Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಮತದಾರರ ಜಾಗೃತಿಗೆ ಸ್ವೀಪ್‌ನಿಂದ...

ಉಡುಪಿ: ಮತದಾರರ ಜಾಗೃತಿಗೆ ಸ್ವೀಪ್‌ನಿಂದ ಅತ್ಯಾಕರ್ಷಕ ಭಿತ್ತಿಪತ್ರಗಳ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ9 April 2018 9:23 PM IST
share
ಉಡುಪಿ: ಮತದಾರರ ಜಾಗೃತಿಗೆ ಸ್ವೀಪ್‌ನಿಂದ ಅತ್ಯಾಕರ್ಷಕ ಭಿತ್ತಿಪತ್ರಗಳ ಬಿಡುಗಡೆ

ಉಡುಪಿ, ಎ.9: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಮತದಾನದ ಶೇಕಡಾವಾರನ್ನು ಹೆಚ್ಚಿಸುವ ಉದ್ದೇಶದಿಂದ ಜಿಲ್ಲಾಡಳಿತ ಹಲವು ವಿಧದಲ್ಲಿ ಜನರನ್ನು ಮತಗಟ್ಟೆಯತ್ತ ಸೆಳೆಯುವ ಪ್ರಯತ್ನಕ್ಕೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಜನರಿಗೆ ಮತದಾನ ಹಕ್ಕನ್ನು ಚಲಾಯಿಸಲು ಪ್ರೇರೇಪಿಸಲು ಅತ್ಯಾಕರ್ಷಕ ಪೋಸ್ಟರ್‌ಗಳನ್ನು ಸೋಮವಾರ ಬಿಡುಗಡೆ ಗೊಳಿಸಿದೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಸ್ಥಳೀಯರೇ ಆದ ಜನಸಾಮಾನ್ಯರು ಸಹಜತೆಯಿಂದ ರೂಪದರ್ಶಿಗಳಾಗಿ ಭಾಗವಹಿಸಿದ ಮತದಾನಕ್ಕೆ ಕರೆ ಕೊಡುವ ಸುಮಾರು 17 ಬಹುವರ್ಣದ ಈ ಪೋಸ್ಟರ್‌ಗಳನ್ನು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಪಂ ಸಿಇಒ ಶಿವಾನಂದ ಕಾಪಸಿ ಬಿಡುಗಡೆಗೊಳಿಸಿದರು.

ಜನರನ್ನು ಮತಗಟ್ಟೆಯತ್ತ ಸೆಳೆಯಲು ಜಿಲ್ಲಾಡಳಿತ ಈ ಬಾರಿ ವಿವಿಧ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತಿದೆ. ಮೋಟಾರುಸೈಕಲ್ ರ್ಯಾಲಿ, ಬೈಸಿಕಲ್ ರ್ಯಾಲಿ, ಸಹಿ ಚಳವಳಿ, ಮಾನವ ಸರಪಳಿ ಇವುಗಳಲ್ಲಿ ಸೇರಿವೆ. ಇವುಗಳಿಗೆ ಜನರ ಪ್ರತಿಕ್ರಿಯೆಯೂ ಚೆನ್ನಾಗಿಯೇ ಇದೆ ಎಂದರು.

ನಾಗರಿಕರಿಗೆ ಮತದಾನದ ಜಾಗೃತಿ ಮೂಡಿಸಲು, ಸಾಮಾಜಿಕ ಮಾಧ್ಯಮ ಗಳಲ್ಲೂ ಜಾಗೃತಿಗಾಗಿ ಇವುಗಳನ್ನು ಬಳಸಲಾಗುವುದು. ಇಂದು ಬಿಡುಗಡೆ ಗೊಳಿಸಲಾದ ಪೋಸ್ಟರ್‌ಗಳನ್ನು ಸರಕಾರಿ ಬಸ್‌ಗಳಲ್ಲಿ ಪ್ರದರ್ಶಿಸಲಾಗುವುದು. ಉಡುಪಿ ಮತ್ತು ಕುಂದಾಪುರ ಡಿಪೋದ ಎಲ್ಲಾ ನಗರ ಸಾರಿಗೆ ಹಾಗೂ ದೂರ ಪ್ರಯಾಣದ ಕೆಎಸ್ಸಾರ್ಟಿಸಿ ಬಸ್‌ಗಳಲ್ಲೂ ಈ ಪೋಸ್ಟರ್‌ಗಳನ್ನು ಪ್ರದರ್ಶಿಸಲಾಗುವುದು ಎಂದರು.

ಅಲ್ಲದೇ ಸಾಮಾಜಿಕ ಜಾಲತಾಣಗಳಾದ- ಫೇಸ್‌ಬುಕ್, ವಾಟ್ಸಪ್, ಟ್ವಿಟರ್‌ಗಳಲ್ಲಿ, ಸಾರ್ವಜನಿಕ ಪ್ರದೇಶಗಳ ಹೋರ್ಡಿಂಗ್ಸ್‌ಗಳ ಮೂಲಕ, ಆಯ್ದ ಭಿತ್ತಿಪತ್ರಗಳ ಪ್ರದರ್ಶನಗಳ ಮೂಲಕ ಜನರಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.

ಪ್ರತಿ ಗ್ರಾಮಗಳಲ್ಲೂ ಇವುಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲು ಗ್ರಾಪಂಗಳಿಗೆ ನೀಡಲಾಗುವುದು. ಜಾಥಾ, ರ್ಯಾಲಿಗಳಲ್ಲೂ, ಎಲ್ಲಾ ಬಸ್ ನಿಲ್ದಾಣಗಳಲ್ಲಿ ಇವುಗಳನ್ನು ಪ್ರದರ್ಶಿಸಲಾಗುವುದು.

5.87ಲಕ್ಷ ರೂ.ಜಫ್ತಿ: ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೊಂಡ ಬಳಿಕ ಇಂದಿನವರೆಗೆ ಜಿಲ್ಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯ 10 ಪ್ರಕರಣಗಳನ್ನು ದಾಖಲಿಸಲಾಗಿದೆ. ಅಬಕಾರಿಗೆ ಸಂಬಂಧಿಸಿದಂತೆ ಸಹ 10 ಪ್ರಕರಣಗಳು ದಾಖಲಾಗಿವೆ.

ಜಿಲ್ಲೆಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನಗಳಲ್ಲಿ ಸಾಗಿಸಲಾಗುತಿದ್ದ ಒಟ್ಟು 5,87,700ರೂ. ನಗದನ್ನು ನಾಲ್ಕು ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದೆ. ಇವುಗಳಲ್ಲಿ ನೇಜಾರಿಯಲ್ಲಿ 59,000ರೂ., ಸಾಸ್ತಾನದಲ್ಲಿ 70,000ರೂ., ಕುಂದಾಪುರದಲ್ಲಿ 3,65,000ರೂ. ಹಾಗೂ ಅಂಜಾರಿನಲ್ಲಿ 93,100ರೂ. ಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಇವೆಲ್ಲವೂ ವೈಯಕ್ತಿಕ ಪ್ರಕರಣ ಗಳಾಗಿದ್ದು, ಚುನಾವಣೆಗೆ ಸಂಬಂಧಿಸಿದ್ದಲ್ಲ ಎಂದು ಪ್ರಿಯಾಂಕ ತಿಳಿಸಿದರು.

ಸೂಕ್ತ ದಾಖಲೆಗಳನ್ನು ಹಾಜರು ಪಡಿಸಿದರೆ ಇವರಿಗೆ ಹಣವನ್ನು ಹಿಂದಿರುಗಿಸಲಾಗುವುದು. ಒಬ್ಬರು ಬ್ಯಾಂಕಿನಿಂದ ತರುತ್ತಿರುವುದಾಗಿ ತಿಳಿಸಿ ದರೂ, ಬ್ಯಾಂಕ್ ಹೇಳಿಕೆಗೂ, ಅವರ ಹೇಳಿಕೆಗೂ ತಾಳೆಯಾಗುತ್ತಿಲ್ಲ. ಅದೇ ರೀತಿ ಒಬ್ಬರು ಬಾರ್ ವ್ಯಾಪಾರ ಎಂದರೂ, ಅಕೌಂಟ್‌ನ ಯಾವುದೇ ದಾಖಲೆ ತೋರಿಸಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X