Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೆಳ್ಳಂದೂರು ಕೆರೆ ಮಾಲಿನ್ಯ ಪ್ರಕರಣ:...

ಬೆಳ್ಳಂದೂರು ಕೆರೆ ಮಾಲಿನ್ಯ ಪ್ರಕರಣ: ಕರ್ನಾಟಕ ಸರಕಾರಕ್ಕೆ ಎನ್‌ಜಿಟಿ ತರಾಟೆ,ಕೆರೆಗಳ ತಪಾಸಣೆಗೆ ಸಮಿತಿ ರಚನೆ

ವಾರ್ತಾಭಾರತಿವಾರ್ತಾಭಾರತಿ11 April 2018 8:41 PM IST
share
ಬೆಳ್ಳಂದೂರು ಕೆರೆ ಮಾಲಿನ್ಯ ಪ್ರಕರಣ: ಕರ್ನಾಟಕ ಸರಕಾರಕ್ಕೆ ಎನ್‌ಜಿಟಿ ತರಾಟೆ,ಕೆರೆಗಳ ತಪಾಸಣೆಗೆ ಸಮಿತಿ ರಚನೆ

ಹೊಸದಿಲ್ಲಿ,ಎ.11: ಬೆಂಗಳೂರಿನ ಬೆಳ್ಳಂದೂರು ಕೆರೆಯ ಕುರಿತು ರಾಜ್ಯ ಸರಕಾರದ ಕ್ರಿಯಾ ಯೋಜನೆಯ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ(ಎನ್‌ಜಿಟಿ)ವು ಬುಧವಾರ ಕರ್ನಾಟಕವನ್ನು ತೀವ್ರ ತರಾಟೆಗೆತ್ತಿಕೊಂಡಿತು. ನಗರದಲ್ಲಿಯ ಕೆರೆಗಳ ತಪಾಸಣೆಗಾಗಿ ಸಮಿತಿಯೊಂದನ್ನು ಅದು ರಚಿಸಿತು.

ರಾಜ್ಯ ಸರಕಾರವು ಸಲ್ಲಿಸಿರುವ ವರದಿಯು ತಪ್ಪುಗಳಿಂದ ಕೂಡಿದೆ ಮತ್ತು ದಾರಿ ತಪ್ಪಿಸುತ್ತಿದೆ. ವಾಸ್ತವದಲ್ಲಿ ಯಾವುದೇ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ ವಿವರಗಳು ಈ ವರದಿಯಲ್ಲಿಲ್ಲ ಎಂದು ಹೇಳಿದ ಎನ್‌ಜಿಟಿಯ ಪ್ರಭಾರ ಅಧ್ಯಕ್ಷ ನ್ಯಾ.ಜವಾದ್ ರಹೀಮ್ ನೇತೃತ್ವದ ಪೀಠವು, ನಾವು ರಾಜ್ಯದ ಅಧಿಕಾರಿಗಳಿಂದ ನಿರೀಕ್ಷಿಸಿದ್ದು ಇದಲ್ಲ. ರಾಜ್ಯವು ಸಲ್ಲಿಸಿರುವ ವರದಿಯು ನಮಗೆ ಸಮಾಧಾನವನ್ನು ತಂದಿಲ್ಲ. ನ್ಯಾಯಾಧಿಕರಣದ ಆದೇಶ ಪಾಲನೆಯಲ್ಲಿ ಕರ್ತವ್ಯಲೋಪವಾಗಿದೆ ಎಂದು ತರಾಟೆಗೆತ್ತಿಕೊಂಡರು.

ಕಡತಗಳನ್ನು ಓದಲು ಮತ್ತು ಅವುಗಳನ್ನು ಮುಚ್ಚಲಷ್ಟೇ ನಾವು ಇಲ್ಲಿ ಕುಳಿತಿಲ್ಲ. ಆದೇಶದ ಪಾಲನೆಯಾಗಲೇಬೇಕು. ಅದಕ್ಕಾಗಿ ನಾವು ಸೇನೆಯನ್ನು ಕರೆಸಬೇಕೆಂದು ನೀವು ಬಯಸಿದ್ದೀರಾ ಎಂದು ಪೀಠವು ಪ್ರಶ್ನಿಸಿತು.

 ರಾಜ್ಯ ಸರಕಾರಕ್ಕೆ ದಂಡ ವಿಧಿಸುವ ನಿಲುವನ್ನು ಕೊನೇ ಕ್ಷಣದಲ್ಲಿ ಬದಲಿಸಿಕೊಂಡ ನ್ಯಾಯಾಧಿಕರಣವು ಹಿರಿಯ ನ್ಯಾಯವಾದಿ ರಾಜ್ ಪಂಜ್ವಾನಿ, ಐಐಎಸ್‌ಸಿ-ಬೆಂಗಳೂರಿನ ಓರ್ವ ಪ್ರೊಫೆಸರ್, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಓರ್ವ ಹಿರಿಯ ವಿಜ್ಞಾನಿ, ಬಿಬಿಎಂಪಿಯ ಆಯುಕ್ತ, ಬಿಡಿಎ ಕಾರ್ಯದರ್ಶಿ ಮತ್ತು ಹಿರಿಯ ನ್ಯಾಯವಾದಿ ಆಯ್ಕೆ ಮಾಡುವ ಓರ್ವ ವಕೀಲರನ್ನೊಳಗೊಂಡ ಸಮಿತಿಯೊಂದನ್ನು ರಚಿಸಿತು. ಈ ಸಮಿತಿಯು ಎ.14 ಮತ್ತು 15ರಂದು ಅಗರ, ಬೆಳ್ಳಂದೂರು ಮತ್ತು ವರ್ತೂರು ಕೆರೆಗಳ ತಪಾಸಣೆಯನ್ನು ನಡೆಸಲಿದೆ. ಎನ್‌ಜಿಟಿಗೆ ವಿವರವಾದ ವರದಿಯನ್ನು ಸಲ್ಲಿಸುವುದರೊಂದಿಗೆ ಈ ಕೆರೆಗಳ ಸಮೀಪದಲ್ಲಿರುವ ಅಪಾರ್ಟ್‌ಮೆಂಟ್‌ಗಳು ಮತ್ತು ಇತರ ಸಂಸ್ಥೆಗಳು ಉತ್ಪಾದಿಸುವ ಘನತ್ಯಾಜ್ಯದ ಪ್ರಮಾಣದ ಕುರಿತು ಮಾಹಿತಿಯನ್ನು ಒದಗಿಸಲಿದೆ.

ಕೆರೆಗಳಲ್ಲಿರುವ ಜಲಸಸ್ಯಗಳ ವ್ಯಾಪ್ತಿ, ಎ.10,2018ರವರೆಗೆ ನಡೆದಿರುವ ಬೆಂಕಿ ಕಾಣಿಸಿಕೊಂಡ ಘಟನೆಗಳು, ಕೆರೆಗಳ ಸುತ್ತಲಿನ ಸಂಸ್ಕರಣ ಸ್ಥಾವರಗಳ ಸ್ಥಿತಿ ಮತ್ತು ಅಪಾರ್ಟ್‌ಮೆಂಟ್‌ಗಳು ಅಧಿಕಾರಿಗಳಿಂದ ಅನುಭೋಗ ಪ್ರಮಾಣಪತ್ರಗಳನ್ನು ಪಡೆದಿವೆಯೇ ಎನ್ನುವುದನ್ನು ತನ್ನ ವರದಿಯಲ್ಲಿ ತಿಳಿಸುವಂತೆ ಎನ್‌ಜಿಟಿಯು ಸಮಿತಿಗೆ ಆದೇಶಿಸಿತು.

ನಿರ್ದಿಷ್ಟ ಆದೇಶಗಳನ್ನು ನೀಡಿದ್ದರೂ ಬೆಳ್ಳಂದೂರು ಕೆರೆಯಲ್ಲಿನ ಕಳೆಗಳನ್ನು ಮತ್ತು ನಿರುಪಯುಕ್ತ ಸಸ್ಯಗಳನ್ನು ನಿಯಮಿತವಾಗಿ ನಿರ್ಮೂಲಿಸದ್ದಕ್ಕಾಗಿ ಈ ಹಿಂದೆಯೂ ರಾಜ್ಯ ಸರಕಾರವನ್ನು ತರಾಟೆಗೆತ್ತಿಕೊಂಡಿದ್ದ ಎನ್‌ಜಿಟಿಯು, ಮಾಸಿಕ ಪಾಲನಾ ವರದಿಗಳನ್ನು ಸಲ್ಲಿಸುವಂತೆ ನಿರ್ದೇಶ ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X