Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚುನಾವಣೆ: ದ.ಕ, ಕಾಸರಗೋಡು ಜಿಲ್ಲಾಡಳಿತ...

ಚುನಾವಣೆ: ದ.ಕ, ಕಾಸರಗೋಡು ಜಿಲ್ಲಾಡಳಿತ ಸಭೆ

ವಾರ್ತಾಭಾರತಿವಾರ್ತಾಭಾರತಿ18 April 2018 9:25 PM IST
share
ಚುನಾವಣೆ: ದ.ಕ, ಕಾಸರಗೋಡು ಜಿಲ್ಲಾಡಳಿತ ಸಭೆ

ಮಂಗಳೂರು, ಎ.18: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲಾಡಳಿತ ಸಭೆ ಬುಧವಾರ ಮಂಗಳೂರಲ್ಲಿ ನಡೆಯಿತು.ಮಂಗಳೂರು ವಿಶ್ವವಿದ್ಯಾನಿಲಯದ ಅತಿಥಿ ಗೃಹದಲ್ಲಿ ನಡೆದ ಈ ಸಭೆಯಲ್ಲಿ ಕಾಸರಗೋಡು ಜಿಲ್ಲಾಧಿಕಾರಿ ಜೀವನ್ ಬಾಬು ಸೇರಿದಂತೆ ಅಲ್ಲಿನ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ಮಾತನಾಡಿ, ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಹಣ ಮತ್ತು ಸರಕು ಸಾಗಣೆಯ ವೇಳೆ ಗಡಿ ಪ್ರದೇಶಗಳಲ್ಲಿ ನಿಗಾ ಇಡುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಉಭಯ ರಾಜ್ಯಗಳ ಅಧಿಕಾರಿಗಳ ನಡುವೆ ಸಮನ್ವಯತೆ ಮೂಡಿಸುವ ದೃಷ್ಟಿಯಿಂದ ಈ ಸಭೆ ಏರ್ಪಡಿಸಲಾಗಿದೆ ಎಂದು ಹೇಳಿದರು.

ಚುನಾವಣಾ ಸಂದರ್ಭದಲ್ಲಿ ಶಂಕಾಸ್ಪದವಾಗಿ ಸಾಗಿಸುವ ಸರಕು ವಾಹನಗಳನ್ನು ತಪಾಸಣೆ ನಡೆಸಲು ಉಭಯ ರಾಜ್ಯಗಳ ಗಡಿ ವ್ಯಾಪ್ತಿಯಲ್ಲಿ ತಪಾಸಣಾ ತಂಡಗಳನ್ನು ನಿಯೋಜಿಸಲಾಗುವುದು. ಚುನಾವಣಾ ದಿನದಂದು ಕೇರಳ ವ್ಯಾಪ್ತಿಯ ನಿವಾಸಿಗಳು ಕರ್ನಾಟಕದಲ್ಲಿ ಬಂದು ನಕಲಿ ಮತದಾನ ಮಾಡದಂತೆ ಎಚ್ಚರ ವಹಿಸಲಾಗಿದೆ. ಇದಲ್ಲದೆ ಅಕ್ರಮವಾಗಿ ಮರಳು, ಜಾನುವಾರು ಸಾಗಾಟ, ಹವಾಲಾ ಹಣ ಸಾಗಾಟ ಸೇರಿದಂತೆ ಅಕ್ರಮ ಚಟುವಟಿಕೆಗಳ ಮೇಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ನಿಟ್ಟಿನಲ್ಲಿ ಉಭಯ ರಾಜ್ಯಗಳ ಅಧಿಕಾರಿಗಳ ನಡುವೆ ಸಮನ್ವಯತೆ ಮೂಡಿಸಲಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರವಿಕಾಂತೇ ಗೌಡ ಮಾತನಾಡಿ, ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇರಳದ ಗಡಿ ರಸ್ತೆಗಳಲ್ಲಿ 9 ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದೆ. ಗಡಿ ಭಾಗದಲ್ಲಿ ನಕ್ಸಲ್ ಸಂಚಾರದ ಸಾಧ್ಯತೆಗಳಿರುವುದರಿಂದ ಈ ಬಗ್ಗೆಯು ಹೆಚ್ಚಿನ ಭದ್ರತೆಗೆ ಒತ್ತು ನೀಡಲಾಗಿದೆ ಎಂದರು.

ಕಾಸರಗೋಡು ಜಿಲ್ಲಾಧಿಕಾರಿ ಜೀವನ್ ಬಾಬು ಮಾತಾನಾಡಿ, ಕರ್ನಾಟಕ-ಕೇರಳ ಜಿಲ್ಲಾಡಳಿತ ನಡುವೆ ಸಮರ್ಪಕ ಮಾಹಿತಿ ವಿನಿಮಯ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್, ಆರ್.ಟಿ.ಒ., ವಾಣಿಜ್ಯ ತೆರಿಗೆ, ಅರಣ್ಯ ಮತ್ತಿತರ ಇಲಾಖೆಗಳ ನಡುವೆ ಹೆಚ್ಚಿನ ಸಮನ್ವತೆಗೆ ಸೂಚಿಸಲಾಗುವುದು. ಗಡಿ ದಾಟಿ ಚುನಾವಣೆ ಅಕ್ರಮಗಳು ಆಗದಂತೆ ಒತ್ತು ನೀಡಲಾಗುವುದು. ಕರಾವಳಿಯ ತೀರದಲ್ಲಿ ಭದ್ರತೆಯ ನಿಗಾ ವಹಿಸಲಾಗುವುದು ಎಂದರು.ಚುನಾವಣೆಯ ಹಿಂದಿನ ದಿನ ಹಾಗೂ ಚುನಾವಣಾ ದಿನದಂದು ಯಾವುದೇ ಅಕ್ರಮಗಳಿಗೆ ಕಾಸರಗೋಡು ವ್ಯಾಪ್ತಿಯಲ್ಲಿ ಅವಕಾಶ ಸಿಗದಂತೆ ನೋಡಿಕೊಳ್ಳಲಾಗುವುದು. ಅಕ್ರಮ ಮತದಾನಕ್ಕೆ ಅವಕಾಶವಾಗದಂತೆ ಕಂದಾಯ ಸಿಬ್ಬಂದಿಗಳು ಗಮನ ಹರಿಸಲಿದ್ದಾರೆ ಎಂದು ಹೇಳಿದರು.ಸಭೆಯಲ್ಲಿ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X