Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಕಲಿ ನೋಟು ಹಾವಳಿ ಆರೋಪ

ನಕಲಿ ನೋಟು ಹಾವಳಿ ಆರೋಪ

ವಾರ್ತಾಭಾರತಿವಾರ್ತಾಭಾರತಿ16 April 2018 7:09 PM IST
share

ಮಂಗಳೂರು, ಎ.16: ಕೆಎಸ್‌ಆರ್‌ಟಿಸಿ ಐರಾವತ ಬಸ್‌ಗಳಲ್ಲಿ ಕಳ್ಳನೋಟ್‌ಗಳ ಚಲಾವಣೆಯಾಗುತ್ತಿದ್ದು, ಬಸ್ಸು ನಿರ್ವಾಹಕರ ಜೇಬಿಗೆ ಕತ್ತರಿ ಬೀಳುತ್ತಿರುವ ಆರೋಪವೊಂದು ಬಸ್ಸು ನಿರ್ವಾಹಕರಿಂದಲೇ ಕೇಳಿ ಬಂದಿದೆ.

ಇತ್ತೀಚೆಗೆ ಮಂಗಳೂರು-ಭಟ್ಕಳ ನಡುವೆ ಸಂಚರಿಸುವ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರು ನೀಡಿದ ನಕಲಿ ನೋಟಿನಿಂದಾಗಿ ತಾನು ತನ್ನ ಕೈಯಿಂದ ಹಣವನ್ನು ಭರಿಸುವ ಪ್ರಸಂಗವನ್ನು ಎದುರಿಸಿದ್ದನ್ನು ಹೆಸರು ಹೇಳಲಿಚ್ಚಿಸದ ಬಸ್ ನಿರ್ವಾಹಕರೊಬ್ಬರು ಉಡುಪಿಯಿಂದ ಮಂಗಳೂರಿಗೆ ಬಸ್ಸಿನಲ್ಲಿ ಸಂಚರಿಸುತ್ತಿದ್ದ ವೇಳೆ ಮಂಗಳೂರಿನ ಪರಿಚಯಸ್ಥ ಪತ್ರಕರ್ರೊಬ್ಬರ ಗಮನಕ್ಕೆ ತಂದಿದ್ದಾರೆ.

ಭಟ್ಕಳದಿಂದ ಮಂಗಳೂರಿಗೆ ಬರುವ ಐರಾವತ ಬಸ್‌ಗಳಲ್ಲಿ ಹೆಚ್ಚಾಗಿ ರಾತ್ರಿ ವೇಳೆಯೇ 2 ಸಾವಿರ ಮತ್ತು ಐನೂರು ಮುಖಬೆಲೆಯ ಕಳ್ಳನೋಟುಗಳ ಚಲಾವಣೆಯಾಗುತ್ತಿದೆ ಎಂದು ಹೇಳಿರುವ ಬಸ್ ನಿರ್ವಾಹಕರು, ಇತ್ತೀಚೆಗೆ ಪ್ರಯಾಣಿಕರೊಬ್ಬರು ಎರಡು ಸಾವಿರ ಮುಖಬೆಲೆಯ ನೋಟು ನೀಡಿ ಟಿಕೆಟ್ ಪಡೆದಿದ್ದರು. ಬಸ್ ನಿರ್ವಾಹಕರು ದಿನದ ಕರ್ತವ್ಯ ಮುಗಿಸಿ ಕೆಎಸ್‌ಆರ್‌ಟಿಸಿ ಕಚೇರಿಯಲ್ಲಿ ಹಣ ಪಾವತಿಸುವ ವೇಳೆ ನೋಟುಗಳನ್ನು ಕೌಂಟಿಂಗ್ ಮಿಷಿನ್‌ಗೆ ಹಾಕಿದಾಗ ಅದರಲ್ಲಿ 2 ಸಾವಿರ ಮುಖಬೆಲೆಯ ಒಂದು ನೋಟು ನಕಲಿಯಾಗಿತ್ತು. ನಕಲಿ ನೋಟಿನ ಕಾರಣದಿಂದಾಗಿ ಆ 2 ಸಾವಿರವನ್ನು ಅವರು ತಮ್ಮ ವೇತನದಿಂದ ಭರಿಸಿದ್ದಾರೆ.

‘‘ಕೆಲವೊಮ್ಮೆ ರಾತ್ರಿ ಭಟ್ಕಳದಿಂದ ಬರುವಾಗ್ ಬಸ್ ಪ್ರಯಾಣಿಕರಿಂದ ತುಂಬಿರುತ್ತದೆ. ಈ ವೇಳೆಯೇ ನಕಲಿ ನೋಟುಗಳ ಚಲಾವಣೆಯಾಗುತ್ತದೆ. ಟಿಕೆಟ್ ನೀಡುವ ವೇಳೆ ನಕಲಿ ಯಾವುದು ಅಸಲಿ ಯಾವುದು ಎಂದು ಪತ್ತೆ ಹಚ್ಚಲು ಸಾಧ್ಯವಾಗುವುದಿಲ್ಲ. ತನಗೆ ದೊರೆತ ನಕಲಿ 2 ಸಾವಿರ ಮುಖಬೆಲೆಯ ನೋಟು ನೋಡಲು ಅಸಲಿ ನೋಟಿನಂತೆಯೇ ಇತ್ತು. ಆದರೆ ಸಂಸ್ಥೆಗೆ ಹಣಪಾವತಿಸುವ ವೇಳೆ ಹಣ ಕೌಂಟಿಂಗ್ ಮಿಷಿನ್‌ಗೆ ಹಾಕಿದಾಗ ನಕಲಿ ಎಂಬುದು ಗೊತ್ತಾಯಿತು. ಯಾವ ಪ್ರಯಾಣಿಕರು ಎಂದು ಪತ್ತೆಹಚ್ಚುವುದೂ ಕಷ್ಟ. ಇತ್ತೀಚೆಗಷ್ಟೇ ಸಂಸ್ಥೆಗೆ ಸೇರಿಕೊಂಡಿದ್ದೇನೆ. ನಮಗೆ ಸಂಬಳ ಇರುವುದು 9100 ಅದರಲ್ಲಿ ಕಳೆದ ತಿಂಗಳು ನಕಲಿ ನೋಟಿನಿಂದಾಗಿ 2 ಸಾವಿರವನ್ನು ನಾನೇ ಭರಿಸಬೇಕಿತ್ತು. ನಕಲಿ ನೋಟು ಚಲಾವಣೆ ಬಗ್ಗೆ ಇದೀಗ ಎಚ್ಚರಿಕೆ ವಹಿಸಿದ್ದೇವೆ. ಒಂದುವೇಳೆ ಅಂತಹ ನೋಟುಗಳು ಪತ್ತೆಹಚ್ಚಿದರೆ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು’’ ಎಂಬುದು ನೊಂದ ಬಸ್ ನಿರ್ವಾಹಕ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X