ಮಂಗಳೂರು: ಚುನಾವಣಾ ಪೂರ್ವ ಸಿದ್ಧತೆ ಕುರಿತು ಘಟಕಾಧಿಕಾರಿಗಳ ಸಭೆ

ಮಂಗಳೂರು, ಎ. 10: ಚುನಾವಣಾ ಪೂರ್ವ ಸಿದ್ಧತೆ ಯ ಬಗ್ಗೆ ಜಿಲ್ಲಾ ಗೃಹರಕ್ಷಕ ದಳದ 14 ಘಟಕಗಳ ಘಟಕಾಧಿಕಾರಿ ಸಭೆಯು ಗೃಹರಕ್ಷಕ ದಳದ ಕಚೇರಿಯಲ್ಲಿ ಮಂಗಳವಾರ ನಡೆಯಿತು.
ಗೃಹರಕ್ಷಕರ ಗುರುತಿನ ಚೀಟಿ, ಅಂಚೆ ಮತ ಪತ್ರದ ಮೂಲಕ ಮತ ಚಲಾಯಿಸುವ, ಹಾಗೂ ಗೃಹ ರಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಜಿಲ್ಲಾ ಉಪ ಪೊಲೀಸ್ ಅಧೀಕ್ಷಕ ಸಜಿತ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗೃಹ ರಕ್ಷಕ ದಳದ ಕಮಾಂಡೆಂಟ್ ಡಾ.ಮುರಲೀ ಮೋಹನ್ ಚೂಂತಾರು ಅವರು ಅಧ್ಯಕ್ಷತೆ ವಹಿಸಿದ್ದರು.ಗೃಹರಕ್ಷಕ ದಳದ ಮಂಗಳೂರು ಘಟಕದ ಘಟಕಾಧಿಕಾರಿ ಮಾರ್ಕ್ ಶೇರಾ, ಸುರತ್ಕಲ್ ಘಟಕದ ಪ್ರಭಾರ ಘಟಕಾಧಿಕಾರಿ, ರಮೇಶ್, ಪಣಂಬೂರು ಘಟಕದ ಘಟಕಾಧಿಕಾರಿ ಹರೀಶ್ ಆಚಾರ್ಯ, ಮುಲ್ಕಿ ಘಟಕದ ಪ್ರಭಾರ ಘಟಕಾಧಿಕಾರಿ ಲೋಕೇಶ್, ಮೂಡಬಿದ್ರೆ ಘಟಕದ ಪ್ರಭಾರ ಘಟಕಾಧಿಕಾರಿ, ಪಾಂಡಿರಾಜ್, ಬಂಟ್ವಾಳ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀನಿವಾಸ್ ಆಚಾರ್ಯ, ಬೆಳ್ಳಾರೆ ಘಟಕದ ಘಟಕಾಧಿಕಾರಿ ನಾರಾಯಣ, ಬೆಳ್ತಂಗಡಿ ಘಟಕದ ಪ್ರಭಾರ ಘಟಕಾಧಿಕಾರಿ ಜಯಾನಂದ, ಕಡಬ ಘಟಕದ ಘಟಕಾಧಿಕಾರಿ ಎಚ್.ಕೆ.ಗೋಪಾಲ್, ಸುಳ್ಯ ಘಟಕದ ಘಟಕಾಧಿಕಾರಿ ಜಯಂತ್ ಶೆಟ್ಟಿ, ಉಪ್ಪಿನಂಗಡಿ ಘಟಕದ ಪ್ರಭಾರ ಘಟಕಾಧಿಕಾರಿ ದಿನೇಶ್, ಪುತ್ತೂರು ಘಟಕದ ಘಟಕಾಧಿಕಾರಿ ಅಭಿಮನ್ಯು ರೈ, ವಿಟ್ಲ ಘಟಕದ ಪ್ರಭಾರ ಘಟಕಾಧಿಕಾರಿ ಸಂಜೀವ, ಸುಬ್ರಹ್ಮಣ್ಯ ಘಟಕದ ಪ್ರಭಾರ ಘಟಕಾಧಿಕಾರಿ ವಿಶ್ವನಾಥ್ ಹಾಗೂ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.
ಗೃಹ ರಕ್ಷಕಿ ಶಿಲ್ಪಾ ಪ್ರಾರ್ಥಿಸಿದರು. ಉಪ ಸಮಾದೇಷ್ಠ ರಮೇಶ್ಸ್ವಾಗತಿಸಿದರು. ಗೃಹರಕ್ಷಕ ದಳ ಅಧಿಕಾರಿ ಉಷಾ ವಂದಿಸಿದರು.