ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು.

ರಾಜ್ಯದ ಯಾವ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿ ಆಯ್ಕೆ ಅಂತಿಮವಾಗಿಲ್ಲ. ಅಭ್ಯರ್ಥಿಗಳ ಆಯ್ಕೆಗಾಗಿ ಸರ್ವೇ ನಡೆಯುತ್ತಿದೆ. ನನಗೆ ಟಿಕೆಟ್ ಸಿಗುವ ನಿರೀಕ್ಷೆ ಇದೆ. ಒಂದು ವೇಳೆ ಸಿಗದೇ ಹೋದರೆ ಹಿಂದೆ ಹೇಳಿದಂತೆ ಪಕ್ಷೇತರನ್ನಾಗಿ ಕಣಕ್ಕೆ ಇಳಿಯುತ್ತೇನೆ. ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಶೀರೂರುಶ್ರೀ ಕಡ್ಡಿ ಮುರಿದಂತೆ ಪುನರುಚ್ಚರಿಸಿದರು.

ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸ ಕಾರ್ಯಗಳು ಕುಂಠಿತಗೊಂಡಿವೆ. ಅಭಿವೃದ್ಧಿಯೇ ನಮ್ಮ ಮೂಲ ಮಂತ್ರವಾಗಿದ್ದು, ಗ್ರಾಮೀಣ ಭಾಗವನ್ನು ಕೇಂದ್ರವಾಗಿರಿಸಿ ಕೊಂಡು ಪ್ರಚಾರ ನಡೆಸುತ್ತೇನೆ. ಯಾರು ಅಭಿವೃದ್ಧಿಗೆ ಆದ್ಯತೆ ನೀಡುತ್ತಾರೋ ಅವರನ್ನೇ ಆಯ್ಕೆ ಮಾಡುವ ಅಗತ್ಯವೂ ಇದೆ ಎಂದರು.

ಅಭ್ಯರ್ಥಿಗಳ ಆಯ್ಕೆ ಪಟ್ಟಿ ಅಂತಿಮವಾದ ಬಳಿಕವೇ ನಾನು ಚುನಾವಣಾ ಪ್ರಚಾರಕ್ಕೆ ತೆರಳುತ್ತೇನೆ. ಸದ್ಯ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ನಾನು ಚುನಾವಣಾ ಪ್ರಚಾರಕ್ಕೆ ತೆರಳುವುದು ಕಷ್ಟ. ಆದರೆ ಚುನಾವಣೆಯಲ್ಲಿ ಮತದಾರರ ಭಾಗವಹಿಸುವಿಕೆ ಹೆಚ್ಚಳವಾಗಬೇಕಂಬ ಉದ್ದೇಶದಿಂದ ದೇವರಿಗೆ ಪ್ರಾರ್ಥನೆ ಮಾಡಿದ್ದೇನೆ ಎಂದರು.

ಹಿಂದೆಲ್ಲ ಶೇ.60-70ರಷ್ಟು ಮತದಾನವಾಗಿರುವ ಬಗ್ಗೆ ಕೇಳಿದ್ದೇನೆ. ಆದರೆ ಈ ಬಾರಿ ಚುನಾವಣೆಯಲ್ಲಿ ಶೇ.90ಕ್ಕೂ ಅಧಿಕ ಮತದಾನವಾಗಬೇಕೆನ್ನುವ ಉದ್ದೇಶ ಇಟ್ಟುಕೊಂಡಿದ್ದೇನೆ. ಜಿಲ್ಲಾಡಳಿತ ಈಗಾಗಲೇ ಈ ಬಗ್ಗೆ ಹಲವು ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಅದಕ್ಕೆ ಪೂರಕವೆಂಬಂತೆ ನಾನು ಉಡುಪಿ ವಿಧಾನ ಸಭಾ ಕ್ಷೇತ್ರದ ಆಯ್ದ ಪ್ರದೇಶದಲ್ಲಿ ಜಾಗೃತಿ ಮೂಡಿಸಲಿದ್ದೇನೆ. ಇದಕ್ಕಾಗಿ ನೀಲಿ ನಕ್ಷೆ ಸಿದ್ಧವಾಗಿದ್ದು, ಚುನಾವಣಾಧಿಕಾರಿಗಳಿಗೆ ಮಾಹಿತಿ ಕೊಟ್ಟು ಸೋಮವಾರದಿಂದ ಆರಂಭಿಸುತ್ತೇನೆ ಎಂದರು.

ದೇವರಿಗೆ ಪ್ರಾರ್ಥನೆ: ಶೀರೂರು ಮಠದಿಂದ 5:15ಕ್ಕೆ ವಡಭಾಂಡೇಶ್ವರ ದೇವಳಕ್ಕೆ ಆಗಮಿಸಿದ ಶೀರೂರು ಶ್ರೀ ನೇರವಾಗಿ ದೇವಳ ಪ್ರವೇಶಿಸಿ ದೇವರ ಗರ್ಭಗುಡಿ ಹೊರಗಿನಿಂದ ಆರತಿ ಬೆಳಗಿ ಈ ಬಾರಿ ಶೇಕಡವಾರು ಮತದಾನ ಹೆಚ್ಚಳವಾಗುವಂತೆ ಪ್ರಾರ್ಥಿಸಿದರು.

ಇಂಥ ವಿಷಯಗಳಲ್ಲಿ ಮನುಷ್ಯರಿಗಿಂತ ದೇವರ ಅನುಗ್ರಹ ಅಗತ್ಯವಾಗಿ ಬೇಕಿದೆ. ಅದಕ್ಕಾಗಿಯೇ ಬಲರಾಮ ದೇವರಲ್ಲಿ ನನ್ನ ಮೊರೆ ಇಟ್ಟಿದ್ದೇನೆ. ದೇವರ ಆಶೀರ್ವಾದ ಪಡೆದು ಮುಂದೆ ನಡೆದರೆ ಎಲ್ಲವೂ ಸಾಧ್ಯ ಎಂದರು.

ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥರು ನಿಮ್ಮ ರಾಜಕೀಯ ನಡೆಯ ಬಗ್ಗೆ ಹೊಂದಿರುವ ಮನೋಭಾವನೆಯ ಬಗ್ಗೆ ಕೇಳಿದಾಗ, ಗುರುಗಳು ಏನೇ ಹೇಳಿದ್ದರೂ ಸಂತೋಷ. ಆ ಬಗ್ಗೆ ಮಾತನಾಡುವುದಿಲ್ಲ. ಅವರು ನಮ್ಮ ದೊಡ್ಡ ಅಣ್ಣನಂತೆ. ಅವರಿಗೊಂದು ಮಣೆ ಹಾಕುತ್ತೇವೆ ಎಂದರು.

ಉಡುಪಿಯ ಅಷ್ಟ ಮಠ ಹಾಗೂ ಶ್ರೀಕೃಷ್ಣ ಮಠ ನವಗೃಹಗಳಿದ್ದಂತೆ. ಕೃಷ್ಣನ ಸನ್ನಿಧಿ ಸೂರ್ಯನಂತೆ ವಿಶೇಷ ಶಕ್ತಿ ಹೊಂದಿದೆ. ಉಳಿದಂತೆ ಗುರು, ಶುಕ್ರ, ಶನಿಗಳು ಅದರ ಸುತ್ತ ಸುತ್ತುತ್ತಾರೆ ಎಂದು ಶೀರೂರುಶ್ರೀ ಹೇಳಿದರು.

ಶೀರೂರುಶ್ರೀಗೆ ಜೆಡಿಎಸ್ ಆಹ್ವಾನ

ಶ್ರೀರೂರು ಶ್ರೀಗಳೊಂದಿಗೆ ಸತತ ಸಂಪರ್ಕದಲ್ಲಿದ್ದು, ಅವರಿಗೆ ರಾಜ್ಯದ ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗ್ಡೆ ಕುರಿತಂತೆ ಅತೀವ ಗೌರವವಿದೆ. ಶೀರೂರುಶ್ರೀಗಳಿಗೆ ನಮ್ಮ ಪಕ್ಷದಿಂದ ಕಣಕ್ಕಿಳಿಯಲು ಆಹ್ವಾನ ಕೊಟ್ಟಿದ್ದೇವೆ. ಆದರೆ ಇಂದು ಅವರು ಬಿಜೆಪಿ ಟಿಕೆಟ್ ಸಿಗದೇ ಹೋದರೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿರುವುದು ಬೇಸರ ತಂದಿದೆ. ಆದರೂ ಅವರ ಗೆಲುವಿಗೆ ನಾವು ಶ್ರಮಿಸುತ್ತೇವೆ ಎಂದು ಜೆಡಿಯುನ ಜಿಲ್ಲಾಧ್ಯಕ್ಷ ರಾಜೀವ್ ಕೋಟ್ಯಾನ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X