Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಸಿಬಿ ದಾಳಿ ಪ್ರಕರಣ: ಅಧಿಕಾರಿಗಳ ಬಳಿ...

ಎಸಿಬಿ ದಾಳಿ ಪ್ರಕರಣ: ಅಧಿಕಾರಿಗಳ ಬಳಿ ಕೋಟಿಗಟ್ಟಲೆ ಆಸ್ತಿ ಪತ್ತೆ

ವಾರ್ತಾಭಾರತಿವಾರ್ತಾಭಾರತಿ12 April 2018 8:37 PM IST
share
ಎಸಿಬಿ ದಾಳಿ ಪ್ರಕರಣ: ಅಧಿಕಾರಿಗಳ ಬಳಿ ಕೋಟಿಗಟ್ಟಲೆ ಆಸ್ತಿ ಪತ್ತೆ

ಬೆಂಗಳೂರು, ಎ.12: ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪದ ಮೇಲೆ ಆರು ಅಧಿಕಾರಿಗಳ ಮೇಲೆ ಎಸಿಬಿ ದಾಳಿ ನಡೆಸಿದ ಪ್ರಕರಣ ಸಂಬಂಧ ಕೋಟಿಗಟ್ಟಲೆ ಆಸ್ತಿ ಪತ್ತೆಯಾಗಿದೆ.

ಹುಬ್ಬಳ್ಳಿ: ಕೆಪಿಟಿಸಿಎಲ್ ಕಚೇರಿಯ ಸಹಾಯಕ ಕಾರ್ಯಪಾಲ ಅಭಿಯಂತರ ಮಲ್ಲಿಕಾರ್ಜುನ್ ಎನ್.ಸವಣೂರ ಅವರ ಮೂರು ಮನೆ ಸೇರಿ ಕಚೇರಿ ಮೇಲೆ ದಾಳಿ ನಡೆಸಿದಾಗ 4 ಖಾಲಿ ನಿವೇಶ, ಗದಗದಲ್ಲಿ 6 ಎಕರೆ ಕೃಷಿ ಜಮೀನು, 300 ಗ್ರಾಂ ಚಿನ್ನ, 432 ಗ್ರಾಂ ಬೆಳ್ಳಿ, ಬೈಕ್ ಹಾಗೂ ಆರು ಮೊಬೈಲ್ ಪತ್ತೆಯಾಗಿದೆ.

ಧಾರವಾಡ: ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರೀಶ್ವನಾಥ ವರೂರ ಅವರ ಸ್ವಗೃಹ ಸೇರಿದಂತೆ ಮೂರು ಮನೆ ಮತ್ತು ಕರ್ತವ್ಯ ನಿರ್ವಹಿಸುತ್ತಿರುವ ಕಚೇರಿ ಮೇಲೆ ದಾಳಿ ನಡೆಸಿದಾಗ ಧಾರವಾಡ ನಗರದಲ್ಲಿ 5 ಖಾಲಿ ನಿವೇಶನ, ತಾಲೂಕಿನಲ್ಲಿ 1.20 ಎಕರೆ ಭೂಮಿ, ಹುಬ್ಬಳ್ಳಿಯಲ್ಲಿ 1.5 ಎಕರೆ 5 ಕೃಷಿ ಭೂಮಿ, 377 ಗ್ರಾಂ ಚಿನ್ನ, 2.290 ಕೆಜಿ ಬೆಳ್ಳಿ, ಒಂದು ಕಾರು, ಬೈಕ್, ಬ್ಯಾಂಕ್‌ಗಳಲ್ಲಿ 66 ಸಾವಿರ ನಗದು ಹಣ ಮತ್ತು 13.50 ಲಕ್ಷ ಠೇವಣಿ ಪತ್ತೆಯಾಗಿದೆ.

ಉಡುಪಿ: ಕುಂದಾಪುರ ತಾಲೂಕು ಪಂಚಾಯತ್ ಸಹಾಯಕ ಇಂಜಿನಿಯರ್ ರವಿಶಂಕರ್ ಅವರ ವಡೇರಾ ಹೋಬಳಿಯಲ್ಲಿರುವ ವಾಸದ ಮನೆ ಸೇರಿ 2 ಮನೆ ಹಾಗೂ ಇವರು ಕರ್ತವ್ಯ ನಿರ್ವಹಿಸುತ್ತಿರುವ ಕಚೇರಿಯ ಮೇಲೆ ದಾಳಿ ನಡೆಸಿದಾಗ, 4 ನಿವೇಶನಗಳು, 1.113 ಕೆಜಿ ಚಿನ್ನ, 1.74 ಕೆಜಿ ಬೆಳ್ಳಿ, ಕಾರು, ಬೈಕ್, 18.79 ಲಕ್ಷ ರೂ., 2 ದುಬಾರಿ ಮೊಬೈಲ್ ಹಾಗೂ 2 ಲಕ್ಷ ವೌಲ್ಯದ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿವೆ.

ಬೆಂಗಳೂರು: ಬಿಬಿಎಂಪಿಯ ಹೆಮ್ಮಗೆಪುರ ವಾರ್ಡ್ 198ರ ಕಂದಾಯ ನಿರೀಕ್ಷಕ ಜಿ.ಎಂ.ಶಿವಕುಮಾರ್ ಅವರ ದೊಡ್ಡಕಲ್ಲಸಂದ್ರದಲ್ಲಿರುವ ವಾಸದ ಮನೆ ಹಾಗೂ ಕರ್ತವ್ಯ ನಿರ್ವಹಿಸುತ್ತಿರುವ ಕಚೇರಿಯ ಮೇಲೆ ದಾಳಿ ನಡೆಸಿದಾಗ, 2 ವಸತಿ ಸಂಕೀರ್ಣ, 4 ನಿವೇಶನಗಳು, 880ಗ್ರಾಂ ಚಿನ್ನ, 4.148 ಕೆಜಿ ಬೆಳ್ಳಿ, ಮೂರು ಕಾರು, ಬೈಕ್, 4. 23 ಲಕ್ಷ ಬ್ಯಾಂಕ್‌ನಲ್ಲಿ ಠೇವಣಿ, 16.69 ಲಕ್ಷ ಗೃಹೋಪಯೋಗಿ ವಸ್ತುಗಳು ಕಂಡು ಬಂದಿವೆ.

ಮೈಸೂರು: ಮೈಸೂರು ಸಿಟಿ ಕಾಪೋರೇಷನ್ ವಾಟರ್ ಇನ್ಸ್‌ಪೆಕ್ಟರ್ ಟಿ.ಎಸ್.ಕೃಷ್ಣೇಗೌಡ ಅವರ ಆನಂದನಗರ, ಮೈಸೂರಿನ ವಾಸದ ಮನೆ ಹಾಗೂ ಒಂಟಿಕೊಪ್ಪಲುನಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಿ ಕಾರ್ಯಾಚರಣೆ ಕೈಗೊಂಡಾಗ, ಮೈಸೂರಿನಲ್ಲಿ 2 ವಾಸದ ಮನೆ, ಒಂದು ನಿವೇಶನ, ತಿಪ್ಪೂರು ಗ್ರಾಮದಲ್ಲಿ 20 ಗುಂಟೆ ಭೂಮಿ, 532 ಗ್ರಾಂ ಚಿನ್ನ, 750 ಗ್ರಾಂ ಬೆಳ್ಳಿ, ಕಾರು, ಮೂರು ಬೈಕ್ ಹಾಗೂ 1 ಲಕ್ಷ ರೂ. ಪತ್ತೆಯಾಗಿದೆ.

ದಾವಣಗೆರೆಯ ಜಗಳೂರು ಗುರುಸಿದ್ದಪುರ ಗ್ರಾಮ ಪಂಚಾಯತ್ ಪಿಡಿಓ ನಾಗರಾಜ್ ಅವರು ನಾಲ್ಕು ಮನೆಗಳು ಸೇರಿ ಕಚೇರಿಗಳ ಮೇಲೆ ದಾಳಿ ನಡೆಸಿದಾಗ, ಎಸ್‌ಎಸ್ ಲೇಔಟ್‌ನಲ್ಲಿ 1 ವಾಸದ ಮನೆ, ವೆಂಕಟಾಪುರದ ವಿವಿಧ ಸರ್ವೇ ನಂಬರಗಳಲ್ಲಿ ಒಟ್ಟು 33.21 ಎಕರೆ ಭೂಮಿ, 586 ಗ್ರಾಂ ಚಿನ್ನ, 250 ಗ್ರಾಂ ಬೆಳ್ಳಿ, 2 ಕಾರು ಹಾಗೂ ನಾಲ್ಕು ಬೈಕ್, 2 ಮೊಬೈಲ್, 3 ಲಕ್ಷ ರೂ. ವೌಲ್ಯದ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿವೆ ಎಂದು ಎಸಿಬಿ ತಿಳಿಸಿದೆ.

ಎ.10ರಂದು ಎಸಿಬಿ ಅಧಿಕಾರಿಗಳು ರಾಜ್ಯದ 22 ಸ್ಥಳಗಳಲ್ಲಿ ಏಕಾಏಕಿ ಸರಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ಇನ್ನು ಆರು ಅಧಿಕಾರಿಗಳ ಪ್ರಕರಣಗಳಲ್ಲಿ ತನಿಖೆ ಮುಂದುವರೆದಿದ್ದು, ಆಸ್ತಿ-ಪಾಸ್ತಿಗಳ ಮೂಲದ ಬಗ್ಗೆ ತನಿಖೆ ಹಾಗೂ ದಾಖಲೆಗಳ ಪರಿಶೀಲನಾ ಕಾರ್ಯ ಸಂಗ್ರಹಣೆ ಮುಂದುವರೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X