Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: ಚುನಾವಣಾ ನೀತಿ ಸಂಹಿತೆ;...

ಪುತ್ತೂರು: ಚುನಾವಣಾ ನೀತಿ ಸಂಹಿತೆ; ಬ್ಯಾನರ್ ಬಂಟಿಂಗ್ಸ್ ತೆರವು

ವಾರ್ತಾಭಾರತಿವಾರ್ತಾಭಾರತಿ15 April 2018 10:11 PM IST
share
ಪುತ್ತೂರು: ಚುನಾವಣಾ ನೀತಿ ಸಂಹಿತೆ; ಬ್ಯಾನರ್ ಬಂಟಿಂಗ್ಸ್ ತೆರವು

ಪುತ್ತೂರು, ಎ.15: ವಿಧಾನ ಸಭಾ ಚುನಾವಣೆಯ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಿಂದಾಗಿ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವರ ಜಾತ್ರೆಯ ಸಂದರ್ಭ  ಏಳ್ಮುಡಿಯಿಂದ ಕಲ್ಲಾರೆ ರಾಘವೇಂದ್ರ ಮಠದವರೆಗಿನ ರಸ್ತೆಯಲ್ಲಿ ಅಳವಡಿಸಲಾಗಿದ್ದ ಕೇಸರಿ ಬ್ಯಾನರ್ ಮತ್ತು ಬಂಟಿಂಗ್ಸ್‌ಗಳನ್ನು ನಗರಸಭೆಯ ಅಧಿಕಾರಿಗಳು ತೆರವುಗೊಳಿಸಿದ್ದಾರೆ.

ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠದ ಮಾಣಿಕ್ಯೋತ್ಸವದ ಅಂಗವಾಗಿ ಅಧಿಕಾರಿಗಳ ಅನುಮತಿ ಪಡೆದು ರಸ್ತೆ ಬದಿಯಲ್ಲಿ ಬ್ಯಾನರ್ ಮತ್ತು ಬಂಟಿಂಗ್ಸ್‌ಗಳನ್ನು ಅಳವಡಿಸಲಾಗಿತ್ತು. ಮಾಣಿಕ್ಯೋತ್ಸವ ಮುಗಿದರೂ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದಲ್ಲಿ ಕಲ್ಲಾರೆಯಲ್ಲಿ ದೇವರ ಕಟ್ಟೆ ಪೂಜೆ ನಡೆಯಲಿರುವುದರಿಂದ ತೆರವುಗೊಳಿಸದೆ ಹಾಗೇ ಉಳಿಸಿಕೊಳ್ಳಲಾಗಿತ್ತು. ಆದರೆ ನಗರಸಭೆಯಿಂದ ಅಳವಡಿಸಲು ಪಡೆದುಕೊಂಡಿರುವ ಅವಧಿ ಮುಗಿದಿರುವ ಹಿನ್ನಲೆಯಲ್ಲಿ ಹಾಗೂ ಚುನಾವಣಾ ನೀತಿ ಸಂಹಿತೆ ಕಾರಣದಿಂದ ಶನಿವಾರ ನಗರಸಭೆಯ ಅಧಿಕಾರಿಗಳು ಕಲ್ಲಾರೆಯಲ್ಲಿ ಅಳವಡಿಸಲಾಗಿದ್ದ ಎಲ್ಲಾ ಬ್ಯಾನರ್ ಬಂಟಿಂಗ್ಸ್‌ಗಳನ್ನು ತೆರವುಗೊಳಿಸಿದ್ದಾರೆ.

ಇತ್ತೀಚೆಗೆ ನಗರಸಭೆ ಹಾಗೂ ಪುತ್ತೂರು ಉಪವಿಭಾಗೀಯ ಅಧಿಕಾರಿಗಳ ಕಚೇರಿಯಿಂದ ಕಲ್ಲಾರೆ ರಾಘವೇಂದ್ರ ಮಠ ಕಾರ್ಯಕ್ರಮ ಹಾಗೂ ಶ್ರೀಮಹಾಲಿಂಗೇಶ್ವರ ದೇವರ ಜಾತ್ರಾ ವಿಶೇಷ ಪೇಟೆ ಸವಾರಿಗಾಗಿ ಪತಾಕೆ ಹಾಗೂ ಬಂಟಿಂಗ್ಸ್‌ನ್ನು ಅಳವಡಿಸಲು ರೂ. 3165 ಪಾವತಿಸಿ ಅನುಮತಿ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಚುನಾವಣಾಧಿಕಾರಿ ಹಾಗೂ ಪುತ್ತೂರು ಸಹಾಯಕ ಆಯುಕ್ತ ಎಚ್.ಕೆ ಕೃಷ್ಣಮೂರ್ತಿ ಅವರು ಬ್ಯಾನರ್ ಹಾಗೂ ಬಂಟಿಂಗ್ಸ್ ಅಳವಡಿಸಲು ಎ.5ರಿಂದ ಎ.18ರವರೆಗೆ ಷರತ್ತುಬದ್ದ ವಿಶೇಷ ಅನುಮತಿ ನೀಡಿದ್ದರು. ಆದರೆ ಎ.14ರಂದು ನಗರಸಭಾ ಅಧಿಕಾರಿ ವರ್ಗದವರು ಏಕಾಏಕಿ ಎಲ್ಲವನ್ನೂ ತೆರವುಗೊಳಿಸಿದ್ದಾರೆ ಎಂದು ಸ್ಥಳೀಯ ಓಂಕಾರ ಯುವಕ ವೃಂದದ ಅಧ್ಯಕ್ಷ ಮನೋಹರ್ ಕಲ್ಲಾರೆ ಆರೋಪಿಸಿದ್ದಾರೆ.

ಮಹಾಲಿಂಗೇಶ್ವರ ದೇವಳದಲ್ಲಿ ಪ್ರಾರ್ಥನೆ
ಹಿಂದೂಗಳ ಧಾರ್ಮಿಕ ಭಾವನೆಗೆಗೆ ಧಕ್ಕೆ ತರುವಂತೆ ಪತಾಕೆ ಹಾಗೂ ಬಂಟಿಂಗ್ಸ್‌ಗಳನ್ನು ನಗರಸಭೆ ಅಧಿಕಾರಿಗಳು ತೆರವುಗೊಳಿಸಿರುವುದನ್ನು ಖಂಡಿಸಿ ಹಿಂದೂ ಮಖಂಡರು ಹಾಗೂ ಓಂಕಾರ ಯುವಕ ವೃಂದದ ಸದಸ್ಯರು ಪುತ್ತೂರು ಶ್ರೀಮಹಾಲಿಂಗೇಶ್ವರ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಅನುಮತಿ ಪಡೆದು ಅಳವಡಿಸಲಾಗಿರುವ ಪತಾಕೆ ಹಾಗೂ ಬಂಟಿಂಗ್ಸ್‌ಗಳನ್ನು ನಗರಸಭೆ ಅಧ್ಯಕ್ಷರ ಒತ್ತಡಕ್ಕೆ ಮನಿದು ತೆರವುಗೊಳಿಸಿದರುವ ಸಾಧ್ಯತೆಯಿದ್ದು, ಧಾರ್ಮಿಕ ಭಾವನೆಗೆ ಧಕ್ಕೆ ತಂದ ಎಲ್ಲರಿಗೂ ಸದ್ಬುದ್ದಿ ನೀಡಲಿ ಎಂದು ಪ್ರಾರ್ಥಿಸಲಾಗಿದೆ ಎಂದು ಓಂಕಾರ ಯುವಕ ವೃಂದದ ಅಧ್ಯಕ್ಷ ಮನೋಹರ್ ಕಲ್ಲಾರೆ ತಿಳಿಸಿದ್ದಾರೆ.

ಚುನಾವಣೆ ನೀತಿ ಸಂಹಿತೆಯ ಹಿನ್ನಲೆಯಲ್ಲಿ ಮೇಲಾಧಿಕಾರಿಗಳ ಆದೇಶದಂತೆ ಈ ತೆರವು ಕಾರ್ಯಾಚರಣೆ ನಡೆಸಲಾಗಿದೆ. ನೀತಿ ಸಂಹಿತೆ ಹೊರತುಪಡಿಸಿ ಬೇರೆ ಯಾವ ಕಾರಣವೂ ಇಲ್ಲ. ಜಾತ್ರೋತ್ಸವದಲ್ಲಿ ರಸ್ತೆಗೆ ಅಡ್ಡಲಾಗಿ ಬಂಟಿಂಗ್ಸ್ ಅಳವಡಿಸಲು ನಾವು ಯಾರಿಗೂ ಅನುಮತಿ ನೀಡಿಲ್ಲ. ಅಲ್ಲದೆ ದೇವರ ಪೇಟೆ ಸವಾರಿಯಂದು ಮಾತ್ರ ಅಳವಡಿಸಿ ಮಾರನೇ ದಿನವೇ ತೆರವುಗೊಳಿಸುವಂತೆ ಅನುಮತಿ ಕೇಳಿದವರಿಗೆ ಸ್ಪಷ್ಟ ಪಡಿಸಿದ್ದೇವೆ. ದೇವರ ಸವಾರಿ ಮುಗಿದ ಮಾರನೇ ದಿನ ಎಲ್ಲೆಡೆ ತೆರವು ಮಾಡಿದ್ದೇವೆ. ಅಲ್ಲದೆ ಕಲ್ಲಾರೆಯಲ್ಲಿ ಜಾತ್ರೋತ್ಸವಕ್ಕೆ ಬ್ಯಾನರ್ ಮತ್ತು ಬಂಟಿಂಗ್ಸ್ ಅಳವಡಿಸಲು ನಮ್ಮಲ್ಲಿ ಅನುಮತಿಯನ್ನು ಪಡೆಯಲಾಗಿಲ್ಲ.
- ರೂಪ ಶೆಟ್ಟಿ, ಪೌರಾಯುಕ್ತರು, ಪುತ್ತೂರು ನಗರಸಭೆ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X