ವಿಧಾನಸಭಾ ಚುನಾವಣೆ: ಮತಗಟ್ಡೆ ಅಧಿಕಾರಿ, ಸಹಾಯಕ ಅಧಿಕಾರಿಗಳಿಗೆ ಇಂದು ತರಬೇತಿ
ಉಡುಪಿ, ಎ.12: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಲು ನೇಮಕಾತಿ ಆದೇಶ ಪಡೆದ ಎಲ್ಲ ಮತಗಟ್ಟೆ ಅಧಿಕಾರಿ ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಎ.13ರಂದು ತರಬೇತಿ ನೀಡಲಾಗು ವುದು.
ತರಬೇತಿಯು ಬೆಳಗ್ಗೆ 10 ಗಂಟೆಗೆ ಪ್ರಾರಂಭಗೊಳ್ಳಲಿದೆ. 118 ಬೈಂದೂರು ಮತ್ತು 119 ಕುಂದಾಪುರ ವಿಧಾನಸಬಾ ಕ್ಷೇತ್ರ ವ್ಯಾಪ್ತಿಯವರಿಗೆ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ, 120 ಉಡುಪಿ ಮತ್ತು 121 ಕಾಪು ಕ್ಷೇತ್ರ ವ್ಯಾಪ್ತಿಯವರಿಗೆ ಉಡುಪಿ ಬ್ರಹ್ಮಗಿರಿಯ ಸೈಂಟ್ ಸಿಸಿಲಿಯಾ ಹೈಸ್ಕೂಲ್ನಲ್ಲಿ ಹಾಗೂ 122 ಕಾರ್ಕಳ ವಿಧಾನಸಬಾ ಕ್ಷೇತ್ರ ವ್ಯಾಪ್ತಿಯವರಿಗೆ ಕಾರ್ಕಳ ಗಾಂಧಿ ಮೈದಾನದ ಬಳಿ ಇರುವ ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನಲ್ಲಿ ತರಬೇತಿಯನ್ನು ಆಯೋಜಿಸಲಾಗಿದೆ.
ನೇಮಕಾತಿ ಆದೇಶ ಪಡೆದಿರುವ ಎಲ್ಲ ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳು ಅವರವರ ನೇಮಕಾತಿ ಆದೇಶದಲ್ಲಿ ನಮೂದಿಸಿದ ಸ್ಥಳಗಳಲ್ಲಿ ಕಡ್ಡಾಯವಾಗಿ ತರಬೇತಿಗೆ ಹಾಜರಾಗುವಂತೆ ಮತ್ತು ತರಬೇತಿಗೆ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಪ್ರಜಾಪ್ರಾತಿನಿಧ್ಯ ಕಾಯಿದೆ 1951ರ ಕಲಂ 134ರನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.





