ಜುಬೈಲ್ನಲ್ಲಿ ಕಾಂಗ್ರೆಸ್ ಪಕ್ಷದ ಸಮಾವೇಶ
ಜುಬೈಲ್, ಎ.9: ಕರ್ನಾಟಕದಲ್ಲಿ ಮೇ 12ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಸೌದಿ ಅರೇಬಿಯಾದ ಎನ್.ಆರ್.ಐ. ಘಟಕದ ಈಸ್ಟರ್ನ್ ಪ್ರಾವಿನ್ಸ್ ವತಿಯಿಂದ ಕಾಂಗ್ರೆಸ್ ಸಮಾವೇಶವು ಶನಿವಾರ ರಾತ್ರಿ ಜುಬೈಲ್ನ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ.
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಬಿ.ಎ.ಮೊಯ್ದಿನ್ ಬಾವ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ಮಾಜಿ ಸಂಸದ ಅಝರುದ್ದೀನ್ ಮಾತನಾಡಿದರು.
ಕಾಪು ಶಾಸಕ ವಿನಯ ಕುಮಾರ್ ಸೊರಕೆ, ಕಾಂಗ್ರೆಸ್ ಪಕ್ಷದ ಸಾಧನೆ, ಜಾತ್ಯತೀತ ನಿಲುವಿನ ಬಗ್ಗೆ ವಿವರಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ ಬೆಳಪು, ಉದ್ಯಮಿಗಳಾದ ಜುಬೈಲ್ನ ಅಲ್ ಮುಝೈನ್ ಗ್ರೂಪ್ ಮುಖ್ಯಸ್ಥ ಝಕರಿಯಾ ಜೋಕಟ್ಟೆ, ಬಿ.ಎಂ.ಮುಮ್ತಾಝ್ ಅಲಿ ಮಾತನಾಡಿದರು.
ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯ ಯು.ಟಿ.ಇಫ್ತಿಕಾರ್, ಉದ್ಯಮಿಗಳಾದ ಇಸ್ಮಾಯೀಲ್ ರಿಯಲ್ಟೆಕ್, ಆಸಿಫ್ ಅಮ್ಯಾಕೊ ಆಸಿಫ್, ಅಲ್ತಾಫ್, ಶಾಬುಲ್ ಸಲ್ಮಾನ್ ಮೊದಲಾದವರು ಉಪಸ್ಥಿತರಿದ್ದರು.
ಇದೇ ಸಂದರ್ಭ ಸಮಾಜ ಸೇವಕ ಶರೀಫ್ ಕಾರ್ಕಳ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಪಕ್ಷದ ಮುಖಂಡರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಕಾಂಗ್ರೆಸ್ ಎನ್.ಆರ್.ಐ. ಘಟಕದ ಈಸ್ಟರ್ನ್ ಪ್ರಾವಿನ್ಸ್ ಅಧ್ಯಕ್ಷ ಎಕ್ಸ್ಪರ್ಟೈಸ್ ಗ್ರೂಪ್ ಆಫ್ ಕಂಪೆನಿಯ ಅಶ್ರಫ್ ಕರ್ನೀರೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಕೆ.ಎಚ್.ಮುಹಮ್ಮದ್ ರಫೀಕ್ ಸೂರಿಂಜೆ ವಂದಿಸಿದರು. ಇಕ್ಬಾಲ್ ಮಲ್ಲೂರು ಕಾರ್ಯಕ್ರಮ ನಿರೂಪಿಸಿದರು.