Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಅಪ್ಪೆ ಟೀಚರ್’ ತುಳು ಚಿತ್ರಕ್ಕೆ...

‘ಅಪ್ಪೆ ಟೀಚರ್’ ತುಳು ಚಿತ್ರಕ್ಕೆ ಪ್ರೇಕ್ಷಕರಿಂದ ಅತ್ಯುತ್ತಮ ಸ್ಪಂದನೆ

ವಾರ್ತಾಭಾರತಿವಾರ್ತಾಭಾರತಿ12 April 2018 10:17 PM IST
share

ಮಂಗಳೂರು, ಎ.12: ಸ್ವಯಂಪ್ರಭ ಎಂಟರ್‌ಟೈನ್‌ಮೆಂಟ್ ಆ್ಯಂಡ್ ಪ್ರೊಡಕ್ಷನ್ ಸಂಸ್ಥೆ ನಿರ್ಮಿಸುತ್ತಿರುವ, ಕಿಶೋರ್ ಮೂಡುಬಿದಿರೆ ಚಿತ್ರ ನಿರ್ದೇಶನದ ‘ಅಪ್ಪೆಟೀಚರ್’ ಸಿನೆಮಾವು ಭರ್ಜರಿ ಪ್ರದರ್ಶನ ಕಾಣುತ್ತಿವೆ. ಈ ಚಿತ್ರವನ್ನು ಮೊದಲ 3 ವಾರಗಳಲ್ಲಿ 1.72 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದು, ಭರ್ಜರಿ 1.71 ಕೋ.ರೂ ಕಲೆಕ್ಷನ್ ಪಡೆದಿದೆ.

ಇದರಲ್ಲಿ 95.81 ಲಕ್ಷ ರೂ. ಮಲ್ಟಿಪ್ಲೆಕ್ಸ್‌ಗಳಿಂದ ಹಾಗೂ 75.23 ಲಕ್ಷ ರೂ.ಇತರೆ ಟಾಕೀಸುಗಳಿಂದ ಕಲೆಕ್ಷನ್ ಆಗಿದೆ. ಸೀಮಿತ ಮಾರುಕಟ್ಟೆಯ ತುಳು ಚಿತ್ರರಂಗದಲ್ಲಿ ಈ ತರಹ ವೀಕ್ಷಕರನ್ನು ಸೆಳೆಯಬಹುದು ಮತ್ತು ಉತ್ತಮ ಸಿನೆಮಾ ಕೊಟ್ಟರೆ ತುಳು ಸಿನೆಮಾಕ್ಕೂ ಒಳ್ಳೆಯ ಮಾರುಕಟ್ಟೆ ಇದೆ ಎಂಬುವುದನ್ನು ‘ಅಪ್ಪೆಟೀಚರ್’ ಸಾಬೀತುಪಡಿಸಿವೆ.

ವೀಕ್ಷಕರಲ್ಲಿ ಮಹಿಳೆಯರೇ ಹೆಚ್ಚಾಗಿದ್ದು, ಮಹಿಳಾ ವೀಕ್ಷಕರ ಮನ ಗೆಲ್ಲುವಲ್ಲಿ ಸಿನಿಮಾ ಯಶಸ್ವಿಯಾಗಿದೆ. ಚಿತ್ರತಂಡ ಹೇಳುವ ಪ್ರಕಾರ ಯಾವ ಸಿನೆಮಾಕ್ಕೆ ಜನರು ಕುಟುಂಬ ಸಮೇತರಾಗಿ ಬರುತ್ತಾರೋ, ಆ ಸಿನೆಮಾ ಜನರನ್ನು ಸೆಳೆದಿದೆ ಎಂದು ಅರ್ಥ. ಆ ನಿಟ್ಟಿನಲ್ಲಿ ನಾವು ಯಶಸ್ವಿಯಾಗಿದ್ದೇವೆ. ಈಗಾಗಲೇ ಪರೀಕ್ಷೆಗಳು ಮುಗಿದಿದ್ದು, ಮುಂದಿನ ದಿನಗಳಲ್ಲಿ ವೀಕ್ಷಕರ ಸಂಖ್ಯೆ ಇನ್ನೂ ಹೆಚ್ಚಾಗುವ ನಿರೀಕ್ಷೆ ಇದೆ. ಚಿತ್ರದ ನಿರ್ದೇಶಕ ಕಿಶೋರ್ ಮೂಡುಬಿದಿರೆಯವರ ಪ್ರಕಾರ ತುಳು ಚಿತ್ರರಂಗದಲ್ಲಿ ಇಲ್ಲಿಯವರೆಗೆ ಯಾರೂ ಆಯ್ಕೆ ಮಾಡದ ಕಥೆ, ಆರಂಭದಿಂದ ಅಂತ್ಯದವರೆಗೂ ನಕ್ಕು ನಗಿಸುವ ಹಾಸ್ಯ, ಸೂಕ್ತ ಹಾಗೂ ಪ್ರಬುದ್ಧ ಕಲಾವಿದರ ಆಯ್ಕೆ, ಕಲಾವಿದರನ್ನು ಸಮರ್ಥವಾಗಿ ಬಳಸಿರುವುದು, ಇದಕ್ಕಿಂತ ಹೆಚ್ಚಾಗಿ ನಾಟಕದ ಚೌಕಟ್ಟಿನಿಂದ ಹೊರಬಂದು ಅಪ್ಪಟ ದೃಶ್ಯಗಳ ಮೂಲಕ ಕಥೆಯನ್ನು ಪೋಣಿಸಿರುವುದು, ಅದ್ಭುತ ಹಿನ್ನ್ನೆಲೆ ಸಂಗೀತವೇ ಸಿನೆಮಾದ ಗೆಲುವಿನ ಗುಟ್ಟು ಎನ್ನುತ್ತಾರೆ. ಅಲ್ಲದೆ ತುಳು ಸಿನೆಮಾ ನೋಡುಗರು ಹಿಂದಿ, ಕನ್ನಡ, ಇಂಗ್ಲಿಷ್ ಸಿನೆಮಾ ನೋಡುವವರಾಗಿದ್ದು, ಸಿನೆಮಾ ತಾಂತ್ರಿಕತೆಯ ಬಗ್ಗೆ ಆಳವಾದ ಜ್ಞಾನ ಹೊಂದಿದ್ದು ಹಾಗಾಗಿ ನಾವೆಲ್ಲೂ ಸಿನೆಮಾ ತಾಂತ್ರಿಕ ವೈಭವಕ್ಕೆ ಧಕ್ಕೆ ಬಾರದ ಹಾಗೆ ಏನೆಲ್ಲಾ ಬೇಕೋ ಅದನ್ನು ಒದಗಿಸಿದ್ದೇವೆ. ಹಾಗಾಗಿ ಸಿನೆಮಾ ಗೆದ್ದಿದೆ, ಜನರನ್ನು ರಂಜಿಸಿದೆ ಎಂದು ನಿರ್ಮಾಪಕ ಕೆ.ರತ್ನಾಕರ್ ಕಾಮತ್ ಪತ್ರಿಕೆಗೆ ತಿಳಿಸಿದ್ದಾರೆ.

ತಾರಾಗಣದಲ್ಲಿ ದೇವದಾಸ್ ಕಾಪಿಕಾಡ್, ಬೋಜರಾಜ್ ವಾಮಂಜೂರ್, ನವೀನ್ ಡಿ.ಪಡೀಲ್, ಅರವಿಂದ್ ಬೋಳಾರ್, ಗೋಪಿನಾಥ್ ಭಟ್, ಉಷಾ ಭಂಡಾರಿ, ನಾಯಕನಾಗಿ ಸುನೀಲ್, ಉಮೇಶ್ ಮಿಜಾರ್ ಮುಂತಾದವರಿದ್ದು, ಚಂಡಿಕೋರಿ ಸಿನೆಮಾದ ನಾಯಕಿ ಕರೀಷ್ಮಾ ಅಮೀನ್ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ.

‘ಅಪ್ಪೆಟೀಚರ್’ ಈಗಾಗಲೇ ತುಂಬಿದ ಗೃಹದೊಂದಿಗೆ ಪ್ರದರ್ಶನ ಕಾಣುತ್ತಿದ್ದು, 25ನೇ ದಿನದತ್ತ ಸಾಗುತ್ತಿದೆ. ಮುಂದಿನ ವಾರ ಮಡಿಕೇರಿಯ ಕಾವೇರಿ ಥಿಯೇಟರ್‌ನಲ್ಲಿ ಹಾಗೂ ಬಳಿಕ, ಮೂಡಿಗೆರೆ, ಕೊಪ್ಪ, ಶಿವಮೊಗ್ಗ, ಕಾಸರಗೋಡು ಹಾಗೂ ಬೆಂಗಳೂರಿನಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ಕೆ.ರತ್ನಾಕರ್ ಕಾಮತ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X