Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ''ಬಿಜೆಪಿ ಮುಖಂಡ ಈಶ್ವರ ಕಟೀಲ್ ಕೊಲೆ...

''ಬಿಜೆಪಿ ಮುಖಂಡ ಈಶ್ವರ ಕಟೀಲ್ ಕೊಲೆ ಸಂಚು ನಡೆದಿದೆ ಎಂಬುದು ಸುಳ್ಳು''

ಬಂಧಿತ ಶಿವಪ್ರಸಾದ್ ಮನೆಯವರ ಆರೋಪ

ವಾರ್ತಾಭಾರತಿವಾರ್ತಾಭಾರತಿ12 April 2018 1:29 PM IST
share
ಬಿಜೆಪಿ ಮುಖಂಡ ಈಶ್ವರ ಕಟೀಲ್ ಕೊಲೆ ಸಂಚು ನಡೆದಿದೆ ಎಂಬುದು ಸುಳ್ಳು

ಮಂಗಳೂರು, ಎ.12: ಕುಂದಾಪುರದ ತೆಕ್ಕಟ್ಟೆ ಬಳಿ ಕೆಲ ದಿನಗಳ ಹಿಂದೆ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಶಿವಪ್ರಸಾದ್ ಯಾನೆ ಅಯ್ಯಪ್ಪನ ಮೇಲೆ ಹೊರಿಸಿರುವ ಬಿಜೆಪಿ ನಾಯಕ ಈಶ್ವರ ಕಟೀಲ್ ಕೊಲೆಗೆ ಸಂಚು ರೂಪಿಸಿದ್ದಾರೆಂಬ ಆರೋಪ ಸುಳ್ಳು. ರಾಜಕೀಯ ದುರುದ್ದೇಶದಿಂದ ಈ ಆರೋಪ ಹೊರಿಸಿ ಅಮಾಯಕ ಶಿವಪ್ರಸಾದ್‌ನನ್ನು ಜೈಲಿಗಟ್ಟಲಾಗಿದೆ ಎಂದು ಶಿವಪ್ರಸಾದ್‌ನ ಕುಟುಂಬಸ್ಥರು ಹಾಗೂ ನೆರೆಹೊರೆಯವರು ಆರೋಪಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿವಪ್ರಸಾದ್‌ನ ತಮ್ಮ ಸುಶಾಂತ್ ಶೆಟ್ಟಿ, ಪೊಲೀಸರ ದಾಖಲೆಯ ಪ್ರಕಾರ ಇಂತಹ ಯಾವುದೇ ಪ್ರಕರಣ ದಾಖಲಾಗಲಿಲ್ಲ. ಆದರೂ ರಾಜಕೀಯ ದುರುದ್ದೇಶದಿಂದ ಪೊಲೀಸರ ಮೇಲೆ ಒತ್ತಡ ಹೇರಿ ಈಶ್ವರ ಕಟೀಲ್ ತಮಗೆ ವಿಧಾನಸಭಾ ಚುನಾವಣೆಗೆ ಟಿಕೆಟ್ ಗಿಟ್ಟಿಸಿಕೊಳ್ಳಲು ಮಾಡಿರುವ ಹುನ್ನಾರ ಇದೆಂದು ಹೇಳಿದರು.

ಕಿಲೆಂಜೂರು ಗ್ರಾಮದ ಒಲವಿನ ಗುಡ್ಡೆ ಮಾಗಂದಡಿಯ ಶಿವಪ್ರಸಾದ್ ಕಳೆದ ಕೆಲ ಸಮಯದಿಂದ ತೆಕ್ಕಟ್ಟೆಯ ಕಲ್ಲುಕೋರೆಯಲ್ಲಿ ಕೆಲಸ ಮಾಡುತ್ತಿದ್ದ. ಈ ಹಿಂದೆ ಶಿವಪ್ರಸಾದ್ ಮೇಲೆ ಮುಲ್ಕಿ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆಗಾಗಿ ಮಾ.24ರಂದು ಮಂಗಳೂರು ನ್ಯಾಯಾಲಯಕ್ಕೆ ಆತ ಹಾಜರಾಗಿದ್ದ. ನ್ಯಾಯಾಲಯದ ಕಲಾಪ ಮುಗಿಸಿ ತೆಕ್ಕಟ್ಟೆಯಲ್ಲಿ ಕೆಲಸಕ್ಕೆ ತೆರಳಿದ್ದ. ಕೋರೆಯಲ್ಲಿ ಲಾರಿ ಚಾಲಕನಾಗಿ ದುಡಿಯುತ್ತಿರುವ ಆತ ಅಲ್ಲಿ ಎಟಿಎಂನಿಂದ ಹಣ ಪಡೆದು ಹೊರ ಬರುವ ಸಂದರ್ಭ ಮಂಗಳೂರು ಉತ್ತರ ರೌಡಿ ನಿಗ್ರಹ ದಳ ಪೊಲೀಸರು ಬಂಧಿಸಿದ್ದರು. ಅಲ್ಲಿಂದ ಆತನನ್ನು ಪಣಂಬೂರು ಠಾಣೆಯಲ್ಲಿರಿಸಿ ಚಿತ್ರಹಿಂಸೆ ನೀಡಿ ಇತರ ಇಬ್ಬರು ಆರೋಪಿಗಳಾದ ಗುರುಪುರ ಉಳಾಯಿಬೆಟ್ಟುವಿನ ಸಾಲೆಮಜಲು ಎಂಬಲ್ಲಿನ ಪ್ರದೀಪ್ ಪೂಜಾರಿ ಮತ್ತು ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಮರ್ತನಾಡಿ ಎಂಬಲ್ಲಿನ ನಾರಾಯಣ ಬೆಳ್ಚಡ ಎಂಬವರ ಮಗ ದಿನೇಶ್ ಬೆಳ್ಚಡರೊಂದಿಗೆ ಮಾ.28ರಂದು ಬೆಳಗ್ಗೆ 2.30ಕ್ಕೆ ಮಾರಕಾಯುಧಗಳು ಮತ್ತು ಮೆಣಸಿನ ಹುಡಿ ಇರಿಸಿ ದರೋಡೆಗೆ ಸಂಚು ರೂಪಿಸುತ್ತಿದ್ದರೆಂಬ ಪ್ರಕರಣ ದಾಖಲಾಸಲಾಗಿದೆ. ಪೊಲೀಸರ ದಾಖಲೆಗಳ ಪ್ರಕಾರ ಕಟೀಲಿನ ನವೀನ ಹಾಗೂ ಉಡುಪಿಯ ಅಶೋಕ ಗಾಣಿಗ ಎಂಬವರು ಈ ಸಂದರ್ಭ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಪ್ರಕರಣದ ಕುರಿತಂತೆ ಪೊಲೀಸ್ ಆಯುಕ್ತರು ನೀಡಿರುವ ಹೆಳಿಕೆಯಲ್ಲಿ ದರೋಡೆಗೆ ಸಂಚು ರೂಪಿಸಿದ್ದರೆಂದು ಹೇಳಲಾಗಿತ್ತು. ಆದರೆ ಬಳಿಕ ಈ ಪ್ರಕರಣ ರಾಜಕೀಯ ತಿರುವು ಪಡೆದು ಈಶ್ವರ ಕಟೀಲ್‌ರವರ ಕೊಲೆಗೈಯ್ಯಲು ಸಂಚು ಎಂಬುದಾಗಿ ಹುಯಿಲೆಬ್ಬಿಸಿ ಮಾಧ್ಯಮಗಳಲ್ಲೂ ಸುದ್ದಿ ಪ್ರಕಟವಾಗಿದೆ. ಪೊಲೀಸರು ಮಾ. 24ರಂದು ತೆಕ್ಕಟ್ಟೆಯ ಎಟಿಎಂ ಬಳಿ ಶಿವಪ್ರಸಾದ್‌ರನ್ನು ಬಂಧಿಸಿರುವ ಸಿಸಿಟಿವಿ ಫೂಟೇಜ್‌ಗಳಿವೆ. ಪೊಲೀಸರು ಸಾಮಾನ್ಯ ಉಡುಪಿನಲ್ಲಿ ಮುನ್ಸೂಚನೆ ನೀಡದೆ ಶಿವಪ್ರಸಾದ್‌ನನ್ನು ಸಾರ್ವಜನಿಕರ ಎದುರೇ ಬಂಧಿಸಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ಫೋಟೋಗಳನ್ನು ತೋರಿಸಿ ಸುಶಾಂತ್ ಶೆಟ್ಟಿ ವಿವರಿಸಿದರು.

ಹಿಂದೆ ಬಿಜೆಪಿ ಕಾರ್ಯಕರ್ತರಾಗಿದ್ದ ಶಿವಪ್ರಸಾದ್ ಕಾರಣಾಂತರದಿಂದ ಮುನಿಸಿಕೊಂಡು ಪಕ್ಷದಿಂದ ದೂರವಾಗಿದ್ದಾನೆ. ಇದನ್ನೇ ನೆನಪವಾಗಿಸಿ ಇದೀಗ ಈಶ್ವರ ಕಟೀಲ್ ಪೊಲೀಸರ ಜತೆ ಸೇರಿ ಈ ಸಂಚು ರೂಪಿಸಿದ್ದಾರೆ ಎಂದು ಸುಶಾಂತ್ ಶೆಟ್ಟಿ ಆರೋಪಿಸಿದರು.

ಸಹೋದರ ಮೇಲಾಗಿರುವ ಪೊಲೀಸ್ ದೌರ್ಜನ್ಯವನ್ನು ಪ್ರಶ್ನಿಸಿ, ನ್ಯಾಯಕ್ಕಾಗಿ ಒತ್ತಾಯಿಸಿ ಪೊಲೀಸ್ ಆಯುಕ್ತರು ಹಾಗೂ ಮಾನವ ಹಕ್ಕು ಆಯೋಗಕ್ಕೂ ದೂರು ನೀಡುವುದಾಗಿ ಸುಶಾಂತ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶಿವಪ್ರಸಾದ್ ತಾಯಿ ವಿಜಯಲಕ್ಷ್ಮಿ, ಸ್ನೇಹಿತ ರಿತೇಶ್, ನೆರೆಹೊರೆಯವರಾದ ಹೇಮಲತಾ, ಸುದರ್ಶನ್ ಉಪಸ್ಥಿತರಿದ್ದರು 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X