Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲ: ಎ.11ರಿಂದ ವೈದ್ಯರ ರಾಷ್ಟ್ರೀಯ...

ಮಣಿಪಾಲ: ಎ.11ರಿಂದ ವೈದ್ಯರ ರಾಷ್ಟ್ರೀಯ ಕ್ರಿಕೆಟ್ ಪಂದ್ಯಾಟ

ವಾರ್ತಾಭಾರತಿವಾರ್ತಾಭಾರತಿ9 April 2018 8:52 PM IST
share

ಉಡುಪಿ, ಎ.9: ಉಡುಪಿ ಜಿಲ್ಲಾ ಕ್ರಿಕೆಟ್ ಸಂಸ್ಥೆಯ ಆಶ್ರಯದಲ್ಲಿ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ಎ.11ರಿಂದ ವೈದ್ಯರು ಗಳಿಗಾಗಿ ರಾಷ್ಟ್ರೀಯ ಮಟ್ಟದ ಟಿ20 ಕ್ರಿಕೆಟ್ ಲೀಗ್ ‘ಸಿಲ್ವರ್ ಕ್ರಿಕೆಟ್ ಲೀಗ್-2018’ನ್ನು ಎಂಡ್‌ಪಾಯಿಂಟ್‌ನ ಮಣಿಪಾಲ ಕ್ರಿಕೆಟ್ ಮೈದಾನದಲ್ಲಿ ಆಯೋಜಿಸಿದೆ ಎಂದು ಪಂದ್ಯಕೂಟದ ಆಯೋಜಕರಾದ ಮಾಹೆಯ ಕ್ರೀಡಾ ಕಾರ್ಯದರ್ಶಿ ಡಾ.ವಿನೋದ್ ನಾಯಕ್ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಹೆ ತನ್ನ ಸ್ಥಾಪನೆಯ ಬೆಳ್ಳಿಹಬ್ಬವನ್ನು ಆಚರಿಸುತಿದ್ದು, ಇದರ ಅಂಗವಾಗಿ ವೈದ್ಯರ ತಂಡಗಳಿಗಾಗಿಯೇ ಈ 20-20 ಪಂದ್ಯಾಟವನ್ನು ಎಂಡ್‌ಪಾಯಿಂಟ್‌ನ ಹಚ್ಚಹಸಿರಿನ ಹುಲ್ಲುಹಾಸಿನ ಪಿಚ್‌ನಲ್ಲಿ ಎ.11ರಿಂ 15ರವರೆಗೆ ಆಯೋಜಿ ಸಿದೆ ಎಂದರು.

ಮಾಹೆ ಸಿಲ್ವರ್ ಟ್ರೋಫಿ: ಇಲ್ಲಿ ಆಡಲಾಗುವ ಎಲ್ಲಾ ಪಂದ್ಯಗಳು ಸಿಲ್ವರ್ ಕ್ರಿಕೆಟ್ ಲೀಗ್ ಪೇಸ್ ಬುಕ್ ಪೇಜ್‌ನಲ್ಲಿ ನೇರ ಪ್ರಸಾರಗೊಳ್ಳಲಿದೆ. ಅಲ್ಲದೇ -www.cricscores.in- ಮೂಲಕ ಪಂದ್ಯಗಳ ಬಾಲ್ ಟು ಬಾಲ್ ಕಮೆಂಟರಿ ಮತ್ತು ಸ್ಕೋರ್ ವಿವರವನ್ನು ನೇರವಾಗಿ ವೀಕ್ಷಿಸಬಹುದಾಗಿದೆ ಎಂದೂ ಡಾ.ವಿನೋದ್ ಕುಮಾರ್ ತಿಳಿಸಿದರು.

ಇದಕ್ಕೆ ಮೊದಲು ಹೈದರಾಬಾದಿನಲ್ಲಿ ನಡೆದ ‘ರಾಷ್ಟ್ರೀಯ ಡಾಕ್ಟರ್ಸ್‌ ಲೀಗ್’ ಪಂದ್ಯಾಟದಲ್ಲಿ ಮಹಾರಾಷ್ಟ್ರ ಸ್ಟಾರ್ಸ್‌ ತಂಡ ಚಾಂಪಿಯನ್ ಆಗಿದ್ದರೆ, ಜೈಪುರ ತಂಡವು ರನ್ನರ್‌ಅಪ್ ಹಾಗೂ ಮಣಿಪಾಲ ತಂಡ ಮೂರನೆ ಸ್ಥಾನವನ್ನು ಗೆದ್ದುಕೊಂಡಿದ್ದವು.

ಪಂದ್ಯಾಟದಲ್ಲಿ ದೇಶದ ವಿವಿಧ ಭಾಗಗಳಿಂದ ಅಲೋಪಥಿಕ್, ಹೋಮಿಯೋಪಥಿಕ್, ಆಯುರ್ವೇದ ಮುಂತಾದ ವೈದ್ಯ ಪದ್ಧತಿಯ ವೈದ್ಯರುಗಳ ತಂಡ ಭಾಗವಹಿಸಲಿವೆ. ತುಂಗಾ ಮುಂಬೈ, ಸುಸೆಗಡ್ ಗೋಂಕರ್ಸ್‌ ಗೋವಾ, ಥಾನೆ ಸುಪರ್ಬ್, ಪದ್ಮಾಲಯ ಸ್ಟಾರ್ಸ್‌ ಪುಣೆ, ಮೈಸೂರು, ಕಿಮ್ಸ್ ಹೈದರಾಬಾದ್, ಬೆಂಗಳೂರು ಸ್ಪೆಷಲಿಸ್ಟ್, ಕ್ಯಾಲಿಕಟ್ ಹರಿಕೇನ್, ಟೀಂ ಮಣಿಪಾಲ್, ರೋಯಲ್ ಮಂಗಳೂರು, ಬ್ಲೆಂಡೆಡ್ ಕನ್ನಡಿಗಾಸ್ ಮುಂತಾದ ತಂಡಗಳು ಭಾಗವಹಿಸಲಿವೆ ಎಂದರು.

ಮೊದಲ ಹಂತದಲ್ಲಿ ಪ್ರತಿಯೊಂದು ತಂಡ, ಎರಡೆರಡು ಪಂದ್ಯಗಳನ್ನು ಆಡಬೇಕಾಗಿದ್ದು, ಪ್ರಥಮ ನಾಲ್ಕು ಸ್ಥಾನಗಳನ್ನು ಪಡೆಯುವ ತಂಡಗಳು ಸೆಮಿಫೈನಲ್ ಹಂತ ಪ್ರವೇಶಿಸಲಿವೆ. ಪಂದ್ಯಗಳು ತಲಾ 20 ಓವರುಗಳ ಇನಿಂಗ್ಸ್ ಆಗಿದೆ. ಆಟಗಾರರು ಬಣ್ಣ ಬಣ್ಣದ ಕ್ರಿಕೆಟ್ ಸಮವಸ್ತ್ರಗಳನ್ನು ಧರಿಸಿದರೆ, ಆಟಕ್ಕೆ ಬಿಳಿ ಬಣ್ಣದ ಚೆಂಡನ್ನು ಬಳಸಲಾಗುವುದು ಎಂದು ಡಾ.ವಿನೋದ್ ತಿಳಿಸಿದರು.

ಉದ್ಘಾಟನೆ: ಪಂದ್ಯಾಟ ಎ.11ರ ಬುಧವಾರ ಬೆಳಗ್ಗೆ 8:45ಕ್ಕೆ ಮಣಿಪಾಲ ಎಂಡ್ ಪಾಯಿಂಟಿನ ಕ್ರಿಕೆಟ್ ಮೈದಾನದಲ್ಲಿ ಉದ್ಘಾಟನೆಗೊಳ್ಳಲಿದ್ದು, ಪ್ರತಿದಿನ ಎರಡು ಪಿಚ್‌ಗಳಲ್ಲಿ ತಲಾ ಮೂರು ಪಂದ್ಯಗಳನ್ನು ಆಡಲಾಗುತ್ತದೆ. ಎ.14ರಂದು ಎರಡು ಸೆಮಿಫೈನಲ್ ಪಂದ್ಯಗಳು ನಡೆದರೆ, ಎ.15ರ ರವಿವಾರ ಫೈಲ್ ಪಂದ್ಯವನ್ನು ಆಡಲಾಗುತ್ತದೆ.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಡಾ.ಕೃಷ್ಣ ಪ್ರಸಾದ್, ಪಂದ್ಯಾಟದ ಪ್ರಾಯೋಜಕರಾದ ಮೆಡಿಲ್ಯಾಬ್ ಇಂಡಿಯಾದ ಆಡಳಿತ ನಿರ್ದೇಶಕ ಜ್ಯೋತಿಪ್ರಸಾದ್ ಹೆಗ್ಡೆ, ಡಾ. ನವೀನ್ ಪಾಟೀಲ್, ಕಾರ್ಯದಶಿರ್ ಬಾಲಕೃಷ್ಣ ಪರ್ಕಳ ಇವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X