Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ ಸಬ್‌ಡಿವಿಷನ್ ಪೊಲೀಸ್ ಕಚೇರಿ:...

ಬಂಟ್ವಾಳ ಸಬ್‌ಡಿವಿಷನ್ ಪೊಲೀಸ್ ಕಚೇರಿ: ಇನ್ನೂ ನಿಯುಕ್ತಿಯಾಗದ ಎಎಸ್ಪಿ/ಡಿವೈಎಸ್ಪಿ ಗ್ರೇಡ್‌ನ ಅಧಿಕಾರಿ !

ಬಿ.ಸಿ.ರೋಡ್‌ನ ನಗರ ಪೊಲೀಸ್ ಠಾಣೆಯ ಹಳೆಯ ಕಟ್ಟಡದಲ್ಲಿ ಕಾರ್ಯಚರಿಸುತ್ತಿರುವ ಎಎಸ್ಪಿ ಕಚೇರಿ

ವಾರ್ತಾಭಾರತಿವಾರ್ತಾಭಾರತಿ9 April 2018 5:56 PM IST
share
ಬಂಟ್ವಾಳ ಸಬ್‌ಡಿವಿಷನ್ ಪೊಲೀಸ್ ಕಚೇರಿ: ಇನ್ನೂ ನಿಯುಕ್ತಿಯಾಗದ ಎಎಸ್ಪಿ/ಡಿವೈಎಸ್ಪಿ ಗ್ರೇಡ್‌ನ ಅಧಿಕಾರಿ !

ಬಂಟ್ವಾಳ, ಎ. 9: ಬಂಟ್ವಾಳ ಸಬ್‌ಡಿವಿಷನ್ ಪೊಲೀಸ್ ಕಚೇರಿಗೆ ಇದುವರೆಗೂ ಪೂರ್ಣ ಪ್ರಮಾಣದ ಎಎಸ್ಪಿ ಅಥವಾ ಡಿವೈಎಸ್ಪಿ ಅಧಿಕಾರ ಸ್ವೀಕರಿಸಿಲ್ಲ. ಜನವರಿ ತಿಂಗಳಿನಿಂದ ಈ ಹುದ್ದೆ ಖಾಲಿಯಾಗಿದ್ದು, ಹೊಸ ಸಿಬ್ಬಂದಿ ನೇಮಕವಾಗದೆ ಕಚೇರಿ ಕಳೆಗುಂದಿದೆ.

ದ.ಕ.ಜಿಲ್ಲೆಯ ಕೋಮು ಸೂಕ್ಷ್ಮಪ್ರದೇಶ, ಇತಿಹಾಸದಲ್ಲೇ ಸುದೀರ್ಘ ಅವಧಿಗೆ ಸೆಕ್ಷನ್ 144ರನ್ವಯ ನಿಷೇಧವಾದ ಪ್ರದೇಶ ಬಂಟ್ವಾಳ ತಾಲೂಕು. ಕಳೆದ ಮೇ 27ರಿಂದ ಜುಲೈ 26ರವರೆಗೆ ಸತತ 61 ದಿನಗಳ ಕಾಲ ನಿರಂತರವಾಗಿ ನಿಷೇಧಾಜ್ಞೆ ಜಾರಿಗೊಳಿಸುವ ಮೂಲಕ ಜನ ಜೀವನವನ್ನು ಅಸ್ತವ್ಯಸ್ತಗೊಳಿಸಿತ್ತು ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದರು.

ನಿಷೇಧಾಜ್ಞೆ ಜಾರಿಯಲ್ಲಿದ್ದರೂ, ಪೊಲೀಸರಿಗೆ ಕ್ಯಾರೇ ಎನ್ನದೆ, ಮತ್ತೆ ಎರಡು ಕೊಲೆಗಳು ನಡೆದವು. ಇವು ಬಂಟ್ವಾಳ ಇತಿಹಾಸದಲ್ಲೇ ಕಪ್ಪು ಚುಕ್ಕೆಯಾಗಿ ದಾಖಲಾಯಿತು. ಅಲ್ಲದೆ ಅಂದಿನ ಜಿಲ್ಲಾಧಿಕಾರಿಯಾಗಿದ್ದ ಡಾ.ಕೆ.ಜಿ.ಜಗದೀಶ್ ಅವರು ಒಟ್ಟು 9 ಬಾರಿ ಸೆ.144ರನ್ವಯ ನಿಷೇಧಾಜ್ಞೆ ವಿಧಿಸಿದ್ದರು.

ನಿಷೇಧಾಜ್ಞೆಯ ಅವಧಿಯಲ್ಲಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಹಾಗೂ ಅಧಿಕಾರಿಗಳ ವರ್ಗಾವಣೆ ಮಾಡಲಾಗಿತ್ತು. ಈ ಅವಧಿಯಲ್ಲಿ ಕಾರ್ಯಾ ಚರಿಸುತ್ತಿದ್ದ ಎಸ್ಪಿ, ಅಡಿಸನಲ್ ಎಸ್ಪಿ, ಡಿವೈಎಸ್ಪಿ ಸಹಿತ ಸರ್ಕಲ್ ಇನ್‌ಸ್ಪೆಕ್ಟರ್‌ಗಳನ್ನು ಕೂಡಾ ವರ್ಗಾವಣೆ ಮಾಡಲಾಗಿತ್ತು. ಈ ಪೈಕಿ ಡಿವೈಎಸ್ಪಿ ಬದಲು ಎಎಸ್ಪಿ ಅರುಣ್ ಅವರು ಕೆಲ ಸಮಯ ಕಾರ್ಯನಿರ್ವಹಿಸಿದ್ದು, ತದನಂತರ ಅವರೂ ಕೂಡಾ ವರ್ಗಾವಣೆಯಾದರು.

ಇದೀಗ ಜನವರಿಯಿಂದ ಖಾಲಿಯಿರುವ ಹುದ್ದೆಗೆ ಪೂರ್ಣಕಾಲಿಕವಾಗಿ ನಿರ್ವಹಿಸಲು ಯಾರೂ ಕೂಡಾ ನೇಮಕವಾಗಿಲ್ಲ. ಒಂದು ಹಂತದಲ್ಲಿ ಅಡಿಷನಲ್ ಎಸ್ಪಿ ಬಂಟ್ವಾಳದಲ್ಲೇ ಕಾರ್ಯನಿರ್ವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ಇದುವರೆಗೂ ಬಂಟ್ವಾಳದಲ್ಲಿ ಕುಳಿತುಕೊಂಡಿಲ್ಲ ಎಂದು ಸ್ಥಳೀಯ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಅಲ್ಲದೆ ಮುಂದಿನ ದಿನಗಳಲ್ಲಿ ವಿಧಾನಸಭಾ ಚುನಾವಣೆಯು ನಡೆಯಲಿದ್ದು, ಅತೀ ಸೂಕ್ಷ್ಮ ಪ್ರದೇಶವಾದ ಈ ಎರಡು ತಾಲೂಕಿನ ಭದ್ರತೆಗೆ ಅತೀ ಮುಖ್ಯವಾಗಿ ಬೇಕಾಗಿದ್ದ ಈ ಹುದ್ದೆ ಖಾಲಿಯಾಗಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಹೇಗೆ ಸಾಧ್ಯ? ಎಂದು ಪ್ರಜ್ಞಾವಂತರ ಪ್ರಶ್ನೆಯಾಗಿದೆ.

ಬಂಟ್ವಾಳ, ಬೆಳ್ತಂಗಡಿ ವ್ಯಾಪ್ತಿ

2013ರಲ್ಲಿ ಬಂಟ್ವಾಳ ಸಬ್‌ಡಿವಿಷನ್ ಪೊಲೀಸ್ ಕಚೇರಿ ಬಿ.ಸಿ.ರೋಡಿನಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಬಂಟ್ವಾಳ ಮತ್ತು ಬೆಳ್ತಂಗಡಿ ಎರಡು ತಾಲೂಕಿನ ಸರ್ಕಲ್‌ಗೆ ಬಿ.ಸಿ.ರೋಡ್‌ನ ನಗರ ಪೊಲೀಸ್ ಠಾಣೆಯ ಹಳೆಯ ಕಟ್ಟಡದಲ್ಲಿ ಎಎಸ್ಪಿ ಕಚೇರಿ ಕಾರ್ಯಚರಿಸುತ್ತಿವೆ. ಡಿವೈಎಸ್ಪಿ ಸದಾನಂದ ವರ್ಣೇಕರ್, ಡಿವೈಎಸ್ಪಿ ರಶ್ಮೀ ಪರಡ್ಡಿ, ಎಎಸ್ಪಿ ರಾಹುಲ್ ಕುಮಾರ್, ಡಿವೈಎಸ್ಪಿ ರವೀಶ್ ಮತ್ತು ಎಎಸ್ಪಿ ಅರುಣ್ ಕುಮಾರ್ ಅವರು ಕಾರ್ಯನಿರ್ವಹಿಸಿದ್ದರು.

ಅರುಣ್ ಕುಮಾರ್ ಅವರು ಲೋಕಾಯುಕ್ತ ಎಸ್ಪಿಯಾಗಿ ಬೆಂಗಳೂರಿಗೆ ವರ್ಗಾವಣೆಯಾದ ಬಳಿಕ ಇಲ್ಲಿಯವರೆಗೆ ಹೊಸ ಎಎಸ್ಪಿ ಅಥವಾ ಡಿವೈಎಸ್ಪಿ ಗ್ರೇಡ್‌ನ ಅಧಿಕಾರಿ ನಿಯುಕ್ತಿಯಾಗಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X