Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೆಹಬೂಬ ಜನತೆಯ ಪರವಾಗಿ ಧ್ವನಿಯೆತ್ತಬೇಕು

ಮೆಹಬೂಬ ಜನತೆಯ ಪರವಾಗಿ ಧ್ವನಿಯೆತ್ತಬೇಕು

‘ಮಾನವ ಗುರಾಣಿ’ಯನ್ನು ಉಲ್ಲೇಖಿಸಿ ಶೆಹ್ಲಾ ರಶೀದ್ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ9 April 2018 10:18 PM IST
share
ಮೆಹಬೂಬ ಜನತೆಯ ಪರವಾಗಿ ಧ್ವನಿಯೆತ್ತಬೇಕು

ಶ್ರೀನಗರ,ಎ.9: ಸರಿಯಾಗಿ ಒಂದು ವರ್ಷದ ಹಿಂದೆ ಕಾಶ್ಮೀರಿ ಯುವಕ ಫಾರೂಕ್ ದಾರ್ ಅವರನ್ನು ಸೇನೆಯು ‘ಮಾನವ ಗುರಾಣಿ’ಯನ್ನಾಗಿ ಬಳಸಿಕೊಂಡಿದ್ದನ್ನು ಸೋಮವಾರ ಇಲ್ಲಿ ನೆನಪಿಸಿಕೊಂಡ ಜೆಎನ್‌ಯುದ ಮಾಜಿ ವಿದ್ಯಾರ್ಥಿ ನಾಯಕಿ ಶೆಹ್ಲಾ ರಶೀದ್ ಅವರು, ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು ರಾಜ್ಯದ ಜನರ ಪರವಾಗಿ ಧ್ವನಿ ಎತ್ತಬೇಕಾಗಿದೆ ಎಂದು ಹೇಳಿದರು.

ದಾರ್ ತನ್ನ ಮತವನ್ನು ಚಲಾಯಿಸಲು ತೆರಳುತ್ತಿದ್ದಾಗ ಈ ಅಮಾನವೀಯ ಕೃತ್ಯದ ಬಲಿಪಶುವಾಗಿದ್ದರು. ಅದಾಗಿ ಒಂದು ವರ್ಷದ ಬಳಿಕವೂ ಅವರು ಆಘಾತದಿಂದ ಹೊರಗೆ ಬಂದಿಲ್ಲ. ಮೆಹಬೂಬ ಶಾಸನಬದ್ಧವಾಗಿ ಆಯ್ಕೆಯಾಗಿದ್ದಾರೆ ಎನ್ನುವುದರಲ್ಲಿ ಯಾವುದೇ ಶಂಕೆಯಿಲ್ಲ, ಆದರೆ ಅವರು ಜನರ ಪರವಾಗಿ ಧ್ವನಿಯೆತ್ತಬೇಕು ಎಂದು ನಾವು ನಿರೀಕ್ಷಿಸುತ್ತಿದ್ದೇವೆ ಎಂದು ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಶೆಹ್ಲಾ ನುಡಿದರು.

ಕಳೆದ ವರ್ಷದ ಎ.9ರಂದು ಬಡ್ಗಾಮ್ ಜಿಲ್ಲೆಯಲ್ಲಿ ಪ್ರತಿಭಟನಾಕಾರರ ಕಲ್ಲುತೂರಾಟದಿಂದ ಪಾರಾಗಲು ಮೇಜರ್ ಲೀತುಲ್ ಗೊಗೊಯ್ ನೇತೃತ್ವದ ಸೇನಾತಂಡವು ಕಸೂತಿ ಕಲಾಕಾರ ದಾರ್ ಅವರನ್ನು ಸೇನೆಯ ಜೀಪಿನ ಬಾನೆಟ್‌ಗೆ ಕಟ್ಟಿ ಪರೇಡ್ ನಡೆಸಿತ್ತು. ಇದು ಜಾಗತಿಕವಾಗಿ ಭಾರೀ ಸುದ್ದಿ ಮಾಡಿತ್ತು ಮತ್ತು ಕಾಶ್ಮೀರ ಕಣಿವೆಯಲ್ಲಿ ನಾಗರಿಕ-ಸೇನೆ ಧ್ರುವೀಕರಣದ ಮೇಲೆ ಮತ್ತೊಮ್ಮೆ ಬೆಳಕು ಚೆಲ್ಲಿತ್ತು.

ಕಳೆದ ವಾರ ಶೋಪಿಯಾನ್‌ನಲ್ಲಿ ನಾಗರಿಕರ ಹತ್ಯೆಗಳ ವಿರುದ್ಧ ಪ್ರತಿಭಟನೆಯಲ್ಲಿ ತೊಡಗಿದ್ದ ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಕ್ರಮವನ್ನು ಖಂಡಿಸಿದ ಶೆಹ್ಲಾ, ರಾಜ್ಯದಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಗ ಅವಕಾಶ ನೀಡುವಂತೆ ಅಧಿಕಾರಿ ಗಳನ್ನು ಕೋರಿಕೊಂಡರು.

 ಕಥುವಾ ಜಿಲ್ಲೆಯಲ್ಲಿ ಎಂಟರ ಹರೆಯದ ಬಾಲಕಿಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಕೋಮುಬಣ್ಣವನ್ನು ನೀಡಲು ಪ್ರಯತ್ನಿಸುತ್ತಿರುವವರ ವಿರುದ್ಧ ರಾಜ್ಯ ಸರಕಾರವು ಕಠಿಣ ಕ್ರಮಗಳನ್ನು ಜರುಗಿಸಬೇಕು ಎಂದು ಅವರು ಆಗ್ರಹಿಸಿದರು.

ಹಿಂಸೆಯನ್ನು ಕೈಬಿಡುವಂತೆ ರಾಜ್ಯ ಸರಕಾರವು ಪ್ರತಿಯೊಬ್ಬರಿಗೂ ಬೋಧಿಸುತ್ತಲೇ ಇದೆ, ಆದರೆ ಅದು ಖುದ್ದು ಹಿಂಸೆಯನ್ನು ಕೈಬಿಡಬೇಕು. ಅದು ಶರಣಾಗತಿ ನೀತಿಯನ್ನೇಕೆ ರೂಪಿಸುತ್ತಿಲ್ಲ? ಬಂದೂಕೊಂದೇ ಮೊದಲ ಉತ್ತರವೇಕೆ ಆಗಬೇಕು ಎಂದು ಪ್ರಶ್ನಿಸಿದ ಶೆಹ್ಲಾ, ಶಸ್ತ್ರಗಳನ್ನು ಕೈಗತ್ತಿಕೊಂಡಿರುವ ಉಗ್ರರು ಮತ್ತು ಯಾವುದೇ ಹಿಂಸಾಚಾರದಿಂದ ದೂರವಿರುವವರನ್ನು ಸರಕಾರವು ಸ್ಪಷ್ಟವಾಗಿ ಗುರುತಿಸಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X