Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುನಿಯಾಲು ಉದಯ ಶೆಟ್ಟಿಗೆ ಕೈ ತಪ್ಪಿದ...

ಮುನಿಯಾಲು ಉದಯ ಶೆಟ್ಟಿಗೆ ಕೈ ತಪ್ಪಿದ ಕಾರ್ಕಳ ಟಿಕೆಟ್: ಬೆಂಬಲಿಗರಿಂದ ಹೆಬ್ರಿಯಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ17 April 2018 7:19 PM IST
share
ಮುನಿಯಾಲು ಉದಯ ಶೆಟ್ಟಿಗೆ ಕೈ ತಪ್ಪಿದ ಕಾರ್ಕಳ ಟಿಕೆಟ್: ಬೆಂಬಲಿಗರಿಂದ ಹೆಬ್ರಿಯಲ್ಲಿ ಪ್ರತಿಭಟನೆ

ಹೆಬ್ರಿ, ಎ.17: ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುನಿಯಾಲು ಉದಯಕುಮಾರ್ ಶೆಟ್ಟಿ ಇವರಿಗೆ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪಕ್ಷದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಹೆಬ್ರಿ ಕುಬೇರಾ ಕಟ್ಟಡದಲ್ಲಿರುವ ಕಾಂಗ್ರೆಸ್ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ರಾಷ್ಟ್ರ ನಾಯಕರಾಗಿ ಬೆಳೆದ ವೀರಪ್ಪಮೊಯ್ಲಿ ಕಾಂಗ್ರೆಸ್ ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸದೆ, ನಮ್ಮೆಲ್ಲರ ಒಮ್ಮತದ ಅಭ್ಯರ್ಥಿಗೆ ಟಿಕೆಟ್ ನೀಡದೆ ಸೀಟು ತಪ್ಪಿಸಿ ಕಾರ್ಯಕರ್ತರಿಗೆ ದ್ರೋಹವೆಸಗಿದ್ದಾರೆ. ಉದಯ ಕುಮಾರ್ ಶೆಟ್ಟಿ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾಗಿ ಪಕ್ಷ ಸಂಘಟಿಸಿ, ಯುವ ಪಡೆಯನ್ನು ನಿರ್ಮಾಣ ಮಾಡಿದ್ದರು. ಇನ್ನು 4 ದಿನಗಳ ಕಾಲಾವಕಾಶವಿದ್ದು ಕಾರ್ಯಕರ್ತರ ಅಭ್ಯರ್ಥಿಯಾದ ಉದಯ ಕುಮಾರ್ ಶೆಟ್ಟಿಯವರಿಗೆ ಪಕ್ಷದ ಬಿ ಫಾರ್ಮ್ ನೀಡಬೇಕು ಎಂದು ಹೆಬ್ರಿ ಬ್ಲಾಕ್ ಕಾಂಗ್ರೆಸ್‌ನ ನವೀನ್ ಅಡ್ಯಂತಾಯ ಒತ್ತಾಯಿಸಿದರು.

ನಮ್ಮೆಲ್ಲರ ಒಮ್ಮತದ ಅಭ್ಯರ್ಥಿ ಮುನಿಯಾಲು ಉದಯ ಶೆಟ್ಟಿ ಅವರಿಗೇ ಟಿಕೆಟ್ ನೀಡಬೇಕು. ಟಿಕೆಟ್ ನೀಡದೆ ಅನ್ಯಾಯ ಮಾಡಿದರೆ ಉಡುಪಿ ಜಿಲ್ಲಾಯಾದ್ಯಂತ ಕಾಂಗ್ರೆಸ್ ವಿರುದ್ಧ ಬೃಹತ್ ಹೋರಾಟ ನಡೆಸುವುದಾಗಿ ಕಾಂಗ್ರೆಸ್ ಮುಖಂಡ ಎಚ್.ಪ್ರವೀಣ್ ಬಲ್ಲಾಳ್ ಎಚ್ಚರಿಸಿದರು.

ನಾಡ್ಪಾಲು ವೆಂಕಟೇಶ ಶೆಟ್ಟಿ, ರಂಗನಾಥ ಪೂಜಾರಿ ಮಾತನಾಡಿ ಕಾರ್ಕಳ ಕ್ಷೇತ್ರದ 203 ಬೂತ್‌ಗಳ ಪೈಕಿ 190 ಬೂತ್‌ಗಳಲ್ಲಿ ಉದಯ ಕುಮಾರ್ ಶೆಟ್ಟಿ ಅವರೇ ಗೆಲ್ಲುವ ಸೂಚನೆ ಇದ್ದು, ಅವರಿಗೆ ಟಿಕೆಟ್ ನೀಡದಿದ್ದರೆ ನಾವೆಲ್ಲರೂ ಕಾಂಗ್ರೆಸ್ ತ್ಯಜಿಸಿ ಪಕ್ಷೇತರರಾಗಿ ಹೋರಾಟ ಮಾಡುತ್ತೇವೆ. ಉಡುಪಿ ಜಿಲ್ಲಾದ್ಯಂತ ಕಾಂಗ್ರೆಸ್ ವಿರುದ್ಧ ಹೋರಾಟ ನಡೆಸುತ್ತೇವೆ ಎಂದರು.

ನಾಡ್ಪಾಲು ವೆಂಕಟೇಶ ಶೆಟ್ಟಿ, ರಂಗನಾಥ ಪೂಜಾರಿ ಮಾತನಾಡಿ ಕಾರ್ಕಳ ಕ್ಷೇತ್ರದ 203 ಬೂತ್‌ಗಳ ಪೈಕಿ 190 ಬೂತ್‌ಗಳಲ್ಲಿ ಉದಯ ಕುಮಾರ್ ಶೆಟ್ಟಿ ಅವರೇ ಗೆಲ್ಲುವ ಸೂಚನೆ ಇದ್ದು, ಅವರಿಗೆ ಟಿಕೆಟ್ ನೀಡದಿದ್ದರೆ ನಾವೆಲ್ಲರೂ ಕಾಂಗ್ರೆಸ್ ತ್ಯಜಿಸಿ ಪಕ್ಷೇತರರಾಗಿ ಹೋರಾಟ ಮಾಡುತ್ತೇವೆ. ಉಡುಪಿ ಜಿಲ್ಲಾದ್ಯಂತ ಕಾಂಗ್ರೆಸ್ ವಿರುದ್ಧ ಹೋರಾಟ ನಡೆಸುತ್ತೇವೆ ಎಂದರು. ತಮ್ಮ ಸ್ವಾರ್ಥಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಬಲಿಕೊಡಬೇಡಿ ಎಂದು ಕಾಂಗ್ರೆಸ್ ಕಾರ್ಯಕರ್ತರು, 'ಮೊಯ್ಲಿ ಹಟಾವೋ... ಕಾಂಗ್ರೆಸ್ ಬಚಾವೋ....,' ಎಂದು ಮೊಯ್ಲಿಗೆ ಧಿಕ್ಕಾರದ ಘೋಷಣೆಗಳನ್ನು ಕಾರ್ಯಕರ್ತರು ಕೂಗಿದರು.

ಹೆಬ್ರಿ ಗ್ರಾಪಂ ಮಾಜಿ ಅಧ್ಯಕ್ಷ ಗುಳಿಬೆಟ್ಟು ಸುರೇಶ್ ಶೆಟ್ಟಿ, ಪಕ್ಷದ ಪ್ರಮುಖರಾದ ಕಬ್ಬಿನಾಲೆ ಚಂದ್ರಶೇಖರ ಬಾಯರಿ, ಚಿರಂಜಿತ್ ಅಜಿಲ, ಜಗದೀಶ ಹೆಗ್ಡೆ, ತಾಪಂ ಸದಸ್ಯ ಸುಧಾಕರ ಶೆಟ್ಟಿ, ಬೇಳಂಜೆಯ ರೋಶನ್ ಕುಮಾರ್ ಶೆಟ್ಟಿ, ಭೂತುಗುಂಡಿ ಕರುಣಾಕರ ಶೆಟ್ಟಿ, ಸೀತಾನದಿ ಧೀರಜ್ ಶೆಟ್ಟಿ, ಗುಳ್ಕಾಡು ಭಾಸ್ಕರ ಶೆಟ್ಟಿ, ಕಾಂಗ್ರೆಸ್ ಮುಖಂಡ ಗೋಪಿನಾಥ್ ಭಟ್ ಮುನಿಯಾಲು ಸೇರಿದಂತೆ ಪಕ್ಷದ ವಿವಿಧ ಪ್ರಮುಖರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಿಕೆಟ್ ನೀಡುವ ಭರವಸೆ ಇದೆ...
ಪ್ರತಿಭಟನಾ ಸ್ಥಳಕ್ಕಾಗಮಿಸಿದ ಮುನಿಯಾಲು ಉದಯ ಶೆಟ್ಟಿ ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿ, ಇನ್ನೂ ಸಮಯ ಇದೆ. ಕಾರ್ಕಳದಲ್ಲಿ ಮತ್ತೆ ಕಾಂಗ್ರೆಸ್ ಶಾಸಕರು ಜಯಗಳಿಸಬೇಕು ಎಂಬ ಆಸೆಯಲ್ಲಿ ನಮ್ಮ ನಾಯಕರಾದ ವೀರಪ್ಪ ಮೊಯ್ಲಿ ಹಾಗೂ ಗೋಪಾಲ ಭಂಡಾರಿ ನನ್ನನ್ನು ಮತ್ತೆ ಕರೆದು ಸೀಟು ಕೊಡುತ್ತಾರೆಂಬ ಭರವಸೆ ಇದೆ. ಕಾರ್ಯಕರ್ತರು ಮತ್ತು ಅಭಿಮಾನಿಗಳು ಯಾರೂ ನಿರಾಶರಾಗಬಾರದು ಎಂದು ಮನವಿ ಮಾಡಿದರು.

ಪುತ್ರ ವ್ಯಾಮೋಹ ಬಿಡಿ, ಪಕ್ಷ ವ್ಯಾಮೋಹ ಇರಲಿ
ರಾಷ್ಟ್ರೀಯ ಮಟ್ಟದ ಕಾಂಗ್ರೆಸಿನ ಹಿರಿಯ ಪ್ರಭಾವಿ ನಾಯಕರಾದ ವೀರಪ್ಪಮೊಯ್ಲಿ ಪುತ್ರ ವ್ಯಾಮೋಹ ಬಿಟ್ಟು ಪಕ್ಷದಿಂದ ಎಲ್ಲರ ಒಮ್ಮತದ ಅಭ್ಯರ್ಥಿಯಾಗಿರುವ ಮುನಿಯಾಲು ಉದಯ ಶೆಟ್ಟಿ ಅವರಿಗೆ ಕಾರ್ಕಳದಲ್ಲಿ ಕಾಂಗ್ರೆಸ್ ಟಿಕೆಟ್ ನೀಡುವಂತೆ ಪ್ರಯತ್ನಿಸಬೇಕು ಎಂದು ಬೆಂಗಳೂರು ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಜಪ್ತಿ ಸಂತೋಷ ಕುಮಾರ್ ಶೆಟ್ಟಿ ಒತ್ತಾಯಿಸಿದರು.

ಅಭಿಮಾನಿಯಿಂದ ಆತ್ಮಾಹುತಿ ಪ್ರಯತ್ನ
ಪ್ರತಿಭಟನಾ ಸಭೆ ನಡೆಯುವ ಸಂದರ್ಭದಲ್ಲಿ ಉದಯ ಶೆಟ್ಟಿ ಅಭಿಮಾನಿ ಎನ್ನಲಾದ ಮುರತಂಗಡಿಯ ಆಸೀಫ್ ಎಂಬವರು ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆಯಿತು. ಅಲ್ಲಿದ್ದವರು ತಕ್ಷಣ ಮಧ್ಯಪ್ರವೇಶಿಸಿ ಅವರನ್ನು ತಡೆಯುವಲ್ಲಿ ಯಶಸ್ವಿಯಾದರು.
ತಾನು ಸಾಣೂರು ಮುರತಂಗಡಿ ನಿವಾಸಿಯಾಗಿದ್ದು, ಉದಯ ಕುಮಾರ್ ಶೆಟ್ಟಿ ಅವರಿಗೆ ಟಿಕೆಟ್ ಕೈತಪ್ಪಿರುವುದರಿಂದ ತೀವ್ರ ಬೇಸರವಾಗಿದ್ದು, ಇದರಿಂದ ನೊಂದು ಈ ಕೃತ್ಯಕ್ಕೆ ಮುಂದಾದೆ ಎಂದವರು ಹೇಳಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X