Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಳ್ಳೇಗಾಲ: ಬಿಎಸ್‍ಪಿ, ಜೆಡಿಎಸ್...

ಕೊಳ್ಳೇಗಾಲ: ಬಿಎಸ್‍ಪಿ, ಜೆಡಿಎಸ್ ಕಾರ್ಯಕರ್ತರ ಸಭೆ, ಪಕ್ಷ ಸೇರ್ಪಡೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ12 April 2018 6:58 PM IST
share
ಕೊಳ್ಳೇಗಾಲ: ಬಿಎಸ್‍ಪಿ, ಜೆಡಿಎಸ್ ಕಾರ್ಯಕರ್ತರ ಸಭೆ, ಪಕ್ಷ ಸೇರ್ಪಡೆ ಕಾರ್ಯಕ್ರಮ

ಕೊಳ್ಳೇಗಾಲ,ಎ.12: ನಾನು ರೈತರ ಹಾಗೂ ಸಾಮಾನ್ಯ ಬಡ ಜನರೊಂದಿಗೆ ಇದ್ದು, ಹಲವಾರು ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕೆಲಸಗಳನ್ನು ಮಾಡುತ್ತಾ ಬಂದಿದ್ದೇನೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನಗೆ ಗೆಲ್ಲಿಸಿಕೊಡುವ ಮೂಲಕ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕೆಂದು ಎಂದು ಬಿಎಸ್‍ಪಿ ರಾಜ್ಯಾಧ್ಯಕ್ಷ ಎನ್.ಮಹೇಶ್ ಅವರು ತಿಳಿಸಿದರು.

ಪಟ್ಟಣದ ಭ್ರಮರಾಂಭ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಬಿಎಸ್‍ಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಸಭೆ ಹಾಗೂ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನನ್ನು ಮೂರು ಬಾರಿ ಸೋಲಿಸಿದ್ದೀರಿ. ಇದು ನನಗೆ ಕೊನೆಯ ಅವಕಾಶ. ಇದೊಂದು ಬಾರಿ ನನ್ನನ್ನು ಗೆಲ್ಲಿಸಿಕೊಡಬೇಕು ಎಂದು ಬಿಎಸ್‍ಪಿ ಪಕ್ಷದ ಮುಖಂಡರ ಜೊತೆ ಮನವಿ ಮಾಡಿಕೊಂಡರು. ಕೊಳ್ಳೇಗಾಲ ಪಟ್ಟಣದ 31 ವಾರ್ಡ್‍ನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷವನ್ನು ಬಿಟ್ಟು ಬಿಎಸ್‍ಪಿ ಪಕ್ಷಕ್ಕೆ 50 ಕ್ಕೂ ಹೆಚ್ಚು ಮಂದಿ ಸೇರಿದ್ದಾರೆ ಎಂದು ತಿಳಿಸಿದರು.

ಕಳೆದ  2013 ರಲ್ಲಿ ಪಟ್ಟಣದದಿಂದ 28 ಸಾವಿರ ಮತಗಳು ಚಲಾವಾಣೆಯಾಗಿ ಅದರಲ್ಲಿ ಬಿಎಸ್‍ಪಿಗೆ 6 ಸಾವಿರ ಮತಗಳು ಮಾತ್ರ ಬಂದಿದ್ದು, ನಮ್ಮ ಸೋಲಿಗೆ ಕಾರಣವಾಗಿತ್ತು. ಈ  ಬಾರಿ ಹಾಗಾಗಬಾರದು. ಪ್ರತಿ ಬೂತ್‍ನಲ್ಲೂ 300 ಮತಗಳನ್ನು ಪಡೆಯಬೇಕು. ಮತ್ತು ಟೌನ್‍ನಿಂದ ಒಟ್ಟು ಕನಿಷ್ಠ 16 ಸಾವಿರ ಮತಗಳನ್ನು ಪಡೆಯಲು ಶ್ರಮ ವಹಿಸಬೇಕು ಎಂದು ಕರೆ ನೀಡಿದರು.

ನಾನು ಶಾಸಕನಾದರೆ ಯಾವುದೇ ಮಧ್ಯವರ್ತಿಯನ್ನು ಇಟ್ಟುಕೊಳ್ಳುವುದಿಲ್ಲ. ರಾಜಕಾರಣದ ಒಂದು ಮಾದರಿಯನ್ನು ಸೃಷ್ಟಿಸುವ ಕನಸು ಮತ್ತು  ಅಭಿವೃದ್ದಿಯ ಮಾದರಿ ಸೃಷ್ಟಿಸುವ ಕನಸನ್ನು ಇಟ್ಟುಕೊಂಡಿದ್ದೇನೆ ಎಂದು ಅವರು ಹೇಳಿದರು.

ಈ ಸಭೆಯಲ್ಲಿ ನಗರಸಭಾ ಸದಸ್ಯ ಕೃಷ್ಣಯ್ಯ, ರಾಮಕೃಷ್ಣ, ರಂಗಸ್ವಾಮಿ, ತಾ.ಪಂ ನಾಗರಾಜು, ಮುಖಂಡರಾದ ಉಪ್ಪಾರ ಮಾದೇಶ್, ಇಂದ್ರೇಶ್, ಚಾಮರಾಜು, ರಮೇಶ್, ಸಮೀಉಲ್ಲಾ, ಸೋಮಣ್ಣ, ಜಗದೀಶ್,  ರಾಜೇಂದ್ರ, ಇಕಾವುಲ್ಲಾ, ಶವನಂಜಪ್ಪ, ಚಂದ್ರು ರಮೆಶ್ ಸೇರಿ ಹಲವು ಮುಖಂಡರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X