ಹರಪನಹಳ್ಳಿ: ಸಾಲಬಾಧೆ; ವಿಷ ಸೇವಿಸಿ ರೈತ ಆತ್ಮಹತ್ಯೆ
![ಹರಪನಹಳ್ಳಿ: ಸಾಲಬಾಧೆ; ವಿಷ ಸೇವಿಸಿ ರೈತ ಆತ್ಮಹತ್ಯೆ ಹರಪನಹಳ್ಳಿ: ಸಾಲಬಾಧೆ; ವಿಷ ಸೇವಿಸಿ ರೈತ ಆತ್ಮಹತ್ಯೆ](https://www.varthabharati.in/sites/default/files/images/articles/2018/04/13/dc-Cover-652ovhkibhg82kh6on274ihkn1-20180220010751.Medi_.jpeg)
ಹರಪನಹಳ್ಳಿ,ಎ.13: ಸಾಲಬಾಧೆಯಿಂದ ಯುವ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ.
ಅಶೋಕ್(32) ಮೃತಪಟ್ಟ ಯುವ ರೈತ. ಅಶೋಕನ ಹೆಸರಿನಲ್ಲಿ 3 ಎಕರೆ ಜಮೀನು ಇದೆ. ಮೆಕ್ಕೆಜೋಳ ಬಿತ್ತನೆ ಮಾಡಿದ್ದು, ಮಳೆ ಬಾರದೇ ಫಸಲು ಸರಿಯಾಗಿ ಬಂದಿಲ್ಲ. ಮಾದಿಹಳ್ಳಿ ಪ್ರಗತಿ ಕೃಷ್ಣ ಬ್ಯಾಂಕ್ನಲ್ಲಿ 1.50 ಲಕ್ಷ ರು. ಹಾಗೂ ಹಲವರ ಬಳಿ ಕೈಗಡ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ.
ಸಾಲ ತೀರಿಸುವುದು ಹೇಗೆ ಎಂಬ ಚಿಂತೆಯಲ್ಲಿ ಗುರುವಾರ ಮಧ್ಯಾಹ್ನ ಮನೆಯ ದನದ ಕೊಟ್ಟಿಗೆಯಲ್ಲಿ ವಿಷ ಸೇವಿಸಿದ್ದು, ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ ಮೃತಪಟ್ಟಿದ್ದಾನೆ. ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story