Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿಕಾರಿಪುರದಿಂದ ಯಡಿಯೂರಪ್ಪ,...

ಶಿಕಾರಿಪುರದಿಂದ ಯಡಿಯೂರಪ್ಪ, ಶಿವಮೊಗ್ಗದಿಂದ ಈಶ್ವರಪ್ಪಗೆ ಟಿಕೆಟ್ ಘೋಷಣೆ: ನಿಗೂಢವಾದ ಎಸ್.ರುದ್ರೇಗೌಡ ನಡೆ

ವರದಿ : ಬಿ. ರೇಣುಕೇಶ್ವರದಿ : ಬಿ. ರೇಣುಕೇಶ್9 April 2018 9:41 PM IST
share
ಶಿಕಾರಿಪುರದಿಂದ ಯಡಿಯೂರಪ್ಪ, ಶಿವಮೊಗ್ಗದಿಂದ ಈಶ್ವರಪ್ಪಗೆ ಟಿಕೆಟ್ ಘೋಷಣೆ: ನಿಗೂಢವಾದ ಎಸ್.ರುದ್ರೇಗೌಡ ನಡೆ

ಶಿವಮೊಗ್ಗ, ಏ. 9: ವಿಧಾನಸಭೆ ಚುನಾವಣೆ - 2018 ಕ್ಕೆ ಬಿಜೆಪಿ ಪಕ್ಷ ಪ್ರಕಟಿಸಿರುವ ಪ್ರಥಮ ಹಂತದ ಅಭ್ಯರ್ಥಿಗಳ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಶಿಕಾರಿಪುರ ಹಾಗೂ ಶಿವಮೊಗ್ಗ ನಗರ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದೆ. 

ನಿರೀಕ್ಷಿಸಿದಂತೆ ಶಿಕಾರಿಪುರ ಕ್ಷೇತ್ರದಿಂದ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ಟಿಕೆಟ್ ಲಭ್ಯವಾಗಿದೆ. ಉಳಿದಂತೆ ತೀವ್ರ ಕುತೂಹಲ ಕೆರಳಿಸಿದ್ದ ಶಿವಮೊಗ್ಗ ನಗರ ಕ್ಷೇತ್ರದಿಂದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪರವರು, ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ರುದ್ರೇಗೌಡರನ್ನು ಹಿಂದಿಕ್ಕಿ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 

ಜಿಲ್ಲೆಯ ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ, ತೀರ್ಥಹಳ್ಳಿ, ಸಾಗರ ಹಾಗೂ ಸೊರಬ ಕ್ಷೇತ್ರಗಳಿಗೆ ಇನ್ನಷ್ಟೆ ಅಭ್ಯರ್ಥಿಗಳ ಹೆಸರು ಘೋಷಣೆಯಾಗಬೇಕಾಗಿದೆ. ಎರಡನೇ ಹಂತದ ಅಭ್ಯರ್ಥಿಗಳ ಪಟ್ಟಿಯಲ್ಲಿ ಈ ಐದು ಕ್ಷೇತ್ರಗಳಿಗೆ ಕಣಕ್ಕಿಳಿಯಲಿರುವ ಅಧಿಕೃತ ಹುರಿಯಾಳುಗಳ ಹೆಸರು ಪ್ರಕಟವಾಗುವ ನಿರೀಕ್ಷೆಗಳಿವೆ ಎಂದು ಹೇಳಲಾಗುತ್ತಿದೆ. 

ಯಾರಾಗಬಹುದು?: ಲಭ್ಯ ಮಾಹಿತಿಯ ಪ್ರಕಾರ ತೀರ್ಥಹಳ್ಳಿಯಿಂದ ಮಾಜಿ ಶಾಸಕ ಆರಗ ಜ್ಞಾನೇಂದ್ರ, ಸೊರಬದಿಂದ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹಾಗೂ ಭದ್ರಾವತಿ ಕ್ಷೇತ್ರದಿಂದ ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ಜಿ.ಆರ್.ಪ್ರವೀಣ್‍ಪಾಟೀಲ್‍ರವರು ಕಣಕ್ಕಿಳಿಯುವ ಸಾಧ್ಯತೆಗಳು ನಿಶ್ಚಿತವೆಂಬ ಮಾತುಗಳು ಕೇಳಿಬರುತ್ತಿವೆ. 

ಹಾಗೆಯೇ ಟಿಕೆಟ್‍ಗೆ ತೀವ್ರ ಪೈಪೋಟಿ ಕಂಡುಬಂದಿದ್ದ ಶಿವಮೊಗ್ಗ ಗ್ರಾಮಾಂತರ ಮೀಸಲು ಕ್ಷೇತ್ರದಿಂದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆ.ಬಿ.ಅಶೋಕ್‍ನಾಯ್ಕ್‍ಗೆ ಟಿಕೆಟ್ ಲಭ್ಯವಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಈ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪಕ್ಷದ ವರಿಷ್ಠರು ಅಖೈರುಗೊಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. 

ಉಳಿದಂತೆ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಯಾರು ಕಣಕ್ಕಿಳಿಯುತ್ತಾರೆಂಬುವುದು ಸ್ಪಷ್ಟವಾಗುತ್ತಿಲ್ಲ. ಮಾಜಿ ಸಚಿವ ಹರತಾಳು ಹಾಲಪ್ಪ ಹಾಗೂ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ನಡುವೆ ಟಿಕೆಟ್‍ಗೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಯಾರಿಗೆ ಟಿಕೆಟ್ ತಪ್ಪಿದರೂ ಬಂಡಾಯ ಭುಗಿಲೇಳುವ ಲಕ್ಷಣಗಳು ಕಂಡುಬರುತ್ತಿವೆ. ಈ ಕಾರಣದಿಂದ ಈ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರವು ಕೇಂದ್ರ ವರಿಷ್ಠರಿಗೂ ತಲೆನೋವಾಗಿ ಪರಿಣಮಿಸಿದ್ದು, ಹಾಲಪ್ಪ ಹಾಗೂ ಬೇಳೂರು ಜೊತೆ ಸಮಾಲೋಚನೆ ನಡೆಸಿದ ನಂತರ ಈ ಕ್ಷೇತ್ರದ ಅಭ್ಯರ್ಥಿ ಹೆಸರು ಘೋಷಿಸಲು ಕೇಂದ್ರ ವರಿಷ್ಠರು ನಿರ್ಧರಿಸಿದ್ದಾರೆಂಬ ಮಾತುಗಳು ಕೇಳಿಬಂದಿವೆ. 

ನಡೆ ನಿಗೂಢ: ಶಿವಮೊಗ್ಗ ನಗರ ಕ್ಷೇತ್ರದಿಂದ ಕೆ.ಎಸ್.ಈಶ್ವರಪ್ಪಗೆ ಟಿಕೆಟ್ ಖಚಿತವಾಗಿರುವುದರಿಂದ ಟಿಕೆಟ್ ಸಿಕ್ಕೇ ಸಿಗುವ ನಿರೀಕ್ಷೆಯಲ್ಲಿದ್ದ ಪಕ್ಷದ ಜಿಲ್ಲಾಧ್ಯಕ್ಷ, ಬಿ.ಎಸ್.ಯಡಿಯೂರಪ್ಪ ಭಂಟ ಎಸ್.ರುದ್ರೇಗೌಡಗೆ ತೀವ್ರ ಬೇಸರ ಉಂಟು ಮಾಡಿದೆ ಎಂಬ ಮಾತುಗಳು ಅವರ ಆಪ್ತ ಮೂಲಗಳು ತಿಳಿಸಿವೆ. ಇದರಿಂದ ಎಸ್.ರುದ್ರೇಗೌಡರವರ ಮುಂದಿನ ನಡೆ ಏನೆಂಬುವುದು ನಿಗೂಢವಾಗಿ ಪರಿಣಮಿಸಿದ್ದು, ಸಾಕಷ್ಟು ಕುತೂಹಲ ಕೆರಳಿಸಿದೆ. 

ಟಿಕೆಟ್ ಖಚಿತಗೊಂಡ ವಿಷಯ ಹಾಗೂ ನಾಮಪತ್ರ ಸಲ್ಲಿಕೆಯ ವಿವರ ತಿಳಿಸುವ ಉದ್ದೇಶದಿಂದ ಸೋಮವಾರ ಶಿವಮೊಗ್ಗ ನಗರದ ಪಕ್ಷದ ಕಚೇರಿಯಲ್ಲಿ ಕೆ.ಎಸ್.ಈಶ್ವರಪ್ಪ ನಡೆಸಿದ ಸುದ್ದಿಗೋಷ್ಠಿಯಿಂದಲೂ ಎಸ್.ರುದ್ರೇಗೌಡ ದೂರ ಉಳಿದಿದ್ದರು. ಟಿಕೆಟ್ ಕೈ ತಪ್ಪಿದ ಬೇಸರದಿಂದಲೇ ಅವರು ಕೆ.ಎಸ್.ಈಶ್ವರಪ್ಪ ಏರ್ಪಡಿಸಿದ್ದ ಸುದ್ದಿಗೋಷ್ಠಿಗೆ ಆಗಮಿಸಲಿಲ್ಲ ಎಂಬ ಮಾತುಗಳು ಕೇಳಿಬರಲಾರಂಭಿಸಿವೆ. 

ಕಳೆದ ಕೆಲ ದಿನಗಳ ಹಿಂದೆ ಎಸ್.ರುದ್ರೇಗೌಡರವರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ, ಅವರು ಒಪ್ಪಿದರೆ ಜೆಡಿಎಸ್ ಪಕ್ಷವು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲಿದೆ ಎಂಬಿತ್ಯಾದಿ ಹಲವು ಅಂತೆಕಂತೆ ವದಂತಿಗಳು ಹಬ್ಬಿದ್ದವು. ಹಾಗೆಯೇ ತಮಗೆ ಟಿಕೆಟ್ ನೀಡಬೇಕೆಂಬ ಒತ್ತಾಯವನ್ನು ಎಸ್.ರುದ್ರೇಗೌಡ ಮಾಡಿದ್ದರು. 

ಆದರೆ ನಂತರ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಎಸ್.ರುದ್ರೇಗೌಡರನ್ನು ಸಂಪರ್ಕಿಸಿ ಅವರನ್ನು ಸಮಾಧಾನಗೊಳಿಸುವ ಕೆಲಸ ಮಾಡಿದ್ದರು. ಜೊತೆಗೆ ವಿಧಾನ ಪರಿಷತ್‍ಗೆ ಆಯ್ಕೆ ಮಾಡುವ ಭರವಸೆ ನೀಡಿದ್ದರು. ಒಲ್ಲದ ಮನಸ್ಸಿನಿಂದಲೇ ಎಸ್.ರುದ್ರೇಗೌಡರವರು ವರಿಷ್ಠರ ಮಾತಿಗೆ ಸಹಮತಿ ವ್ಯಕ್ತಪಡಿಸಿದ್ದ ಮಾತುಗಳು ಕೇಳಿಬಂದಿದ್ದವು. ಸದ್ಯ ಅವರ ನಡೆ ನಿಗೂಢವಾಗಿದ್ದು, ಮುಂದಿನ ಅವರ ನಡೆ ಏನಾಗಿರಲಿದೆ ಎಂಬುವುದು ಇನ್ನಷ್ಟೆ ಗೊತ್ತಾಗಬೇಕಾಗಿದೆ. 

ಎ. 19 ರಂದು ಕೆ.ಎಸ್.ಈಶ್ವರಪ್ಪ ನಾಮಪತ್ರ ಸಲ್ಲಿಕೆ
ಎ.19 ರಂದು ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತಾವು ನಾಮಪತ್ಪ ಸಲ್ಲಿಸುತ್ತಿದ್ದೆನೆ' ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪರವರು ಸೋಮವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಎ.19 ರ ಬೆಳಿಗ್ಗೆ 10 ಗಂಟೆಗೆ ರಾಮಣ್ಣಶ್ರೇಷ್ಠಿ ಪಾರ್ಕ್‍ನಿಂದ ಮೆರವಣಿಗೆ ಹೊರಟು ಬೆಳಿಗ್ಗೆ 11.30 ಕ್ಕೆ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸುತ್ತೆನೆ. ಎ.17 ಹಾಗೂ 18 ರಂದು ಕ್ಷೇತ್ರ ವ್ಯಾಪ್ತಿಗೆ ಸೇರ್ಪಡೆಯಾಗುವ 33 ವಾರ್ಡ್‍ಗಳಲ್ಲಿ ತಲಾ ಒಂದೊಂದು ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಮಾಡಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ. 

ಶಿವಮೊಗ್ಗ ನಗರ ಕ್ಷೇತ್ರದಲ್ಲಿ ತಾವು ಗೆದ್ದು ಯಡಿಯೂರಪ್ಪರನ್ನು ಮುಖ್ಯಮಂತ್ರಿಯಾಗಿ ಮಾಡುವುದೇ ನನ್ನ ಉದ್ದೇಶವಾಗಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ-ಕೆಜೆಪಿ ಎಂದು ಎರಡು ಭಾಗವಾಗಿ ಮತಗಳು ವಿಭಜನೆಯಾಗಿದ್ದವು. ಈ ಬಾರಿ ಪಕ್ಷದ ಮತಗಳಿಕೆಯ ಪ್ರಮಾಣ ಸಹಜವಾಗಿಯೇ ಹೆಚ್ಚಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 
 

share
ವರದಿ : ಬಿ. ರೇಣುಕೇಶ್
ವರದಿ : ಬಿ. ರೇಣುಕೇಶ್
Next Story
X